ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ: ಸರ್ಕಾರ ಆದೇಶ

ಸಿಎಂ ಸಿದ್ಧರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ: ಸರ್ಕಾರ ಆದೇಶ
ಸಿಎಂ ಸಿದ್ಧರಾಮಯ್ಯ

Updated on: Jun 01, 2023 | 8:55 PM

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ (siddaramaiah) ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡುವ ಮೂಲಕ ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ. ಚುನಾವಣಾ ನೀತಿ ತಂತ್ರಜ್ಞ ಸುನೀಲ್​​ ಕನುಗೋಳು ಅವರು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನ‌ದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

ವಿಧಾನಪರಿಷತ್ ಸದಸ್ಯ ಕೆ.‌ ಗೋವಿಂದರಾಜ್​ ಏಷ್ಯಾ ಬಾಸ್ಕೆಟ್‌ಬಾಲ್‌ನ ನೂತನ ಅಧ್ಯಕ್ಷರಾಗಿ ಮೇ ತಿಂಗಳಿನಲ್ಲೇ ನೇಮಕವಾಗಿದ್ದರು. ಈ ಹುದ್ದೆಗೇರಿದ ಭಾರತದ ಮೊದಲ ವ್ಯಕ್ತಿ ಎನ್ನುವ ಹಿರಿಮೆಗೂ ಗೋವಿಂದರಾಜು ಪಾತ್ರರಾಗಿದ್ದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ ಯೋಜನೆಗಳಿಗೆ ಅನುದಾನ ಕಡಿತಗೊಳಿಸದಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ತಂತ್ರಗಾರಿಕೆಯನ್ನು ಹೆಣೆದಿದ್ದ ಚುನಾವಣಾ ನೀತಿ ತಂತ್ರಜ್ಞ ಸುನೀಲ್​​ ಕನುಗೋಳು ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ. ಚುನಾವಣಾ ವೇಳೆ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಮಾಸ್ಟರ್​ ಮೈಂಡ್​ ಇವರೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Thu, 1 June 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us