AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಆಪರೇಷನ್ ಗುರಿ ಇಲ್ಲ, ಲೋಕಸಭಾ ಚುನಾವಣೆಯೇ ನಮ್ಮ ಗುರಿ: ಬಿವೈ ವಿಜಯೇಂದ್ರ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿಯೇ ಬಿಜೆಪಿಯ ಟಾರ್ಗೆಟ್ ಎನ್ನಲಾಗುತ್ತಿದೆ. ಅಲ್ಲದೆ, ಆಪರೇಷನ್ ಕಮಲ ಆರಂಭವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿಯಿಂದ ಯಾವುದೇ ಆಪರೇಷನ್ ಗುರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಆಪರೇಷನ್ ಗುರಿ ಇಲ್ಲ, ಲೋಕಸಭಾ ಚುನಾವಣೆಯೇ ನಮ್ಮ ಗುರಿ: ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರImage Credit source: FILE PHOTO
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on: Jan 26, 2024 | 5:36 PM

Share

ಬೆಂಗಳೂರು, ಜ.26: ಬಿಜೆಪಿಯಿಂದ ಯಾವುದೇ ಆಪರೇಷನ್ ಗುರಿ ಇಲ್ಲ. ಲೋಕಸಭೆ ಚುನಾವಣೆಯೊಂದೇ ನಮ್ಮ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿಯೇ ಬಿಜೆಪಿಯ ಟಾರ್ಗೆಟ್ ಎನ್ನಲಾಗುತ್ತಿದೆ. ಅಲ್ಲದೆ, ಆಪರೇಷನ್ ಕಮಲ ಆರಂಭವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಅಂದರೆ ತಮಾಷೆ ಅನ್ನಿಸಬಹುದು. ಆದರೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪರ ಅಲೆ ಇದೆ. ಮೋದಿ ನಾಯಕತ್ವ, ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಯಾರು ಹೊರಗಿನವರು, ಯಾರು ಪಕ್ಷದ ಒಳಗಿನವರು ಎಂಬ ಪ್ರಶ್ನೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಬೇಕೆಂದು ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

ಇದನ್ನೂ ಓದಿ: ಸೋಮಣ್ಣಗೆ ಮುಳುಗುನೀರು ತಂದಿಟ್ಟಿದ್ದ ರುದ್ರೇಶ್ ದಿಢೀರ್ ಪ್ರತ್ಯಕ್ಷ, ವಿಜಯೇಂದ್ರ ಆಪ್ತ ಮತ್ತೆ ಚಾಮರಾಜನಗರದಲ್ಲಿ ಆಕ್ಟೀವ್

ಮಂಡ್ಯ ಸಂಸದೆ ಸುಮಲತಾ ಅವರಿಗೆ ಬೇರೆ ಕ್ಷೇತ್ರ ಕೊಟ್ಟಿ ಜೆಡಿಎಸ್​ಗೆ ಮಂಡ್ಯ ಕ್ಷೇತ್ರವನ್ನು ನೀಡುವ ಪ್ಲಾನ್ ಮಾಡಲಾಗುತ್ತಿದೆ. ಆದರೆ, ಸುಮಲತಾ ಅವರು ಬಿಜೆಪಿಯಿಂದ ಮಂಡ್ಯದಲ್ಲಷ್ಟೇ ಸ್ಪರ್ಧಿಸುತ್ತೇನೆ ಎಂದು ಕಡ್ಡಿಮುರಿದ ಹಾಗೆ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಸುಮಲತಾ ಜೊತೆ ಫೋನ್ ಕರೆ ಮಾಡಿ ಮಾತನಾಡಿದ್ದೇನೆ. ಶೀಘ್ರದಲ್ಲೇ ಸಂಸದೆ ಸುಮಲತಾ ಭೇಟಿ ಮಾಡುತ್ತೇನೆ ಎಂದರು.

ಹೆಚ್​ಡಿ ಕುಮಾರಸ್ವಾಮಿ ಜೊತೆ ಚರ್ಚಿಸಿ ಯಾವ ಕ್ಷೇತ್ರಕ್ಕೆ ಟಿಕೆಟ್​ ನೀಡಿದರೆ ಒಳ್ಳೆಯದು, ಯಾವ ಕ್ಷೇತ್ರದಿಂದ ಟಿಕೆಟ್​ ನೀಡಿದರೆ ಉತ್ತಮ ಅಂತಾ ಚರ್ಚೆ ಮಾಡುತ್ತೇನೆ ಎಂದರು. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾದ ಬಗ್ಗೆ ಮಾತನಾಡಿದ ಅವರು, ಶೆಟ್ಟರ್ ಕಾಂಗ್ರೆಸ್​​ನಲ್ಲಿದ್ದರೂ ಮನಸ್ಸು ಬಿಜೆಪಿಯಲ್ಲೇ ಇತ್ತು. ಈಗ ಜಗದೀಶ್ ಶೆಟ್ಟರ್ ಮರಳಿ ಮನೆಗೆ ಬಂದಿದ್ದಾರೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ಜೊತೆ ನಾನು ಚರ್ಚೆ ನಡೆಸಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್