AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರದ್ ಪವಾರ್ ಶೀಘ್ರದಲ್ಲೇ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ: ರವಿ ರಾಣಾ ಹೇಳಿಕೆ

“ಶರದ್ ಪವಾರ್ ಮಹಾರಾಷ್ಟ್ರದ ಹಿರಿಯ ನಾಯಕ ಎಂದು ದಸರಾ ಹಬ್ಬದ ಸಂದರ್ಭದಲ್ಲಿ ನಾನು ಈಗಾಗಲೇ ಹೇಳಿದ್ದೆ. ದೀಪಾವಳಿಯ ಮೊದಲು ದೊಡ್ಡ ಹೊಡೆತ ಸಂಭವಿಸಬಹುದು ಅಥವಾ ದೀಪಾವಳಿಯ ಹೊತ್ತಲ್ಲಿ ಸ್ಫೋಟವಾಗಬಹುದು. ಅಜಿತ್ ಪವಾರ್ ಶರದ್ ಪವಾರ್ ಅವರನ್ನು ಭೇಟಿ ಮಾಡಿದ ರೀತಿ, ಶೇ.99 ರಷ್ಟು ಶರದ್ ಪವಾರ್ ಪಕ್ಷಾಂತರಗೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಈಗ ಸ್ವಲ್ಪ ಶಾಕ್ ಆಗಬೇಕು'' ಎಂದು ರವಿ ರಾಣಾ ಹೇಳಿದ್ದಾರೆ.

ಶರದ್ ಪವಾರ್ ಶೀಘ್ರದಲ್ಲೇ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ: ರವಿ ರಾಣಾ ಹೇಳಿಕೆ
ಅಜಿತ್ ಪವಾರ್-ಶರದ್ ಪವಾರ್
ರಶ್ಮಿ ಕಲ್ಲಕಟ್ಟ
|

Updated on: Nov 11, 2023 | 5:30 PM

Share

ಅಮರಾವತಿ ನವೆಂಬರ್ 11: ಎನ್​​ಸಿಪಿ (NCP) ಪಕ್ಷದಲ್ಲಿ ಪ್ರಸ್ತುತ ಅನೇಕ ಘಟನೆಗಳು ನಡೆಯುತ್ತಿವೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ಡೆಂಗ್ಯೂ ಸೋಂಕು ತಗುಲಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಆದರೆ ನಿನ್ನೆ ಇದ್ದಕ್ಕಿದ್ದಂತೆ ದೊಡ್ಡ ಸುದ್ದಿ ಹೊರಬಿದ್ದಿದೆ. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ (Sharad Pawar) ಮತ್ತು ಅಜಿತ್ ಪವಾರ್ ಭೇಟಿಯಾಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಉಭಯ ನಾಯಕರ ನಡುವೆ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆಯಿತು. ಈ ಸಭೆಯ ನಂತರ ಅಜಿತ್ ಪವಾರ್ ತಕ್ಷಣವೇ ಪುಣೆಯಿಂದ ದೆಹಲಿಗೆ ತೆರಳಿದರು.

ಅಜಿತ್ ಪವಾರ್ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ಆ ಬಳಿಕ ಸಂಜೆ ಸಂಸದ ಪ್ರಫುಲ್ ಪಟೇಲ್ ನಿವಾಸದಲ್ಲಿ ಅಜಿತ್ ಪವಾರ್ ಗುಂಪಿನ ಮಹತ್ವದ ಸಭೆ ನಡೆದಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳಿಗೆ ಶಾಸಕ ರವಿ ರಾಣಾ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶರದ್ ಪವಾರ್ ಶೀಘ್ರದಲ್ಲೇ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ರವಿ ರಾಣಾ ಹೇಳಿದ್ದು, ಹಾಗಾಗಿ ಚರ್ಚೆಗಳು ಶುರುವಾಗಿವೆ.

“ಶರದ್ ಪವಾರ್ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ” ಎಂದು ರವಿ ರಾಣಾ ಹೇಳಿದ್ದಾರೆ. ಅಜಿತ್ ಪವಾರ್ ಭೇಟಿಯಿಂದಾಗಿ ಶರದ್ ಪವಾರ್ ಗೆ ಶೇ.99 ರಷ್ಟು ಮನವರಿಕೆಯಾಗಿದೆ ಎಂದು ರವಿ ರಾಣಾ ಹೇಳಿದ್ದಾರೆ. ದೀಪಾವಳಿಯ ಹೊತ್ತಿಗೆ ದೊಡ್ಡ ಬಾಂಬ್ ಸ್ಫೋಟಿಸಬಹುದು ಎಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ರವಿ ರಾಣಾ ಹೇಳಿದರು.

ಇದನ್ನೂ ಓದಿ: ಶರದ್ ಪವಾರ್ ಭೇಟಿ ನಂತರ ದೆಹಲಿಯಲ್ಲಿ ಅಮಿತ್ ಶಾ ಜತೆ ಚರ್ಚೆ ನಡೆಸಿದ ಅಜಿತ್ ಪವಾರ್

ರವಿ ರಾಣಾ ಹೇಳಿದ್ದೇನು?

“ಶರದ್ ಪವಾರ್ ಮಹಾರಾಷ್ಟ್ರದ ಹಿರಿಯ ನಾಯಕ ಎಂದು ದಸರಾ ಹಬ್ಬದ ಸಂದರ್ಭದಲ್ಲಿ ನಾನು ಈಗಾಗಲೇ ಹೇಳಿದ್ದೆ. ದೀಪಾವಳಿಯ ಮೊದಲು ದೊಡ್ಡ ಹೊಡೆತ ಸಂಭವಿಸಬಹುದು ಅಥವಾ ದೀಪಾವಳಿಯ ಹೊತ್ತಲ್ಲಿ ಸ್ಫೋಟವಾಗಬಹುದು. ಅಜಿತ್ ಪವಾರ್ ಶರದ್ ಪವಾರ್ ಅವರನ್ನು ಭೇಟಿ ಮಾಡಿದ ರೀತಿ, ಶೇ.99 ರಷ್ಟು ಶರದ್ ಪವಾರ್ ಪಕ್ಷಾಂತರಗೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಈಗ ಸ್ವಲ್ಪ ಶಾಕ್ ಆಗಬೇಕು” ಎಂದು ರವಿ ರಾಣಾ ಹೇಳಿದ್ದಾರೆ.

“ಶರದ್ ಪವಾರ್ ಶೀಘ್ರದಲ್ಲೇ ನರೇಂದ್ರ ಮೋದಿಯನ್ನು ಬೆಂಬಲಿಸುತ್ತಾರೆ. ಬಿಜೆಪಿ ಸರ್ಕಾರ ಬರುತ್ತೆ. ಶರದ್ ಪವಾರ್ ಮತ್ತು ಅಜಿತ್ ಪವಾರ್ ನಡುವಿನ ಸಂಘರ್ಷ ಕೊನೆಗೊಳ್ಳಲಿದ್ದು, ರಾಜ್ಯದಲ್ಲಿ ಬಲಿಷ್ಠ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಅದೇ ರೀತಿ ಶರದ್ ಪವಾರ್ ಬಂದರೆ ಸರ್ಕಾರಕ್ಕೆ ಇನ್ನಷ್ಟು ಬಲ ಬರಲಿದೆ. ಮಹಾರಾಷ್ಟ್ರದಲ್ಲಿ ಸಮರ್ಥ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ರವಿ ರಾಣಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ