AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai: ಬಸವರಾಜ ಬೊಮ್ಮಾಯಿ ಆಯ್ಕೆಯ ಮೂಲಕ ತನಗೆ ಹಿಡಿಶಾಪ ಹಾಕಿದ ಸ್ವಾಮೀಜಿಗಳಿಗೆ ತಿರುಗೇಟು ನೀಡಿದೆಯೇ ಬಿಜೆಪಿ?

Karnataka Politics: ಆದರೆ ಈವರೆಗೆ ಯಡಿಯೂರಪ್ಪರಿಂದ ಅಧಿಕಾರ ಕಸಿದುಕೊಂಡ ಹೈಕಮಾಂಡ್​ಗೆ ಶಾಪ ಹಾಕಿದ ಸ್ವಾಮೀಜಿಗಳಲ್ಲಿ ಸಾದರ ಲಿಂಗಾಯತ ಸಮುದಾಯದ ಯಾವುದೇ ಸ್ವಾಮೀಜಿಯೂ ಇದ್ದಿರಲಿಲ್ಲ. ಈ ಸಮುದಾಯದ ಪ್ರಮುಖರಾದ ಸಿರಿಗೆರೆ ಸ್ವಾಮೀಜಿ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕುವ ಯತ್ನದಲ್ಲಿ ಭಾಗಿಯಾಗಿರಲಿಲ್ಲ.

Basavaraj Bommai: ಬಸವರಾಜ ಬೊಮ್ಮಾಯಿ ಆಯ್ಕೆಯ ಮೂಲಕ ತನಗೆ ಹಿಡಿಶಾಪ ಹಾಕಿದ ಸ್ವಾಮೀಜಿಗಳಿಗೆ ತಿರುಗೇಟು ನೀಡಿದೆಯೇ ಬಿಜೆಪಿ?
ಸಾಂದರ್ಭಿಕ ಚಿತ್ರ
Guruganesh Bhat
| Updated By: Skanda|

Updated on: Jul 28, 2021 | 6:56 AM

Share

ಅಂತೂ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿಯ ಘೋಷಣೆಯಾಗಿದೆ. ಬಿಜೆಪಿ ಹೈಕಮಾಂಡ್ ಅಳೆದೂ ತೂಗಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಹೆಸರನ್ನು ಘೋಷಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೆಸರು ಘೋಷಣೆಯ ಹಿಂದೆ ನಾನಾ ಲಾಜಿಕ್​ಗಳು ಕೆಲಸ ಮಾಡಿರುವ ಕುರಿತು ಮಾತುಗಳು ಕೇಳಿಬರುತ್ತಿದೆ. ಮತ್ತು ಅವೆಲ್ಲವೂ ಕುತೂಹಲಕಾರಿಯೂ ಆಗಿವೆ ಎಂಬುದು ವಿಶೇಷ.

ಲಿಂಗಾಯತ ಸಮುದಾಯ (Lingayat Community) ಸದ್ಯ ಕರ್ನಾಟಕದಲ್ಲಿ ಬಿಜೆಪಿಯ ಬಹುದೊಡ್ಡ ವೋಟ್ ಬ್ಯಾಂಕ್. ಅದನ್ನು ಕಳೆದುಕೊಂಡಲ್ಲಿ ಬಿಜೆಪಿ ಯುದ್ಧಭೂಮಿಯಲ್ಲಿ  ನಿಂತ ಶಸ್ತ್ರಹೀನ ಸೈನಿಕನ ಸ್ಥಿತಿಗೆ ಬರಬಹುದಾದ ಅಪಾಯವೂ ಇತ್ತು. ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಭವಿಷ್ಯದಲ್ಲೂ ಉಳಿಸಿಕೊಳ್ಳಲು ಮತ್ತು ಬೆಳೆಸಿಕೊಳ್ಳಲು ಬಯಸಿದ ಕಾರಣಕ್ಕೇ ಬಿಜೆಪಿ ಹೈಕಮಾಂಡ್ (BJP) ಈ ನಿರ್ಣಯ ಕೈಗೊಂಡಿದೆ. ಆದರೆ ಲಿಂಗಾಯತ ಸಮುದಾಯದ ಇತರ ನಾಯಕರನ್ನು ಬಿಟ್ಟು ಬಸವರಾಜ ಬೊಮ್ಮಾಯಿ ಅವರನ್ನೇ ಏಕೆ ಆಯ್ಕೆ ಮಾಡಲಾಗಿದೆ? ಮತ್ತು ಈ ಆಯ್ಕೆಯಿಂದ ಬಿಜೆಪಿ ಹೈಕಮಾಂಡ್ ಏನನ್ನು ಹೇಳಹೊರಟಿದೆ ಎಂಬುದು ಸದ್ಯ ಕರ್ನಾಟಕದ ಮಟ್ಟಿಗೆ ಮಿಲಿಯನ್ ಡಾಲರ್ ಪ್ರಶ್ನೆ.

ಹೊಸ ಸಿಎಂ ಬಸವರಾಜ ಬೊಮ್ಮಾಯಿ ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಈ ಸಮುದಾಯ ಜನರು ರಾಜ್ಯದ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ ಶಿವಮೊಗ್ಗ, ಗದಗ, ಕೊಪ್ಪಳ, ಹಾಸನ, ಧಾರವಾಡ ಜಿಲ್ಲೆಗಳಲ್ಲಿ ಸಣ್ಣ ಮತ್ತು ದೊಡ್ಡ ಪ್ರಮಾಣದಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ವಿಶಾಲ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನ ಸಮುದಾಯದ ನಾಯಕನನ್ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ ಬಿಜೆಪಿ ಹೈಕಮಾಂಡ್.

ಇದರೆಲ್ಲದ ಜತೆಗೆ ಇನ್ನೊಂದು ಕುತೂಹಲಕಾರಿ ಅಂಶವಿದೆ. ಬಿ.ಎಸ್.ಯಡಿಯೂರಪ್ಪ ಅವರಂತೆಯೇ ಬಸವರಾಜ ಬೊಮ್ಮಾಯಿ ಅವರೂ ಸಹ ಲಿಂಗಾಯತ ಸಮುದಾಯದವರೇ. ಇಂದು ಮಧ್ಯಾಹ್ನದವರೆಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಸಮರ್ಥಿಸಿಕೊಂಡು, ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದ ಕಾರಣಕ್ಕೆ ಬಿಜೆಪಿಗೆ ಶಾಪ ಹಾಕಿದ ಸ್ವಾಮೀಜಿಗಳ ಕೋಪತಾಪ ಇಳಿಯದೇ ಇರದು. ಆದರೆ ಈವರೆಗೆ ಯಡಿಯೂರಪ್ಪರಿಂದ ಅಧಿಕಾರ ಕಸಿದುಕೊಂಡ ಹೈಕಮಾಂಡ್​ಗೆ ಶಾಪ ಹಾಕಿದ ಸ್ವಾಮೀಜಿಗಳಲ್ಲಿ ಸಾದರ ಲಿಂಗಾಯತ ಸಮುದಾಯದ ಯಾವುದೇ ಸ್ವಾಮೀಜಿಯೂ ಇದ್ದಿರಲಿಲ್ಲ. ಈ ಸಮುದಾಯದ ಪ್ರಮುಖರಾದ ಸಿರಿಗೆರೆ ಸ್ವಾಮೀಜಿ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕುವ ಯತ್ನದಲ್ಲಿ ಭಾಗಿಯಾಗಿರಲಿಲ್ಲ. ತನ್ನ ಮೇಲೆ ಆರೋಪಗಳ ಸುರಿಮಳೆಯನ್ನೇ ಮಾಡಿದ ಸ್ವಾಮೀಜಿಗಳಿಗೆ ಬಸವರಾಜ ಬೊಮ್ಮಾಯಿ ಆಯ್ಕೆಯ ಮೂಲಕ ಎರಡು ಕಾರ್ಯಗಳನ್ನು ಬಿಜೆಪಿ ಹೈಕಮಾಂಡ್ ಸಾಧಿಸಿದೆ ಎಂದು ಸ್ಪಷ್ಟವಾಗಿ ಹೇಳಬಹುದು. ಇಡೀ ಲಿಂಗಾಯತ ಸಮುದಾಯ ಸ್ವಾಮೀಜಿಗಳು ಬಿಜೆಪಿ ಹೈಕಮಾಂಡ್​ಗೆ ಸವಾಲು ಹಾಕಿದ್ದರು. ಆದರೆ ಬಸವರಾಜ ಬೊಮ್ಮಾಯಿ ಘೋಷಣೆಯಿಂದ ಲಿಂಗಾಯತ ಸಮುದಾಯದಲ್ಲಿ ಎದುರು ಬಿದ್ದಿದ್ದ ಸ್ವಾಮೀಜಿಗಳು ತಣ್ಣಗಾದಂತಿದೆ. ಬಿಜೆಪಿ ಹೈಕಮಾಂಡ್ ತನಗೆ ಹಿಡಿಶಾಪ ಹಾಕಿದ ಸ್ವಾಮೀಜಿಗಳನ್ನೂ ತಣ್ಣಗಾಗಿಸಿದೆ. ಮತ್ತು ತನಗೆ ಬೇಕಿದ್ದನ್ನೇ ಸಾಧಿಸಿಕೊಂಡಿದೆ.

ಬಸವರಾಜ ಬೊಮ್ಮಾಯಿ ಆಯ್ಕೆಯ ಹಿಂದೆ ಇನ್ನೂ ಕೆಲವು ಅಂಶಗಳು ಸಹ ಕೆಲಸ ಮಾಡಿರುವುದು ಸ್ಪಷ್ಟ. ಬಸವರಾಜ ಬೊಮ್ಮಾಯಿ ಅವರಿಗೆ ಆಡಳಿತದ ಅನುಭವವಿದೆ. ಅವರು 2 ಬಾರಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೂರು ಬಾರಿ ಶಾಸಕರಾಗಿಯೂ, ಜಲಸಂಪನ್ಮೂಲ ಇಲಾಖೆ, ಗೃಹ ಮತ್ತು ಸಂಸದೀಯ ಇಲಾಖೆಗಳನ್ನೂ ನಿಭಾಯಿಸದ ಅವರು ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ವಿವಾದವಿಲ್ಲ ಸೃಷ್ಟಿಸಿಕೊಂಡಿರಲಿಲ್ಲ. ಇವೆಲ್ಲವೂ ಬಿಜೆಪಿ ಹೈಕಮಾಂಡ್​ ಕಣ್ಣಿಗೆ ಬಸವರಾಜ ಬೊಮ್ಮಾಯಿ ಅವರ ತೂಕ ಹೆಚ್ಚಿಸಲು ಕಾರಣವಾಗಿರುವುದಂತೂ ಸತ್ಯ.

ಇದನ್ನೂ ಓದಿ: 

Basavaraj Bommai: ಯಡಿಯೂರಪ್ಪ ಉತ್ತರಾಧಿಕಾರಿ ಬಸವರಾಜ ಬೊಮ್ಮಾಯಿ, ಹೋರಾಟದ ಹಾದಿಯಲ್ಲಿ ಅರಳಿದ ನಾಯಕ

ಚಿತ್ರನೋಟ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದುಕಿನ ಮಹತ್ವದ ಕ್ಷಣಗಳು

(New Chief Minister Basavaraj Bommai Did the BJP hits Lingayat Community Swamijis an analysis)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ