AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸದ್ಯಕ್ಕೆ ಸಿಎಂ, ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್

ನಾಯಕತ್ವ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಕೇವಲ ಗಾಳಿ ಸುದ್ದಿ ಹಬ್ಬಿಸುತ್ತಿದೆ ಎಂದು ಅರುಣ್ ಸಿಂಗ್ ಹೇಳಿದರು

ಕರ್ನಾಟಕದಲ್ಲಿ ಸದ್ಯಕ್ಕೆ ಸಿಎಂ, ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್
ಅರುಣ್ ಸಿಂಗ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 08, 2021 | 9:07 PM

Share

ಬೆಂಗಳೂರು: ಕರ್ನಾಟಕದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಅಥವಾ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಿಸುವ ಆಲೋಚನೆಯಿಲ್ಲ ಎಂದು ಬಿಜೆಪಿ (BJP) ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಹೇಳಿದರು. ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದ ಅರುಣ್​ ಸಿಂಗ್ ರಾಜ್ಯದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಕೇವಲ ಗಾಳಿ ಸುದ್ದಿ ಹಬ್ಬಿಸುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಾಡಲು ಬೇರೆ ಕೆಲಸವಿಲ್ಲದೆ, ವಿನಾ ಕಾರಣ ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ​ಪಕ್ಷದ ಸಂಘಟನೆಗಾಗಿ ನಾನು ಬೆಂಗಳೂರಿಗೆ ಬಂದಿದ್ದೇನೆ. ನಾಳೆ ಇಡೀ‌ ದಿನ ಸಭೆ, ಮುಂದಿನ ಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ನುಡಿದರು.

ಸಿಂಧಗಿಯಲ್ಲಿ ದೊಡ್ಡ ಮಟ್ಟದ ಅಂತರದಿಂದ ಗೆದ್ದಿದ್ದೇವೆ, ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದೇವೆ. ಆದರೆ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತೇವೆ. ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ ಎಂದರು. ಬಿಟ್​ಕಾಯಿಲ್ ಹಗರಣದಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ. ಕಾಂಗ್ರೆಸ್​ನ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರು ಆಧಾರರಹಿತವಾಗಿ ಆರೋಪ ಮಾಡುತ್ತಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್​ಗೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ. ಅವರ ನಡುವೆಯೇ ಸಾಕಷ್ಟು ಗೊಂದಲಗಳಿವೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಯೇ ದೊಡ್ಡ ಸಮಸ್ಯೆ ಇದೆ. ಯಾವುದೇ ಹೋರಾಟಕ್ಕೆ ಅವರಿಗೆ ವಿಷಯಗಳು ಸಿಗುತ್ತಿಲ್ಲ ಎಂದರು.

2023ರ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಪೆಟ್ರೋಲ್-ಡೀಸೆಲ್ ಬೆಲೆಯನ್ನು ನಾವು ಕಡಿಮೆ ಮಾಡಿದ್ದೇವೆ. ಸಿದ್ದರಾಮಯ್ಯ ಸಿಂಧಗಿಯಲ್ಲಿ ದಲಿತ ವಿರೋಧಿ ಪ್ರಚಾರ ಮಾಡಿದರು. ಅಷ್ಟಾದರೂ ಕೂಡ ನಾವು ಬಹುದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಉಪ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಬಗ್ಗೆ ಸಮಾಧಾನ‌ವಿದೆ. 2023ರ ಎಲೆಕ್ಷನ್‌ನಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಮತಗಳಿಂದ ಜಯ ಗಳಿಸ್ತಾರೆ -ಕರ್ನಾಟಕ ಉಸ್ತುವಾರಿ ನಾಯಕ ಅರುಣ್ ಸಿಂಗ್ ಇದನ್ನೂ ಓದಿ: ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್