AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಜಯಂತಿಯಲ್ಲಿ ಡಿಕೆ ಶಿವಕುಮಾರ್-ಅಶ್ವತ್ಥ್ ನಾರಾಯಣ ಮುಖಾಮುಖಿ, ಪರಸ್ಪರ ಬೈದಾಡಿಕೊಳ್ಳದಂತೆ ಶ್ರೀಗಳಿಂದ ಕಿವಿಮಾತು

ರಾಜಕೀಯ ಬದ್ಧ ವೈರಿಗಳಾದ ಡಿಕೆ ಶಿವಕುಮಾರ್ ಹಾಗೂ ಡಾ ಅಶ್ವತ್ಥ್ ನಾರಾಯಣ ಅವರು ಕೆಂಪೇಗೌಡ ಜಯಂತಿಯಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಇಬ್ಬರು ನಾಯಕರಿಗೆ ನಿರ್ಮಲಾನಂದನಾಥ ಸ್ವಾಮೀಜಿ ಕಿವಿ ಮಾತೊಂದನ್ನು ಹೇಳಿದ್ದಾರೆ.

ಕೆಂಪೇಗೌಡ ಜಯಂತಿಯಲ್ಲಿ ಡಿಕೆ ಶಿವಕುಮಾರ್-ಅಶ್ವತ್ಥ್ ನಾರಾಯಣ ಮುಖಾಮುಖಿ, ಪರಸ್ಪರ ಬೈದಾಡಿಕೊಳ್ಳದಂತೆ  ಶ್ರೀಗಳಿಂದ ಕಿವಿಮಾತು
ರಮೇಶ್ ಬಿ. ಜವಳಗೇರಾ
|

Updated on: Jun 27, 2023 | 11:17 AM

Share

ಬೆಂಗಳೂರು: ರಾಜಕೀಯ ಬದ್ಧ ವೈರಿಗಳಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK SHivakumar) ಹಾಗೂ ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ (Dr CN Ashwath Narayan) ಅವರು ಇಂದು (ಜೂನ್ 27) ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮುಖಾಮುಖಿಯಾದರು. ಬೆಂಗಳೂರಿನ(Bengaluru) ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ 514ನೇ ಕೆಂಪೇಗೌಡ ಜಯಂತಿಯಲ್ಲಿ ಮುಖಾಮುಖಿಯಾದ ಉಭಯ ನಾಯಕರು ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತಿದ್ದು ಈ ವೇಳೆ ಪರಸ್ಪರ ರಾಜಕೀಯವಾಗಿ ಬೈದಾಡಿಕೊಳ್ಳದಂತೆ ಡಿಕೆ ಶಿವಕುಮಾರ್ ಹಾಗೂ ಅಶ್ವತ್ಥ್ ನಾರಾಯಣ ಅವರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: Karnataka News Live Updates:ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಮೋದಿ

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಶ್ವತ್ಥ್ ನಾರಾಯಣ, ನಾನು ಯಾವುದೇ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿಲ್ಲ​. ನಾಡಿಗೆ ಒಳಿತು ಮಾಡಬೇಕೆಂದು ರಾಜಕೀಯಕ್ಕೆ ಬಂದಿದ್ದೇವೆ. ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ವೈಮನಸ್ಸು ಇಲ್ಲ. ರಾಜಕೀಯದಲ್ಲಿ ಸುಮ್ಮನೆ ಇದ್ದರೆ ಆಗುತ್ತಾ. ಪ್ರೇಕ್ಷಕರು ಅಂತಾರೆ, ಅದಕ್ಕೆ ಏನು ಹೇಳಬೇಕೋ ಹೇಳಿದ್ದೇನೆ ಎಂದರು.

ರಾಮನಗರಕ್ಕೆ ಯಾವ ಸರ್ಕಾರ ಕೊಡದಷ್ಟು ಯೋಜನೆ ಕೊಟ್ಟಿದ್ದೇವೆ. ರಾಮನಗರ ನನ್ನ ಪೂರ್ವಿಕರ ಕರ್ಮಭೂಮಿ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಮುಂದಿನ ದಿನಗಳಲ್ಲಿ ಎಲ್ಲಾ ಇತಿಹಾಸವೂ ಗೊತ್ತಾಗಲಿದೆ. ಕೆಂಪೇಗೌಡರು ಮಾಡಿದ 5% ಅಭಿವೃದ್ಧಿಯನ್ನ ಈ ಸರ್ಕಾರ ಮಾಡಲಿ. ನಾವು ರಾಮನಗರ ಅಭಿವೃದ್ಧಿ ಮಾಡಿದ್ದೇವೆ ಎಂದು ಮತ್ತೆ ಪರೋಕ್ಷವಾಗಿ ಡಿಕೆ ಬ್ರದರ್ಸ್​ ವಿರುದ್ಧ ಕಿಡಿಕಾರಿದರು.

ಡಿಕೆ ಬ್ರದರ್ಸ್ ಹಾಗೂ ಅಶ್ವತ್ಥ್ ನಾರಾಯಣ ನಡುವೆ ರಾಜಕೀಯ ಗುದ್ದಾಟಗಳು ನಡೆದಿದ್ದವು. ಯಾರೋ ಅದು ಗಂಡಸು ಎಂದು ಪರೋಕ್ಷವಾಗಿ ಅಶ್ವತ್ಥ್ ನಾರಾಯಣ ಅವರು ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್​ ವಿರುದ್ಧ ಗುಡುಗಿದ್ದರು. ಅದಾಗಿನಿಂದ ರಾಮನಗರದ ಜಿಲ್ಲಾ ಉಸ್ತುವಾರಿಯಾಗಿದ್ದ ಅಶ್ವತ್ಥ್ ನಾರಾಯಣ ಮತ್ತು ಡಿಕೆ ಬ್ರದರ್ಸ್​ ಮಧ್ಯೆ ಮುಸುಕಿನ ಗುದ್ದಾಟ, ಪರಸ್ಪರ ಬಹಿರಂಗ ಆರೋಪ-ಪ್ರತ್ಯಾರೋಪಗಳು ನಡೆಯುಲ್ಲೇ ಇದ್ದಾವೆ. ಹೀಗಾಗಿ ಉಭಯ ನಾಯಕರಲ್ಲಿ ವೈರತ್ವ ಬೆಳೆದಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ