AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ: ಶಾಮನೂರು ಪುತ್ರ ಸಚಿವ ಮಲ್ಲಿಕಾರ್ಜುನ ಸ್ಪಷ್ಟನೆ

ಅವರ ವೈಯಕ್ತಿಕ ವಿಚಾರ ಏನೂ ಎಂದು ಗೊತ್ತಿಲ್ಲ. ತಂದೆಯವರ ಜೊತೆಗೆ ನಾನು ಮಾತನಾಡಿಲ್ಲ. ಈ ವಿಷಯ ಕುರಿತು ಸಿಎಂ ಹಾಗೂ ತಂದೆ ಶಾಮನೂರು ಶಿವಶಂಕರಪ್ಪ ಅವರೇ ಮಾತಾಡಿಕೊಳ್ಳುತ್ತಾರೆ. ಇದು ಮುಗಿದು ಹೋದ ಅಧ್ಯಾಯ ಎಂದು ಗಣಿ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದ್ದಾರೆ.

ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ: ಶಾಮನೂರು ಪುತ್ರ ಸಚಿವ ಮಲ್ಲಿಕಾರ್ಜುನ ಸ್ಪಷ್ಟನೆ
ಎಸ್​ಎಸ್​ ಮಲ್ಲಿಕಾರ್ಜುನ್
ಪ್ರಸನ್ನ ಗಾಂವ್ಕರ್​
| Edited By: |

Updated on: Oct 05, 2023 | 2:39 PM

Share

ಬೆಂಗಳೂರು, ಅ.05: ನಮ್ಮ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ಗಣಿ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್(S.S Mallikarjun) ಅವರು ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಈ ಬಗ್ಗೆ ತಂದೆ ಶಾಮನೂರು ಶಿವಶಂಕರಪ್ಪ (Shamanuru Shivashankarappa) ರನ್ನೇ ಕೇಳಿ, ಅವರ ವೈಯಕ್ತಿಕ ವಿಚಾರ ಏನೂ ಎಂದು ಗೊತ್ತಿಲ್ಲ. ತಂದೆಯವರ ಜೊತೆಗೆ ನಾನು ಮಾತನಾಡಿಲ್ಲ. ಈ ವಿಷಯ ಕುರಿತು ಸಿಎಂ ಹಾಗೂ ತಂದೆ ಶಾಮನೂರು ಶಿವಶಂಕರಪ್ಪ ಅವರೇ ಮಾತಾಡಿಕೊಳ್ಳುತ್ತಾರೆ. ಇದು ಮುಗಿದು ಹೋದ ಅಧ್ಯಾಯ ಎಂದು ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಹೇಳಿಕೆ ಸಮರ್ಥಿಸಿಕೊಂಡ ವಿನಯ್ ಕುಲಕರ್ಣಿ

‘ಲಿಂಗಾಯತ  ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದಿದ್ದ ಶಾಮನೂರು ಅವರ ಹೇಳಿಕೆಯನ್ನು   ಮಾಜಿ ಸಚಿವ ವಿನಯ್ ಕುಲಕರ್ಣಿ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ‘ ಕಾಂಗ್ರೆಸ್​ಗೆ ಲಿಂಗಾಯತರು ವೋಟ್​ ಹಾಕಿಲ್ಲ ಎನ್ನುವವನು ಮೂರ್ಖ, ವೀರೇಂದ್ರ ಪಾಟೀಲ್ ಬಳಿಕ ಕಾಂಗ್ರೆಸ್ ಪರ ನಿಂತಿದ್ದಾರೆ. ಈ ಬಾರಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್​ಗೆ ವೋಟ್ ಹಾಕಿದ್ದಾರೆ. ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಯಾರೂ ಕೌಂಟರ್ ಕೊಡೋದು ಬೇಡ. ಅವರಿಗೆ 92 ವಯಸ್ಸಾಗಿದ್ದು, ನಮ್ಮ ಹಿರಿಯರು. ಸಿಎಂ ನಮ್ಮ ಹೊರಗಿನವರಲ್ಲ, ನಮ್ಮದೇ ಕುಟುಂಬ. ನಮ್ಮವರೇ ಹೋಗಿ ಅವರ ಬಳಿ ಮಾತನಾಡಿದರೆ ತಪ್ಪೇನಿದೆ ಅದರಲ್ಲಿ ಎಂದಿದ್ದಾರೆ.

ಇದನ್ನೂ ಓದಿ:ಶಾಮನೂರು ಶಿವಶಂಕರಪ್ಪ ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ, ಅವರೊಂದಿಗೆ ಚರ್ಚೆ ಮಾಡ್ತೀನಿ: ಡಿಕೆ ಶಿವಕುಮಾರ್

ಒಂದು ಸಮಾಜದಿಂದ ಯಾರೂ ಸಿಎಂ ಹಾಗೂ ಶಾಸಕಾರಾಗುವುದಿಲ್ಲ. ಅಧಿಕಾರಿಗಳು ಅಥವಾ ರಾಜಕಾರಣಿಗಳಿಗೆ ಸಮಸ್ಯೆ ಆಗುತ್ತಿದ್ದರೆ, ಅಂತವರು ನಮ್ಮ ಗಮನಕ್ಕೆ ತರಲಿ. ಅಧಿಕಾರಿಗಳು ನಮ್ಮ ಬಳಿ ಬರಲಿ, ನಾವೇ ಸಿಎಂ ಬಳಿ ಮಾತನಾಡುತ್ತೇವೆ.  ನಮ್ಮ ಒಳಗಡೆಯೇ ಇದೆಲ್ಲ ಸರಿಪಡಿಸಿಕೊಳ್ಳುತ್ತೇವೆ. ಎಲ್ಲರ ವಿಚಾರಗಳೂ ಒಂದೇ ತರಹ ಇರಲ್ಲ. ಯಾರಾದ್ರೂ ನಾಲ್ಕು ಜನ ಸಚಿವರನ್ನು ಶಾಮನೂರು ಬಳಿ ಕಳಿಸಿ ಮಾತನಾಡಿದರೆ ತಪ್ಪೇನಿದೆ ಎಂದರು.

ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿರುವ ಸಚಿವ ಈಶ್ವರ ಖಂಡ್ರೆ

ಹೌದು, ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆರೋಪ ಕೇಳಿಬಂದಿದ್ದು, ಈ ಕುರಿತು ಸಚಿವ ಈಶ್ವರ ಖಂಡ್ರೆ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಲಿದ್ದಾರೆ. ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಕೂಡ ಆಗಿರುವ ಈಶ್ವರ ಖಂಡ್ರೆ ಅವರು ಭೇಟಿ ವೇಳೆ ಶಾಮನೂರು ಹೇಳಿಕೆ ಬಗ್ಗೆಯೂ ಚರ್ಚೆ ಮಾಡಿ, ಲಿಂಗಾಯತ ಅಧಿಕಾರಿಗಳ ಸಮಸ್ಯೆಗಳ ಬಗ್ಗೆ ವಿವರಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ