Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಘೋಷಿಸುವ ಮೂಲಕ ನವೀನ್ ಪಟ್ನಾಯಿಕ್ ರಾಖಿ ಕಟ್ಟಿದ ಸಹೋದರಿಗೆ ಕೊಟ್ಟ ಮಾತು ಉಳಿಸಿದರು: ದ್ರೌಪದಿ ಮುರ್ಮು

ಒಡಿಶಾದ ವಿಧಾನಸಭಾ ಆವರಣದಲ್ಲಿ ಬಿಜೆಡಿ ಶಾಸಕರು ಮತ್ತು ಸಂಸದರೊಂದಿಗೆ ಸಂವಾದ ಮಾಡಿದ ಮುರ್ಮು, ಸಹೋದರಿಯಂತೆ ನಾನು ಜಗನ್ನಾಥ್(ಪಟ್ನಾಯಿಕ್) ಅವರ ಕೈಗೆ ರಾಖಿ ಕಟ್ಟಿದ್ದೆ. ಸಹೋದರಿಯಾಗಿ ನಾನು ಏನಾದರೂ ಕೇಳುವ ಮುನ್ನವೇ ಸಹೋದರ ನನಗೆ ಬೆಂಬಲ ನೀಡಿದ್ದಾರೆ

ಬೆಂಬಲ ಘೋಷಿಸುವ ಮೂಲಕ ನವೀನ್ ಪಟ್ನಾಯಿಕ್ ರಾಖಿ ಕಟ್ಟಿದ ಸಹೋದರಿಗೆ ಕೊಟ್ಟ ಮಾತು ಉಳಿಸಿದರು: ದ್ರೌಪದಿ ಮುರ್ಮು
ನವೀನ್ ಪಟ್ನಾಯಿಕ್ ಜತೆ ದ್ರೌಪದಿ ಮುರ್ಮು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 08, 2022 | 7:34 PM

ಭುವನೇಶ್ವರ್: ತಮ್ಮ ತವರು ರಾಜ್ಯವಾದ ಒಡಿಶಾದಲ್ಲಿ (Odisha) ಸಿಕ್ಕಿದ ಅಭೂತಪೂರ್ವ ಸ್ವಾಗತಕ್ಕೆ ಭಾವುಕರಾದ ರಾಷ್ಟ್ರಪತಿ ಹುದ್ದೆಗಾಗಿ ಸ್ಪರ್ಧಿಸುತ್ತಿರುವ  ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು (Droupadi Murmu), ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ರಕ್ಷಾಬಂಧನ ವೇಳೆ ನೀಡಿದ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ನವೀನ್ ಪಟ್ನಾಯಿಕ್ (Naveen Patnaik) ಮುರ್ಮು ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಯೂರ್ ಭಂಜ್ ಜಿಲ್ಲೆಯ ಬುಡಕಟ್ಟು ನಿವಾಸಿಯಾಗಿರುವ ಮುರ್ಮು ಅವರು ಪ್ರಚಾರಕ್ಕಾಗಿ ಒಡಿಶಾಗೆ ಭೇಟಿ ನೀಡಿದಾಗ ಅವರನ್ನು ರಾಜ್ಯದ ಅತಿಥಿಯಂತೆ ಸತ್ಕರಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಒಡಿಶಾದ ವಿಧಾನಸಭಾ ಆವರಣದಲ್ಲಿ ಬಿಜೆಡಿ ಶಾಸಕರು ಮತ್ತು ಸಂಸದರೊಂದಿಗೆ ಸಂವಾದ ಮಾಡಿದ ಮುರ್ಮು, ಸಹೋದರಿಯಂತೆ ನಾನು ಜಗನ್ನಾಥ್(ಪಟ್ನಾಯಿಕ್) ಅವರ ಕೈಗೆ ರಾಖಿ ಕಟ್ಟಿದ್ದೆ. ಸಹೋದರಿಯಾಗಿ ನಾನು ಏನಾದರೂ ಕೇಳುವ ಮುನ್ನವೇ ಸಹೋದರ ನನಗೆ ಬೆಂಬಲ ನೀಡಿದ್ದಾರೆ. ಒಡಿಶಾದ ಮಗಳಿಗೆ ಅವರು ನೀಡಿದ ಗೌರವಕ್ಕೆ ನಾನು ಋಣಿ ಎಂದು ಮುರ್ಮು ಹೇಳಿದ್ದಾರೆ.

ಒಡಿಶಾ ಮುಖ್ಯಮಂತ್ರಿ ಅವರು ತಮ್ಮ ನವೀನ್ ನಿವಾಸದಲ್ಲಿ ಮುರ್ಮ ಅವರಿಗೆ ಮಧ್ಯಾಹ್ನ ಆತಿಥ್ಯ ನೀಡಿದ್ದಾರೆ. ಮಧ್ಯಾಹ್ನದ ಊಟಕ್ಕೆ ಅನ್ನ, ಬೇಳೆ ಸಾರು ಜತೆ ಒಡಿಶಾದ ಖಾದ್ಯಗಳಾದ ಬೈಗನ್ ಭಾಜಾ, ಆಲೂ ಭರ್ತಾ , ಬಡೀ ಚುರಾ ಬಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ನಿವಾಸದ ಮೂಲಗಳು ಹೇಳಿವೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಮತ್ತು ಬಿಜೆಡಿಯ ಸಂಸದೀಯ ಪಕ್ಷದ ನಾಯಕ ಪಿನಾಕಿ ಮಿಶ್ರಾ ಕೂಡಾ ನವೀನ್ ನಿವಾಸದಲ್ಲಿ ಮುರ್ಮು ಅವರಿಗೆ ನೀಡಿದ ಭೋಜನಕೂಟದಲ್ಲಿ ಭಾಗಿಯಾಗಿದ್ದರು. ಒಡಿಶಾದಲ್ಲಿ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದ ಮುರ್ಮು(64) ಎಲ್ಲ ಶಾಸಕರು ನನ್ನ ಸಹೋದರ ಸಹೋದರಿಯಾಗಿದ್ದಾರೆ ಎಂದು ಹೇಳಿದ್ದಾರೆ. ನಾನು ಇಲ್ಲಿರುವ ಬಹುತೇಕರ ಜತೆ ಕೆಲಸ ಮಾಡಿದ್ದೇನೆ. ನಾನು ವಿಧಾನಸಭೆಯಿಂದ ಹೊರಹೋದ ನಂತರ ಬಂದವರು ಕೂಡಾ ನನ್ನ ಸಹೋದರ ಸಹೋದರಿಯರು. ನನಗೆ ಅವರನ್ನು ವೈಯಕ್ತಿಕವಾಗಿ ಗೊತ್ತಿಲ್ಲ ಆದರೆ ತಂತ್ರಜ್ಞಾನ ನಮ್ಮೆಲ್ಲರನ್ನೂ ಹತ್ತಿರಕ್ಕೆ ಕರೆತಂದಿದೆ. ನಾನು ಎಲ್ಲ ಸಹೋದರ ಸಹೋದರಿಯರ ಬೆಂಬಲ ಬೇಡುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾವು ಒಡಿಶಾವನ್ನು ಸುಂದರ ಮತ್ತು ಅಭಿವೃದ್ಧಿ ಹೊಂದಿದ ಪ್ರದೇಶವಾಗಿರಿಸಬೇಕು. ಮುಖ್ಯಮಂತ್ರಿ ಮತ್ತು ಎಲ್ಲ ಶಾಸಕರಲ್ಲಿ ಒಡಿಶಾದ ಅಭಿವೃದ್ಧಿಗಾಗಿ ಕೆಲಸ ಮಾಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಮುರ್ಮು ಹೇಳಿದ್ದಾರೆ.

Published On - 7:18 pm, Fri, 8 July 22

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!