AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Herald case ಎರಡನೇ ಸುತ್ತಿನ ವಿಚಾರಣೆ ಮುಕ್ತಾಯ; ಮೂರನೇ ಸುತ್ತಿನ ವಿಚಾರಣೆಗೆ ಇಡಿ ಮುಂದೆ ನಾಳೆ ಹಾಜರಾಗಲಿದ್ದಾರೆ ಸೋನಿಯಾ ಗಾಂಧಿ

ಎರಡನೇ ಸುತ್ತಿನ ವಿಚಾರಣೆ ಇಂದು ನಡೆದಿದ್ದು ಮೂರನೇ ಸುತ್ತಿನ ವಿಚಾರಣೆಗಾಗಿ ಬುಧವಾರ ಮತ್ತೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಲಾಗಿದೆ.

National Herald case ಎರಡನೇ ಸುತ್ತಿನ ವಿಚಾರಣೆ ಮುಕ್ತಾಯ; ಮೂರನೇ ಸುತ್ತಿನ ವಿಚಾರಣೆಗೆ ಇಡಿ ಮುಂದೆ ನಾಳೆ ಹಾಜರಾಗಲಿದ್ದಾರೆ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 26, 2022 | 8:50 PM

Share

ದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ (National Herald case)  ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಮಂಗಳವಾರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಅವರನ್ನು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಎರಡನೇ ಸುತ್ತಿನ ವಿಚಾರಣೆ ಇಂದು ನಡೆದಿದ್ದು ಮೂರನೇ ಸುತ್ತಿನ ವಿಚಾರಣೆಗಾಗಿ ಬುಧವಾರ ಮತ್ತೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಂಗಳವಾರ ಸಂಜೆ 7 ಗಂಟೆಯ ಮೊದಲು ತನ್ನ ಹೇಳಿಕೆಯನ್ನು ದಾಖಲಿಸಿ ಇಡಿ ಕಚೇರಿಯಿಂದ ಹೊರಟಿದ್ದಾರೆ. ಕಾಂಗ್ರೆಸ್ ನಾಯಕಿ ತನ್ನ ಝೆಡ್ ಪ್ಲಸ್ ಶಸ್ತ್ರಸಜ್ಜಿತ ಭದ್ರತೆಯೊಂದಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಇಡಿ ಕಚೇರಿಯನ್ನು ತಲುಪಿದ್ದರು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಅವರೊಂದಿಗೆ ಇದ್ದರು.

ಕಾಂಗ್ರೆಸ್ ಅಧ್ಯಕ್ಷರು ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಡಿ ಕಚೇರಿಯಿಂದ ಹೊರಟು ಮಧ್ಯಾಹ್ನ 3:30ಕ್ಕೆ ಮತ್ತೆ ಹಾಜರಾಗಿದ್ದರು. ಇದು ಭೋಜನ ವಿರಾಮ ಆಗಿತ್ತು. 75ರ ಹರೆಯದ ಸೋನಿಯಾ ಅವರ ವಿಚಾರಣೆ ಮತ್ತು ಹೇಳಿಕೆಗಳ ದಾಖಲಾತಿಯು ಸಮನ್ಸ್ ಪರಿಶೀಲನೆ ಮತ್ತು ಹಾಜರಾತಿ ಶೀಟ್‌ಗೆ ಸಹಿ ಮಾಡುವುದು ಸೇರಿದಂತೆ ಆರಂಭಿಕ ಔಪಚಾರಿಕತೆಗಳ ನಂತರ ಬೆಳಿಗ್ಗೆ 11:15 ಕ್ಕೆ ಪ್ರಾರಂಭವಾಯಿತು. ಜುಲೈ 21 ರಂದು ಅವರನ್ನು ಎರಡು ಗಂಟೆಗಳ ಕಾಲ ಪ್ರಶ್ನಿಸಿದ್ದು 28 ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

Published On - 8:38 pm, Tue, 26 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ