AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು

ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 12, 2021 | 7:25 AM

Share

ದೆಹಲಿ: ಭಾರತೀಯ ಜನತಾ ಪಕ್ಷವು (BJP) ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು ₹ 252 ಕೋಟಿ ಖರ್ಚು ಮಾಡಿದೆ. ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ. ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಅಧಿಕಾರದಿಂದ ಕೆಳಗಿಳಿಸಿ, ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ನಾಯಕರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿರಲಿಲ್ಲ.

ವೆಚ್ಚದ ವಿವರಗಳನ್ನು ಬಿಜೆಪಿಯು ಚುನಾವಣಾ ಆಯೋಗಕ್ಕೆ ನೀಡಿದೆ. ₹ 252,02,71,753 ಮೊತ್ತವನ್ನು ಬಿಜೆಪಿ ಚುನಾವಣೆಗಾಗಿ ಖರ್ಚು ಮಾಡಿದೆ. ಈ ಪೈಕಿ ₹ 43.81 ಕೋಟಿಯನ್ನು ಅಸ್ಸಾಂ ಮತ್ತು ₹ 4.79 ಕೋಟಿಯನ್ನು ಪುದುಚೇರಿ ವಿಧಾನಸಭಾ ಚುನಾವಣೆಗಾಗಿ ಖರ್ಚು ಮಾಡಿದೆ.

ತಮಿಳುನಾಡಿನಲ್ಲಿ ಅಧಿಕಾರದಲ್ಲಿದ್ದ ಎಐಎಡಿಎಂಕೆಯನ್ನು ಡಿಎಂಕೆ ಅಧಿಕಾರದಿಂದ ಕೆಳಗಿಳಿಸಿತು. ತಮಿಳುನಾಡಿನಲ್ಲಿ ಶೇ 2.6ರಷ್ಟು ಮತ ಪಡೆದಿದ್ದ ಬಿಜೆಪಿ ಅಲ್ಲಿ ₹ 22.97 ಕೋಟಿ ವ್ಯಯಿಸಿತ್ತು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದ ಬಿಜೆಪಿಯು ₹ 151 ಕೋಟಿ ವ್ಯಯಿಸಿತ್ತು. ಆದರೆ ಬಿಜೆಪಿಯ ಪ್ರಯತ್ನ ಫಲ ನೀಡಿರಲಿಲ್ಲ.

ಕೇರಳದಲ್ಲಿ ಈ ಬಾರಿ ಒಂದಿಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ ಎಲ್​ಡಿಎಫ್ ವಿರುದ್ಧದ ಹೋರಾಟದಲ್ಲಿ ಅಂಥ ಯಶಸ್ಸು ಸಿಕ್ಕಿರಲಿಲ್ಲ. ಕೇರಳ ಚುನಾವಣೆಗಾಗಿ ಬಿಜೆಪಿ ₹ 29.24 ಕೋಟಿ ಖರ್ಚು ಮಾಡಿತ್ತು.

ಇದನ್ನೂ ಓದಿ: ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ; ಐವರು ಹಾಲಿ ಎಂಎಲ್​ಸಿಗಳಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್