AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನಲ್ಲಿ ಶುರುವಾಯಿತು ಒಬಿಸಿ ವಾರ್; ಸಿಎಂ ಸಿದ್ದರಾಮಯ್ಯಗೆ ಮತ್ತೆ ಟಾಂಗ್ ಕೊಡಲು ಮುಂದಾದ ಬಿಕೆ ಹರಿಪ್ರಸಾದ್

BK Hariprasad; ಅತಿ ಹಿಂದುಳಿದವರ ಸಮಾವೇಶ ನಡೆಸುವ ಮೂಲಕ ಸಿದ್ದರಾಮಯ್ಯಗೆ ಪರ್ಯಾಯ ನಾಯಕರಾಗಿ ಹೊರಹೊಮ್ಮಲು ಬಿಕೆ ಹರಿಪ್ರಸಾದ್ ಯೋಜನೆ ಹಾಕಿಕೊಂಡಿದ್ದಾರೆ. ಜತೆಗೆ, ರಾಜಕೀಯವಾಗಿಯೂ ಇನ್ನಷ್ಟು ಬಿಗಿ ಹಿಡಿತ ಸಾಧಿಸಲು ಪ್ಲಾನ್ ಮಾಡುತ್ತಿದ್ದಾರೆ. ಸಮಾಜದ ಜತೆ ಪಕ್ಷದಲ್ಲಿ ಹೆಚ್ಚಿನ ಮಾನ್ಯತೆ ಸಿಗುವ ನಿರೀಕ್ಷೆಯಲ್ಲಿ ಹರಿಪ್ರಸಾದ್ ಇದ್ದಾರೆ.

ಕಾಂಗ್ರೆಸ್​​ನಲ್ಲಿ ಶುರುವಾಯಿತು ಒಬಿಸಿ ವಾರ್; ಸಿಎಂ ಸಿದ್ದರಾಮಯ್ಯಗೆ ಮತ್ತೆ ಟಾಂಗ್ ಕೊಡಲು ಮುಂದಾದ ಬಿಕೆ ಹರಿಪ್ರಸಾದ್
ಬಿಕೆ ಹರಿಪ್ರಸಾದ್
Pramod Shastri G
| Updated By: Ganapathi Sharma|

Updated on: Aug 21, 2023 | 4:02 PM

Share

ಬೆಂಗಳೂರು, ಆಗಸ್ಟ್ 21: ಸಚಿವರ ವಿರುದ್ಧ ಶಾಸಕರ ಅಸಮಾಧಾನ, ಶಾಸಕರಿಂದ ಮುಖ್ಯಮಂತ್ರಿಗಳಿಗೆ ಪತ್ರ ಸೇರಿದಂತೆ ಹಲವು ಆಂತರಿಕ ಭಿನ್ನಮತಗಳನ್ನು ಎದುರಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್​ಗೆ (Congress) ಇದೀಗ ಒಬಿಸಿ ಸಮುದಾಯದವರ (Community) ಪ್ರತಿಭಟನೆಯ ಬಿಸಿ ತಟ್ಟಲಿದೆ. ಭಾನುವಾರವಷ್ಟೇ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಸ್ವಜಾತಿ ಪ್ರೇಮ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಇದೀಗ ಅತಿ ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದ್ದಾರೆ. ಅವರಿಗೆ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಬೆಂಬಲವೂ ದೊರೆತಿದೆ.

ಈಡಿಗ, ಉಪ್ಪಾರ, ವಿಶ್ವಕರ್ಮ, ಸವಿತಾ ಸಮಾಜ, ಅಂಬಿಗ ಸಮಾಜ, ಅತಿ ಸಣ್ಣ ಸಮುದಾಯಗಳೂ ಸೇರಿದಂತೆ 101 ಸಮುದಾಯಗಳ ಸಂಪರ್ಕದಲ್ಲಿ ಬಿಕೆ ಹರಿಪ್ರಸಾದ್ ಇದ್ದಾರೆ. ಇದರ ಬೆನ್ನಲ್ಲೇ ಅವರ ಪರ ಪ್ರಣವಾನಂದ ಸ್ವಾಮೀಜಿ ಬ್ಯಾಟ್ ಬೀಸಲು ಆರಂಭಿಸಿದ್ದಾರೆ.

ಅತಿ ಹಿಂದುಳಿದ ಸಮಾಜದ ಸಮಾವೇಶಕ್ಕೆ ಪ್ರಣವಾನಂದ ಸ್ವಾಮೀಜಿಯಿಂದ ಬೆಂಬಲ ವ್ಯಕ್ತವಾಗಿದ್ದು, ಇನ್ನಿತರ ಸಮುದಾಯ ಸ್ವಾಮಿಜಿಗಳಿಗೂ ಆಹ್ವಾನ ನೀಡಲು ಹರಿಪ್ರಸಾದ್ ಉದ್ದೇಶಿಸಿದ್ದಾರೆ. ಸೆಪ್ಟೆಂಬರ್ 9 ರಂದು ಅತಿ ಹಿಂದುಳಿದ ಸಮಾಜದ ಸಮಾವೇಶದ ಪೂರ್ವಭಾವಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಡಿಸೆಂಬರ್ ನಲ್ಲಿ ಶಿವಮೊಗ್ಗ, ಉಡುಪಿ ಅಥವಾ ಉತ್ತರ ಕನ್ನಡದಲ್ಲಿ ಅತಿ ಹಿಂದುಳಿದವರ ಸಮಾವೇಶ ನಡೆಸುವ ಸಾಧ್ಯತೆ ಇದೆ.

ಅತಿ ಹಿಂದುಳಿದವರ ಸಮಾವೇಶ ನಡೆಸುವ ಮೂಲಕ ಸಿದ್ದರಾಮಯ್ಯಗೆ ಪರ್ಯಾಯ ನಾಯಕರಾಗಿ ಹೊರಹೊಮ್ಮಲು ಬಿಕೆ ಹರಿಪ್ರಸಾದ್ ಯೋಜನೆ ಹಾಕಿಕೊಂಡಿದ್ದಾರೆ. ಜತೆಗೆ, ರಾಜಕೀಯವಾಗಿಯೂ ಇನ್ನಷ್ಟು ಬಿಗಿ ಹಿಡಿತ ಸಾಧಿಸಲು ಪ್ಲಾನ್ ಮಾಡುತ್ತಿದ್ದಾರೆ. ಸಮಾಜದ ಜತೆ ಪಕ್ಷದಲ್ಲಿ ಹೆಚ್ಚಿನ ಮಾನ್ಯತೆ ಸಿಗುವ ನಿರೀಕ್ಷೆಯಲ್ಲಿ ಹರಿಪ್ರಸಾದ್ ಇದ್ದಾರೆ.

ಇದನ್ನೂ ಓದಿ: ಈಡಿಗ ಸಮುದಾಯದ ನಾಯಕರ ಕಡೆಗಣನೆ: ಹೊಸ ಪಕ್ಷ ಸ್ಥಾಪನೆ ಎಚ್ಚರಿಕೆ ನೀಡಿದ ಪ್ರಣವಾನಂದ ಶ್ರೀ

ಮಂತ್ರಿ ಸ್ಥಾನ ಕೈತಪ್ಪಿಸಿದ್ದಕ್ಕೆ ಸಿದ್ದರಾಮಯ್ಯ ವಿರುದ್ದ ಅಸಮಾಧಾನಗೊಂಡಿರುವ ಹರಿಪ್ರಸಾದ್ ಇದೀಗ ರಾಜಕೀಯವಾಗಿ ಹೊಸ ದಾಳ ಉರುಳಿಸಲು ಮುಂದಾಗಿದ್ದಾರೆ. ಹಿಂದುಳಿದ ಸಮಾಜದ ಒಕ್ಕೂಟ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದರೆ, ಇದಕ್ಕೆ ಪರ್ಯಾಯವಾಗಿ ಅತಿ ಹಿಂದುಳಿದ ಸಮಾವೇಶಕ್ಕೆ ಪ್ಲಾನ್ ರೂಪಿಸಿದ್ದಾರೆ. ಈಗ ಹಿಂದುಳಿದ ಸಮಾಜದಲ್ಲೇ ಅತಿ ಹಿಂದುಳಿದ ಸಣ್ಣ ಸಮಾಜ ಸಂಘಟಿಸುವ ಮೂಲಕ ಹೊಸ ರಾಜಕೀಯ ಅಸ್ತ್ರ ಬಳಸಲು ಹರಿಪ್ರಸಾದ್ ಪ್ಲಾನ್ ರೂಪಿಸಿದ್ದಾರೆ.

ಈ ಮಧ್ಯೆ, ನಮ್ಮ ಸಮುದಾಯದ ನಾಯಕರಿಗೆ ಮೂರು ಪಕ್ಷಗಳಿಂದ ಅನ್ಯಾಯವಾದರೆ ಹೊಸ ಪಕ್ಷ ಸ್ಥಾಪನೆ ಮಾಡಲಾಗುವುದು ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಸಪ್ಟೆಂಬರ್ 9 ರಂದು ಈಡಿಗ ಬಿಲ್ಲವ ನಾಮಧಾರಿ ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ