AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಘೋಷಿಸುವ ಮೂಲಕ ನವೀನ್ ಪಟ್ನಾಯಿಕ್ ರಾಖಿ ಕಟ್ಟಿದ ಸಹೋದರಿಗೆ ಕೊಟ್ಟ ಮಾತು ಉಳಿಸಿದರು: ದ್ರೌಪದಿ ಮುರ್ಮು

ಒಡಿಶಾದ ವಿಧಾನಸಭಾ ಆವರಣದಲ್ಲಿ ಬಿಜೆಡಿ ಶಾಸಕರು ಮತ್ತು ಸಂಸದರೊಂದಿಗೆ ಸಂವಾದ ಮಾಡಿದ ಮುರ್ಮು, ಸಹೋದರಿಯಂತೆ ನಾನು ಜಗನ್ನಾಥ್(ಪಟ್ನಾಯಿಕ್) ಅವರ ಕೈಗೆ ರಾಖಿ ಕಟ್ಟಿದ್ದೆ. ಸಹೋದರಿಯಾಗಿ ನಾನು ಏನಾದರೂ ಕೇಳುವ ಮುನ್ನವೇ ಸಹೋದರ ನನಗೆ ಬೆಂಬಲ ನೀಡಿದ್ದಾರೆ

ಬೆಂಬಲ ಘೋಷಿಸುವ ಮೂಲಕ ನವೀನ್ ಪಟ್ನಾಯಿಕ್ ರಾಖಿ ಕಟ್ಟಿದ ಸಹೋದರಿಗೆ ಕೊಟ್ಟ ಮಾತು ಉಳಿಸಿದರು: ದ್ರೌಪದಿ ಮುರ್ಮು
ನವೀನ್ ಪಟ್ನಾಯಿಕ್ ಜತೆ ದ್ರೌಪದಿ ಮುರ್ಮು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 08, 2022 | 7:34 PM

Share

ಭುವನೇಶ್ವರ್: ತಮ್ಮ ತವರು ರಾಜ್ಯವಾದ ಒಡಿಶಾದಲ್ಲಿ (Odisha) ಸಿಕ್ಕಿದ ಅಭೂತಪೂರ್ವ ಸ್ವಾಗತಕ್ಕೆ ಭಾವುಕರಾದ ರಾಷ್ಟ್ರಪತಿ ಹುದ್ದೆಗಾಗಿ ಸ್ಪರ್ಧಿಸುತ್ತಿರುವ  ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು (Droupadi Murmu), ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ರಕ್ಷಾಬಂಧನ ವೇಳೆ ನೀಡಿದ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ನವೀನ್ ಪಟ್ನಾಯಿಕ್ (Naveen Patnaik) ಮುರ್ಮು ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಯೂರ್ ಭಂಜ್ ಜಿಲ್ಲೆಯ ಬುಡಕಟ್ಟು ನಿವಾಸಿಯಾಗಿರುವ ಮುರ್ಮು ಅವರು ಪ್ರಚಾರಕ್ಕಾಗಿ ಒಡಿಶಾಗೆ ಭೇಟಿ ನೀಡಿದಾಗ ಅವರನ್ನು ರಾಜ್ಯದ ಅತಿಥಿಯಂತೆ ಸತ್ಕರಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಒಡಿಶಾದ ವಿಧಾನಸಭಾ ಆವರಣದಲ್ಲಿ ಬಿಜೆಡಿ ಶಾಸಕರು ಮತ್ತು ಸಂಸದರೊಂದಿಗೆ ಸಂವಾದ ಮಾಡಿದ ಮುರ್ಮು, ಸಹೋದರಿಯಂತೆ ನಾನು ಜಗನ್ನಾಥ್(ಪಟ್ನಾಯಿಕ್) ಅವರ ಕೈಗೆ ರಾಖಿ ಕಟ್ಟಿದ್ದೆ. ಸಹೋದರಿಯಾಗಿ ನಾನು ಏನಾದರೂ ಕೇಳುವ ಮುನ್ನವೇ ಸಹೋದರ ನನಗೆ ಬೆಂಬಲ ನೀಡಿದ್ದಾರೆ. ಒಡಿಶಾದ ಮಗಳಿಗೆ ಅವರು ನೀಡಿದ ಗೌರವಕ್ಕೆ ನಾನು ಋಣಿ ಎಂದು ಮುರ್ಮು ಹೇಳಿದ್ದಾರೆ.

ಒಡಿಶಾ ಮುಖ್ಯಮಂತ್ರಿ ಅವರು ತಮ್ಮ ನವೀನ್ ನಿವಾಸದಲ್ಲಿ ಮುರ್ಮ ಅವರಿಗೆ ಮಧ್ಯಾಹ್ನ ಆತಿಥ್ಯ ನೀಡಿದ್ದಾರೆ. ಮಧ್ಯಾಹ್ನದ ಊಟಕ್ಕೆ ಅನ್ನ, ಬೇಳೆ ಸಾರು ಜತೆ ಒಡಿಶಾದ ಖಾದ್ಯಗಳಾದ ಬೈಗನ್ ಭಾಜಾ, ಆಲೂ ಭರ್ತಾ , ಬಡೀ ಚುರಾ ಬಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ನಿವಾಸದ ಮೂಲಗಳು ಹೇಳಿವೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಮತ್ತು ಬಿಜೆಡಿಯ ಸಂಸದೀಯ ಪಕ್ಷದ ನಾಯಕ ಪಿನಾಕಿ ಮಿಶ್ರಾ ಕೂಡಾ ನವೀನ್ ನಿವಾಸದಲ್ಲಿ ಮುರ್ಮು ಅವರಿಗೆ ನೀಡಿದ ಭೋಜನಕೂಟದಲ್ಲಿ ಭಾಗಿಯಾಗಿದ್ದರು. ಒಡಿಶಾದಲ್ಲಿ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದ ಮುರ್ಮು(64) ಎಲ್ಲ ಶಾಸಕರು ನನ್ನ ಸಹೋದರ ಸಹೋದರಿಯಾಗಿದ್ದಾರೆ ಎಂದು ಹೇಳಿದ್ದಾರೆ. ನಾನು ಇಲ್ಲಿರುವ ಬಹುತೇಕರ ಜತೆ ಕೆಲಸ ಮಾಡಿದ್ದೇನೆ. ನಾನು ವಿಧಾನಸಭೆಯಿಂದ ಹೊರಹೋದ ನಂತರ ಬಂದವರು ಕೂಡಾ ನನ್ನ ಸಹೋದರ ಸಹೋದರಿಯರು. ನನಗೆ ಅವರನ್ನು ವೈಯಕ್ತಿಕವಾಗಿ ಗೊತ್ತಿಲ್ಲ ಆದರೆ ತಂತ್ರಜ್ಞಾನ ನಮ್ಮೆಲ್ಲರನ್ನೂ ಹತ್ತಿರಕ್ಕೆ ಕರೆತಂದಿದೆ. ನಾನು ಎಲ್ಲ ಸಹೋದರ ಸಹೋದರಿಯರ ಬೆಂಬಲ ಬೇಡುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾವು ಒಡಿಶಾವನ್ನು ಸುಂದರ ಮತ್ತು ಅಭಿವೃದ್ಧಿ ಹೊಂದಿದ ಪ್ರದೇಶವಾಗಿರಿಸಬೇಕು. ಮುಖ್ಯಮಂತ್ರಿ ಮತ್ತು ಎಲ್ಲ ಶಾಸಕರಲ್ಲಿ ಒಡಿಶಾದ ಅಭಿವೃದ್ಧಿಗಾಗಿ ಕೆಲಸ ಮಾಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಮುರ್ಮು ಹೇಳಿದ್ದಾರೆ.

Published On - 7:18 pm, Fri, 8 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು