AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್​​ ಬಗ್ಗೆ ಯಾವುದೇ ಅಸಮಾಧಾನ ಇಲ್ಲ: ಮೈತ್ರಿಗೆ ಬೆಂಬಲ ಸೂಚಿಸಿದ ಜಫ್ರುಲ್ಲಾ ಖಾನ್

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ​​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್​ ಪಕ್ಷದ ಅಲ್ಪಸಂಖ್ಯಾತ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೆಲವರು ಪಕ್ಷದಿಂದ ಹೊರಬಂದಿದ್ದಾರೆ. ಆದರೆ ಇದರ ಮಧ್ಯೆ JDS​​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ-ಜೆಡಿಎಸ್​​ ಬಗ್ಗೆ ಯಾವುದೇ ಅಸಮಾಧಾನ ಇಲ್ಲ: ಮೈತ್ರಿಗೆ ಬೆಂಬಲ ಸೂಚಿಸಿದ ಜಫ್ರುಲ್ಲಾ ಖಾನ್
JDS​​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್
ಸುನಿಲ್​ ಎಮ್​ ಹೆಚ್​
| Edited By: |

Updated on: Oct 09, 2023 | 3:50 PM

Share

ಬೆಂಗಳೂರು, ಅಕ್ಟೋಬರ್​​ 09: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ​​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್​ ಪಕ್ಷದ ಅಲ್ಪಸಂಖ್ಯಾತ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೆಲವರು ಪಕ್ಷದಿಂದ ಹೊರಬಂದಿದ್ದಾರೆ. ಆದರೆ ಇದರ ಮಧ್ಯೆ JDS​​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಬೆಂಬಲ ಸೂಚಿಸಿದ್ದಾರೆ. ನಗರದಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್​​ ಮೈತ್ರಿ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ರಾಜಕಾರಣ ನಿಂತ ನೀರಲ್ಲ, ಹೀಗಾಗಿ ವರಿಷ್ಠರು ಈ ನಿರ್ಧಾರ ಕೈಗೊಂಡಿದ್ದಾರೆ. ಜಾತ್ಯತೀತ ತತ್ವದ ಜೊತೆಗೆ ರಾಜ್ಯದ ಹಿತದೃಷ್ಟಿಯಿಂದ ಮೈತ್ರಿ ಮಾಡಿಕೊಳ್ಳಲಾಗಿದೆ. ಕೆಲ ಮುಸ್ಲಿಂ ನಾಯಕರಿಗೆ ಅಸಮಾಧಾನ ಆಗಿರಬಹುದು, ಅದನ್ನ ಸರಿಪಡಿಸುತ್ತೇವೆ. ಆದರೆ ಮುಸ್ಲಿಂ ನಾಯಕರು ಜೆಡಿಎಸ್​ನಿಂದ ದೂರ ಹೋಗುವುದಿಲ್ಲ ಎಂದರು.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ: ಕಲಬುರಗಿಯಲ್ಲಿ JDS ಮುಸ್ಲಿಂ ಮುಖಂಡರು, ಕಾರ್ಯಕರ್ತರ ಸಭೆ ಅಂತ್ಯ

ಬಿಜೆಪಿ-JDS​​ ಮೈತ್ರಿ ಬಗ್ಗೆ ಮಾತಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ. ಕಾಂಗ್ರೆಸ್​​​​​​ಗೆ ಜಾತ್ಯತೀತ ಅಂದರೆ ಗೊತ್ತಿದೆಯಾ? ಶಿವಸೇನೆ ಜೊತೆ ಕಾಂಗ್ರೆಸ್ ಕೈಜೋಡಿಸಿಲ್ಲವೇ ಅದು ಜಾತ್ಯತೀತನಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ-ಜೆಡಿಎಸ್​​ ಮೈತ್ರಿ ಬಗ್ಗೆ ನಾಯಕರಲ್ಲಿ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.

ಮೈತ್ರಿ ವಿಚಾರವಾಗಿ JDSನಲ್ಲಿ ಅಸಮಾಧಾನದ ಹೆಚ್ಚಾಗಿದ್ದರಿಂದ ಇತ್ತೇಚೆಗೆ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರ ಜತೆ ಸಭೆ ಮಾಡಿದ್ದರು. ಮೈತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ದೇವದುರ್ಗ ಶಾಸಕ ಕರೆಮ್ಮ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಮೈತ್ರಿ ಸರ್ಕಾರ ಪತನವಾಗಲು ಡಿಕೆ ಶಿವಕುಮಾರ್​ ಕಾರಣ ಎಂಬ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ತಿರುಗೇಟು

ಸಿ.ಎಂ ಇಬ್ರಾಹಿಂ ಹಾದಿಯಾಗಿ ಶರಣಗೌಡ ಕಂದಕೂರ್ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರು ಸಭೆಯಿಂದ ದೂರ ಉಳಿದಿದ್ದರು. ಹಾಗಾಗಿ ಖುದ್ದು ದೇವೇಗೌಡರೇ ಇಬ್ರಾಹಿಂಗೆ ಕರೆ ಮಾಡಿ ಸಭೆಗೆ ಆಗಮಿಸುವಂತೆ ಆಹ್ವಾನಿಸಿದ್ದರು. ಆದರೆ ಒಂದು ಕಾಲು ಆಚೆ ಇಟ್ಟಿರುವ ಇಬ್ರಾಹಿಂ, ಮುಂದಿನ ದಿನದಲ್ಲಿ ಪ್ರತ್ಯೇಕವಾಗಿ ಮಾತನಾಡುವುದಾಗಿ ಹೇಳಿದ್ದರು.

ಮೈತ್ರಿಯಿಂದ ಬಹಳಷ್ಟು ಜನ ನೊಂದಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಜ್ಯಾತ್ಯಾತೀತ ತತ್ವ ನಂಬಿ ನಾವೆಲ್ಲಾ ಜೆಡಿಎಸ್​​ನಲ್ಲಿದ್ದೆವು. ಆದರೆ ದಿಢೀರನೆ ಇದೀಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ನಾಸೀರ್ ಹುಸೇನ್ ಇತ್ತೀಚೆಗೆ ಅಸಮಾಧಾನ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ