AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಎಸ್​ಟಿ ಜೊತೆಗೆ ಪೇಸಿಎಂ, ಪೇ ಸೋನಿಯಾ, ಪೇ ವೇಣುಗೋಪಾಲ್ ಇದೆ: ಬಿಜೆಪಿ ಶಾಸಕ ಯತ್ನಾಳ್

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವೈಎಸ್​ಟಿ ಸರ್ಕಾರ ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿಗೂಡಿಸಿದ್ದಾರೆ.

ವೈಎಸ್​ಟಿ ಜೊತೆಗೆ ಪೇಸಿಎಂ, ಪೇ ಸೋನಿಯಾ, ಪೇ ವೇಣುಗೋಪಾಲ್ ಇದೆ: ಬಿಜೆಪಿ ಶಾಸಕ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಹೆಚ್​ಡಿ ಕುಮಾರಸ್ವಾಮಿ
Follow us
Anil Kalkere
| Updated By: Rakesh Nayak Manchi

Updated on: Jul 03, 2023 | 4:00 PM

ಬೆಂಗಳೂರು: ವೈಎಸ್​ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸರ್ಕಾರ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಧ್ವನಿಗೂಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಪೇಸಿಎಂ, ಪೇ ಸೋನಿಯಾ, ಪೇ ವೇಣುಗೋಪಾಲ್ ಎಲ್ಲವೂ ಇದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 10 ಜನರ ಮುಖ್ಯಮಂತ್ರಿಗಳು ಯಾರ್ಯಾರು ಎಂದು ನನಗೆ ಗೊತ್ತಿಲ್ಲ. ಕುಮಾರಸ್ವಾಮಿಗೆ ಅವರದ್ದೇ ಆದ ಮಾಹಿತಿ ಮೂಲಗಳಿವೆ. ಅವರಿಗೆ ಮೊದಲು ಕ್ಯಾಬಿನೆಟ್ ಅಜೆಂಡಾ ಹೋಗುತ್ತದೆ ಎಂದರು.

ವಿಧಾನಸಭೆ ಮತ್ತು ಪರಿಷತ್​ ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಯತ್ನಾಳ್, ವಿಪಕ್ಷ ನಾಯಕ ಯಾರೇ ಆದರೂ ಸ್ವಾಗತ ಮಾಡುತ್ತೇವೆ. ನಾನು ರೇಸ್​​ನಲ್ಲಿ ಇದ್ದೇನೆ ಎಂದು ನೀವೇ ತೋರಿಸಿದ್ದೀರಿ. ಈಶ್ವರಪ್ಪ ಹೇಳಿಕೆಯನ್ನ ತಿರುಚಿ ತೋರಿಸಿದ್ದೀರಿ. ಮತ್ತೆ ನಮ್ಮ ಮಧ್ಯೆ ಬೆಂಕಿ ಹಚ್ಚಬೇಡಿ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುವುದಾಗಿ ತಿಳಿಸಿದರು.

ಇದನ್ನೂ ಓದಿ: ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಬಿಜೆಪಿ ಕಾರ್ಯಕರ್ತ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್​ ಸರ್ಕಾರದಲ್ಲಿ ಜಿಎಸ್​ಟಿ ರೀತಿ ವೈಎಸ್​ಟಿ ಸಂಗ್ರಹ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ಅವರ ಪುತ್ರನೂ ಆಗಿರುವ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಸರು. ವೈಎಸ್​ಟಿ ತೆರಿಗೆ ಅಂತ ಅವರ ಸರ್ಕಾರದಲ್ಲಿ ಬಂದಿದೆಯಂತೆ. ಅದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಹೇಳಿದ್ದರು.

ಸರ್ಕಾರದ ವಿರುದ್ಧದ ಕುಮಾರಸ್ವಾಮಿ ಆರೋಪ ಅಷ್ಟಕ್ಕೆ ನಿಲ್ಲದೆ, ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಮತ್ತೊಂದು ಗಂಭೀರ ಆರೋಪ ಮಾಡಿದ್ದರು. ಶಾಸಕರ ಶಿಫಾರಸು ತಂದ್ರೆ ಸಾಲದು 30 ಲಕ್ಷ ದುಡ್ಡು ತನ್ನಿ ಎಂದು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಬೇಡಿಕೆ ಇಡುತ್ತಿದ್ದಾರೆ ಎಂದಿದ್ದರು. ಅಲ್ಲದೆ, ಭ್ರಷ್ಟಾಚಾರದ ವಿರುದ್ಧ ಕ್ರಮ ಅಂತಾ ಹೇಳುತ್ತಾರೆ, ಏನೂ ಕ್ರಮ ತಗೊಂಡಿದ್ದಾರೆ? ಸರ್ಕಾರ ಬಂದು ಒಂದು ತಿಂಗಳು ಕಳಿಯಿತು ಎಂದಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ