AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Opposition Party Meet: ಪ್ರತಿಪಕ್ಷಗಳ ಮುಂದಿನ ಸಮಾವೇಶ ಬೆಂಗಳೂರಿನಲ್ಲಿ; ಶರದ್ ಪವಾರ್ ಘೋಷಣೆ

ಪ್ರತಿಪಕ್ಷಗಳ ಮುಂದಿನ ಸಮಾವೇಶ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಗುರುವಾರ ಘೋಷಿಸಿದ್ದಾರೆ.

Opposition Party Meet: ಪ್ರತಿಪಕ್ಷಗಳ ಮುಂದಿನ ಸಮಾವೇಶ ಬೆಂಗಳೂರಿನಲ್ಲಿ; ಶರದ್ ಪವಾರ್ ಘೋಷಣೆ
ಬಿಹಾರದ ಪಟ್ನಾದಲ್ಲಿ ನಡೆದಿದ್ದ ಪ್ರತಿಪಕ್ಷಗಳ ಸಭೆImage Credit source: ANI
ಗಣಪತಿ ಶರ್ಮಾ
|

Updated on:Jun 29, 2023 | 5:23 PM

Share

ನವದೆಹಲಿ: ಪ್ರತಿಪಕ್ಷಗಳ ಮುಂದಿನ ಸಮಾವೇಶ ಕರ್ನಾಟಕದ (Karnataka) ರಾಜಧಾನಿ ಬೆಂಗಳೂರಿನಲ್ಲಿ (Bengaluru) ಜುಲೈ 13 ರಂದು ನಡೆಯಲಿದೆ ಎಂದು ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ (Sharad Pawar) ಗುರುವಾರ ಘೋಷಿಸಿದ್ದಾರೆ. ಈ ಹಿಂದಿನ ಪ್ರತಿಪಕ್ಷಗಳ ಸಮಾವೇಶ ಬಿಹಾರದ ಪಟ್ನಾದಲ್ಲಿ ಜೂನ್ 23ರಂದು ನಡೆದಿತ್ತು. 16 ರಾಜಕೀಯ ಪಕ್ಷಗಳು ಭಾಗವಹಿಸಿದ್ದವು. ಪಾಟ್ನಾದಲ್ಲಿ ನಡೆದಿದ್ದ ವಿರೋಧ ಪಕ್ಷಗಳ ಮೊದಲ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ಒಗ್ಗಟ್ಟಿನ ಕಾರ್ಯತಂತ್ರ ರೂಪಿಸಲು ಮುಂದಿನ ಸಭೆಯನ್ನು ಶಿಮ್ಲಾದಲ್ಲಿ ನಡೆಸಲಾಗುವುದು ಎಂದು ಘೋಷಿಸಿದ್ದರು.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮಾರ್ಗಸೂಚಿಯನ್ನು ರೂಪಿಸಲು 16 ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ಸೇರಿದ್ದವು.

ನಾಲ್ಕು ಗಂಟೆಗಳ ಕಾಲ ನಡೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ನಡುವೆ ಮಾತಿನ ಚಕಮಕಿ ನಡೆದಿತ್ತು. ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರ ಸರ್ಕಾರದ ವಿವಾದಾತ್ಮಕ ಸುಗ್ರೀವಾಜ್ಞೆಯನ್ನು ಸಾರ್ವಜನಿಕವಾಗಿ ಖಂಡಿಸದೇ ಇದ್ದರೆ ಕಾಂಗ್ರೆಸ್ ಒಳಗೊಂಡಿರುವ ಭವಿಷ್ಯದ ಪ್ರತಿಪಕ್ಷಗಳ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಎಎಪಿ ಹೇಳಿತ್ತು.

ಇದನ್ನೂ ಓದಿ: ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಅಂತ್ಯ; 2024ರ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುತ್ತೇವೆ ಎಂದ ನಾಯಕರು

ಪಾಟ್ನಾದಲ್ಲಿ ನಡೆದಿದ್ದ ಸಭೆಯಲ್ಲಿ ಪ್ರಧಾನಿ ಹುದ್ದೆಯ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಪವಾರ್ ಇತ್ತೀಚೆಗೆ ಹೇಳಿದ್ದರು. ಸಭೆಯು ಹಣದುಬ್ಬರ, ನಿರುದ್ಯೋಗ ಮತ್ತು ದೇಶದ ಕೆಲವು ಭಾಗಗಳಲ್ಲಿ ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಉದ್ದೇಶಪೂರ್ವಕ ಸಂಚುಗಳು ಹಾಗೂ ಇತ್ಯಾದಿ ವಿಷಯಗಳ ಮೇಲೆ ಕೇಂದ್ರೀಕರಿಸಿತ್ತು ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.

ಪಾಟ್ನಾದಲ್ಲಿ ನಡೆದಿದ್ದ ವಿರೋಧ ಪಕ್ಷದ ಸಮಾವೇಶವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯೋಜಿಸಿದ್ದರು. ನಂತರ ಬಿಡುಗಡೆ ಮಾಡಲಾದ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಪಕ್ಷಗಳು ಸಾಮಾನ್ಯ ಕಾರ್ಯಸೂಚಿಯಲ್ಲಿ ಮತ್ತು ರಾಜ್ಯವಾರು ಕಾರ್ಯತಂತ್ರದೊಂದಿಗೆ ಚುನಾವಣೆಯನ್ನು ಎದುರಿಸುವುದಾಗಿ ಹೇಳಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Thu, 29 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ