AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಬೇಕಾದ ಖಾತೆ ಸಿಕ್ಕಿಲ್ಲ, 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ: ನೂತನ ಸಚಿವ ಎಂಟಿಬಿ ನಾಗರಾಜ್

New Minister MTB Nagaraj : ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.

ನನಗೆ ಬೇಕಾದ ಖಾತೆ ಸಿಕ್ಕಿಲ್ಲ, 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ: ನೂತನ ಸಚಿವ ಎಂಟಿಬಿ ನಾಗರಾಜ್
ಎಂಟಿಬಿ ನಾಗರಾಜ್
TV9 Web
| Edited By: |

Updated on:Aug 07, 2021 | 4:01 PM

Share

ಬೆಂಗಳೂರು: ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ನೂತನ ಸಚಿವ ಎಂಟಿಬಿ ನಾಗರಾಜ್ ಅಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಖಾತೆಯನ್ನು ನೀಡಿದ್ದರು. ಆದರೆ ಈ ಖಾತೆಯ ನೀಡಿರುವುದು ತಮಗೆ ಸಮಾಧಾನ ತಂದಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಸಹ  ಅಸಮಾಧಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸಚಿವರಿಗೆ ಖಾತೆ ಹಂಚಿದ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಕೇಳಿದ ಖಾತೆ ನೀಡದಿರುವುದು ನನಗೆ ಅಸಮಾಧಾನ ಉಂಟುಮಾಡಿದೆ. ಕೇಳಿದ ಖಾತೆ ಏಕೆ ನೀಡಲಿಲ್ಲ ಅನ್ನೋದು ನನಗೆ ತಿಳಿಸಬೇಕು. ಸಿಎಂ ಬೊಮ್ಮಾಯಿರನ್ನು ಭೇಟಿಯಾಗಿ ಮನವಿ ಮಾಡುವೆ. ನನಗೆ ಅರ್ಹತೆ ಇಲ್ವಾ?, ನಾನು ಭ್ರಷ್ಟಾಚಾರ ಮಾಡಿದ್ದೀನಾ? ನನಗೆ ಸಾಮರ್ಥ್ಯ ಇಲ್ವಾ? ನಾನೇನು ಅನ್‌ ಫಿಟ್ ಇದೀನಾ? ಎಂದು ಕೇಳುವೆ. ಅವರು ನೀನು ನಾಲಾಯಕ್ ಅಂತ ಅನ್ನೋದನ್ನಾದ್ರೂ ಹೇಳಲಿ. ಸರ್ಕಾರ ಬರಲಿಕ್ಕೆ ಕಾರಣವಾದವರಲ್ಲಿ ನಾನೂ ಮೊದಲಿಗ. ಮೊದಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ನಾನೇ. ನಾನು ರಾಜೀನಾಮೆ ನೀಡಿದಾಗ ಯಾರೂ ಕೊಟ್ಟಿರಲಿಲ್ಲ. ನಾನು ಕೇಳಿದ ಖಾತೆ ನನಗೆ ಮತ್ತು ಸಿಎಂಗೆ ಮಾತ್ರ ಗೊತ್ತು. ಕೇಳಿದ ಖಾತೆ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಅವರು ಬಳ್ಳಾರಿ ನಗರದಲ್ಲಿ ಎಚ್ಚರಿಕೆ ನೀಡಿದರು.

ಸಚಿವ ಆನಂದ್ ಸಿಂಗ್ ಅಸಮಧಾನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ‘ಎಲ್ಲರಿಗೂ ಕೇಳಿದ ಖಾತೆ ನೀಡಲು ಆಗಲ್ಲ. ನಾಳೆ ಸಚಿವ ಆನಂದ್ ಸಿಂಗ್ ಜತೆ ಚರ್ಚೆ ಮಾಡುತ್ತೇನೆ. ಸಂಪುಟ ರಚನೆಯಾದಾಗ ಅಸಮಾಧಾನ ಸಹಜ’ ಎಂದು ತಿಳಿಸಿದರು.

ಇದನ್ನೂ ಓದಿ: 

29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ

(New Minister MTB Nagaraj says I dont get the ministry I want will make a decision in 2 to 3 days)

Published On - 3:56 pm, Sat, 7 August 21

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್