AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ರಾಜಕೀಯ ಭವಿಷ್ಯದಿಂದ ಯಾವುದೇ ಮೈತ್ರಿಕೂಟ ಸೇರದಿರಲು ಜೆಡಿಎಸ್​ ನಿರ್ಧಾರ

ಹಲವು ರಾಜಕೀಯ ಲೆಕ್ಕಚಾರಗಳೊಂದಿಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದ ಜೆಡಿಎಸ್​ ಒಂದು ಹೆಜ್ಜೆ ಹಿಂದೆ ಸರಿದಿದೆ. ಶಾಸಕರಲ್ಲಿಒಮ್ಮತ ಮೂಡಿ ಬಾರದ ಹಿನ್ನೆಲೆಯಲ್ಲಿ ಎನ್​ಡಿಎ ಮೈತ್ರಿಕೂಟದಿಂದ ಸದ್ಯಕ್ಕೆ ದೂರ ಉಳಿಯಲು ದೇವೇಗೌಡ ತೀರ್ಮಾನಿಸಿದ್ದಾರೆ.

ಮುಂದಿನ ರಾಜಕೀಯ ಭವಿಷ್ಯದಿಂದ ಯಾವುದೇ ಮೈತ್ರಿಕೂಟ ಸೇರದಿರಲು ಜೆಡಿಎಸ್​ ನಿರ್ಧಾರ
ದೇವೇಗೌಡ, ಕುಮಾರಸ್ವಾಮಿ
Sunil MH
| Edited By: |

Updated on: Jul 21, 2023 | 10:16 AM

Share

ಮುಖ್ಯಾಂಶಗಳು

  • ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್ ಶಾಸಕರಲ್ಲಿ ಮೂಡದ ಒಮ್ಮತ
  • ಎನ್​ಡಿಎ ಮೈತ್ರಿಕೂಟದಿಂದ ಸದ್ಯಕ್ಕೆ ದೂರ ಉಳಿಯಲು ನಿರ್ಧಾರ
  • ಮುಂದಿನ ರಾಜಕೀಯ ಭವಿಷ್ಯದಿಂದ ಯಾರ ಜೊತೆ ಮೈತಿ ಬೇಡ ಅಂದಿರೋ ದೇವೆಗೌಡ್ರು

ಬೆಂಗಳೂರು, (ಜುಲೈ 21): ಬಿಜೆಪಿ ಜೊತೆ ಮೈತ್ರಿಗೆ (JDS-BJP Alliance) ಜೆಡಿಎಸ್ ಶಾಸಕರಲ್ಲಿಒಮ್ಮತ ಮೂಡಿ ಬಾರದ ಹಿನ್ನೆಲೆಯಲ್ಲಿ ಎನ್​ಡಿಎ (NDA) ಮೈತ್ರಿಕೂಟದಿಂದ ಸದ್ಯಕ್ಕೆ ದೂರ ಉಳಿಯಲು ದಳಪತಿಗಳು ತೀರ್ಮಾನಿಸಿದ್ದಾರೆ. ನಿನ್ನೆ(ಜುಲೈ 20) ಸಂಜೆ ಬೆಂಗಳೂರಿನಲ್ಲಿ(Bengaluru) ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಒಪ್ಪಂದ ರಾಜಕೀಯ ಬೇಡ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರಿಂದ ಮುಂದಿನ ರಾಜಕೀಯ ಭವಿಷ್ಯದಿಂದ ಯಾರ ಜೊತೆ ಮೈತಿ ಬೇಡ ಎಂದು ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೆಗೌಡ(HD Devegowda )ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: JDS-BJP Alliance: ಮುಂದಿಟ್ಟ ಹೆಜ್ಜೆ ಹಿಂತೆಗೆದುಕೊಂಡ ದಳಪತಿ, ಕಮಲ-ದಳ ದೋಸ್ತಿ ವಿಳಂಬ?

ನಾವು ಯಾರ ಜೊತೆ‌ ಒಪ್ಪಂದ ಮಾಡಿಕೊಳ್ಳೊದು ಬೇಡ. ಸ್ವತಂತ್ರವಾಗಿ ಚುನಾವಣೆಯಲ್ಲಿ ಹೋರಾಟ ಮಾಡೋಣ. ಒಪ್ಪಂದ ಮಾಡಿಕೊಂಡರೆ ಲೋಕಸಭಾ ಚುನಾವಣೆಗೆ ಬೇರೆಯ ಸಂದೇಶ ರವಾನೆ ಆಗುತ್ತದೆ. ಮೈತ್ರಿ ಕೂಟಕ್ಕೆ ಸೇರಿದರೆ ಕೆಲ ಸಮುದಾಯಗಳ ನೇರ ನೇರ ವಿರೋಧ ಕಟ್ಟಿಕೊಳ್ಳಬೇಕು. ಅದು ಸ್ಥಳೀಯವಾಗಿ ಪಕ್ಷ ಸಂಘಟನೆಗೆ ಕಷ್ಟವಾಗುತ್ತದೆ. ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಬಹುದು. ಹೀಗಾಗಿ ಮೈತ್ರಿಯ ವಿಚಾರವಾಗಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎನ್ನುವ ಅಭಿಪ್ರಾಯಗಳು ಸಭೆಯಲ್ಲಿ ವ್ಯಕ್ತವಾಗಿವೆ.

ಈ ಹಿಂದೆ ಕಾಂಗ್ರೆಸ್ ಜೊತೆ ನೇರ ಒಪ್ಪಂದ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನಕ್ಕೆ ಮಾತ್ರ ಸೀಮಿತವಾದೆವು. ಮೈತ್ರಿ ಬದಲು ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಎರಡರಿಂದ ಮೂರು ಸ್ಥಾನ ಗೆಲ್ಲಲು ಅವಕಾಶವಾಗುತ್ತದೆ. ಬಿಜೆಪಿ ಜೊತೆ ಕೈಜೋಡಿಸಿದರೆ ಕಾಂಗ್ರೆಸ್​ಗೆ ಅಸ್ತ್ರವಾದಂತಾಗುತ್ತದೆ. ಮೈತ್ರಿಯ ವಿಚಾರವನ್ನೇ ಲೋಕಸಭಾ ಚುನಾವಣೆಯಲ್ಲಿ ಅಸ್ತ್ರವಾಗಿ ಬಳಸಿಕೊಳ್ಳುತ್ತದೆ. ಇದರಿಂದ ಹಳೆ ಮೈಸೂರು ಭಾಗದಲ್ಲಿ ಮತ್ತೆ ಜೆಡಿಎಸ್ ಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು ಎಂದು ಕೆಲಸ ಶಾಸಕರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವರಿಷ್ಠರ ಮುಂದೆ ತಿಳಿಸಿದ್ದಾರೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿರುವ ದೇವೇಗೌಡ ಎನ್​ಡಿಎ ಮೈತ್ರಿಕೂಟ ಸೇರಲು ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಆಡಳಿತ ಪಕ್ಷ ಕಾಂಗ್ರೆಸ್​ ವಿರುದ್ಧ ಸಿಡಿದೆದ್ದಿದೆ. ಪ್ರಯೊಂದು ವಿಚಾರದಲ್ಲೂ ಸಹ ಕುಮಾರಸ್ವಾಮಿ ಅವರು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದು, ಮೈತ್ರಿ ಮಾಡಿಕೊಳ್ಳುವ ಉತ್ಸಹದಲ್ಲಿದ್ದಾರೆ. ಆದ್ರೆ ನಿನ್ನೆ ನಡೆದ ಶಾಸಕಾಂಗ ಸಭೆಯಲ್ಲಿ ಮೈತಿಯ ವಿಚಾರವಾಗಿ ಸದ್ಯಕ್ಕೆ ಶಾಸಕರಿಂದ ಸಂಪೂರ್ಣ ಒಮ್ಮತ ಇಲ್ಲದ ಕಾರಣ ದೇವೇಗೌಡ್ರು ಬಿಜೆಪಿಯೊಂದಿಗೆ ಮೈತ್ರಿಯಿಂದ ಸದ್ಯಕ್ಕೆ ದೂರ ಉಳಿಯುವ ತೀರ್ಮಾನಕ್ಕೆ ಬಂದಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್