ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಲು ನಿರಾಕರಿಸಿದ ಫಾರೂಕ್ ಅಬ್ದುಲ್ಲಾ

| Updated By: ರಶ್ಮಿ ಕಲ್ಲಕಟ್ಟ

Updated on: Jun 19, 2022 | 6:30 PM

ದೇಶದ ಅತ್ಯುನ್ನತ ಹುದ್ದೆಗೆ ಪರಿಗಣಿಸಲ್ಪಟ್ಟಿದ್ದಕ್ಕಾಗಿ ನಾನು ಸ್ವೀಕರಿಸಿದ ಮತ್ತು ಗೌರವಿಸಿದ ಬೆಂಬಲದಿಂದ ನಾನು ಧನ್ಯನಾಗಿದ್ದೇನೆ. ಜಮ್ಮು ಮತ್ತು ಕಾಶ್ಮೀರವು ನಿರ್ಣಾಯಕ ಘಟ್ಟವನ್ನು ಹಾದುಹೋಗುತ್ತಿದೆ ಎಂದು ನಾನು ನಂಬುತ್ತೇನೆ ಮತ್ತು ಈ ಅನಿಶ್ಚಿತ ಸಮಯದಲ್ಲಿ ನನ್ನ...

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಲು ನಿರಾಕರಿಸಿದ ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
Follow us on

ದೆಹಲಿ: ನ್ಯಾಷನಲ್ ಕಾನ್ಫರೆನ್ಸ್ (National Conference) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ (Farooq Abdullah) ಅವರು ಶನಿವಾರ ತಮ್ಮ ಹೆಸರನ್ನು ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಪರಿಗಣಿಸುವುದಕ್ಕೆ ನಿರಾಕರಿಸಿದ್ದಾರೆ.”ನಿರ್ಣಾಯಕ ಘಟ್ಟವನ್ನು ದಾಟುತ್ತಿರುವ” ಜಮ್ಮು ಮತ್ತು ಕಾಶ್ಮೀರಕ್ಕೆ ಕೊಡುಗೆ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದರು. ಆದಾಗ್ಯೂ, ಮುಂದಿನ ತಿಂಗಳು ನಡೆಯುವ ಚುನಾವಣೆಗೆ ತಮ್ಮ ಹೆಸರನ್ನು ತಮ್ಮ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಗೆ ಅವರು ಧನ್ಯವಾದ ಹೇಳಿದರು. ನ್ಯಾಷನಲ್ ಕಾನ್ಫರೆನ್ಸ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಲೋಕಸಭಾ ಸದಸ್ಯರು ತಮ್ಮ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಭಾರತದ ರಾಷ್ಟ್ರಪತಿ ಹುದ್ದೆಗೆ ಸಂಭವನೀಯ  ವಿರೋಧ ಪಕ್ಷದ ಒಮ್ಮತದ  ಅಭ್ಯರ್ಥಿಯಾಗಿ ಪ್ರಸ್ತಾಪಿಸಿದ್ದಕ್ಕಾಗಿ ನನಗೆ ಗೌರವವಿದೆ ಎಂದು ಹೇಳಿದರು. ಮಮತಾ ದೀದಿ ನನ್ನ ಹೆಸರನ್ನು ಪ್ರಸ್ತಾಪಿಸಿದ ನಂತರ, ನನ್ನ ಉಮೇದುವಾರಿಕೆಗೆ ಬೆಂಬಲ ನೀಡುವುದಾಗಿ ವಿರೋಧ ಪಕ್ಷದ ನಾಯಕರಿಂದ ನನಗೆ ಹಲವಾರು ಕರೆಗಳು ಬಂದಿವೆ ಎಂದು ಅಬ್ದುಲ್ಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯ ಬಗ್ಗೆ ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಗಳು ಮತ್ತು ಕುಟುಂಬದವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ದೇಶದ ಅತ್ಯುನ್ನತ ಹುದ್ದೆಗೆ ಪರಿಗಣಿಸಲ್ಪಟ್ಟಿದ್ದಕ್ಕಾಗಿ ನಾನು ಸ್ವೀಕರಿಸಿದ ಮತ್ತು ಗೌರವಿಸಿದ ಬೆಂಬಲದಿಂದ ನಾನು ಧನ್ಯನಾಗಿದ್ದೇನೆ. ಜಮ್ಮು ಮತ್ತು ಕಾಶ್ಮೀರವು ನಿರ್ಣಾಯಕ ಘಟ್ಟವನ್ನು ಹಾದುಹೋಗುತ್ತಿದೆ ಎಂದು ನಾನು ನಂಬುತ್ತೇನೆ ಮತ್ತು ಈ ಅನಿಶ್ಚಿತ ಸಮಯದಲ್ಲಿ ನನ್ನ ಪ್ರಯತ್ನಗಳು ಅಗತ್ಯವಿದೆ ಎಂದುಅವರು ಹೇಳಿದರು.
ನನ್ನಲ್ಲಿ ಸಕ್ರಿಯ ರಾಜಕೀಯ ಇನ್ನೂ ಇದೆ. ಜಮ್ಮು ಮತ್ತು ಕಾಶ್ಮೀರ ಮತ್ತು ದೇಶದ ಸೇವೆಗೆ ಸಕಾರಾತ್ಮಕ ಕೊಡುಗೆ ನೀಡಲು ಎದುರು ನೋಡುತ್ತಿದ್ದೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಆದ್ದರಿಂದ, ನಾನು ಗೌರವಯುತವಾಗಿ ನನ್ನ ಹೆಸರನ್ನು ಪರಿಗಣನೆಯಿಂದ ಹಿಂಪಡೆಯಲು ಬಯಸುತ್ತೇನೆ ಮತ್ತು ಜಂಟಿ ವಿರೋಧದ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ನ್ಯಾಷನಲ್ ಕಾನ್ಫರೆನ್ಸ್ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ
ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ನನ್ನ ಸೇವೆಯನ್ನು ಮುಂದುವರಿಸಲು ಸಂತೋಷವಾಗಿದೆ: ಶರದ್ ಪವಾರ್
Presidential polls 2022 ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳ ಸಭೆಯಲ್ಲಿ ತೀರ್ಮಾನ
Presidential Poll: ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಹೆಸರು ಸೂಚಿಸಿದ ಎಡಪಕ್ಷಗಳು
Presidential polls: ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಬಿಸಿ ಬಿಸಿ ಚರ್ಚೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ