AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದ್ದ ಆರೋಪಿಯ ಬಂಧಿಸದಿದ್ದರೆ ಗೃಹ ಸಚಿವರ ಕಚೇರಿ ಎದುರು ಧರಣಿ: ಜೆಡಿಎಸ್ ಎಚ್ಚರಿಕೆ

Objectionable Posters against HD Kumaraswamy: ಕಾಂಗ್ರೆಸ್ ಸರ್ಕಾರ ಕೂಡಲೇ ಈ ಬಗ್ಗೆ ಎಚ್ಚೆತ್ತುಕೊಂಡು ಕಡಿವಾಣ ಹಾಕಬೇಕಾಗಿದೆ. ಇಲ್ಲವಾದರೆ ಪರಸ್ಪರ ಪ್ರತಿಭಟನೆಗಳು ನಡೆಯುತ್ತವೆ, ಪರಿಸ್ಥಿತಿ ಮಿತಿ ಮೀರಿದರೆ ಕಾನೂನು ಸುವ್ಯವಸ್ಥೆ ಹದಗೆಡಬಹುದು ಎಂದು ಜೆಡಿಎಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದ್ದ ಆರೋಪಿಯ ಬಂಧಿಸದಿದ್ದರೆ ಗೃಹ ಸಚಿವರ ಕಚೇರಿ ಎದುರು ಧರಣಿ: ಜೆಡಿಎಸ್ ಎಚ್ಚರಿಕೆ
ಹೆಚ್​​​ಡಿ ಕುಮಾರಸ್ವಾಮಿ
Follow us
TV9 Web
| Updated By: Ganapathi Sharma

Updated on: Nov 24, 2023 | 5:59 PM

ಬೆಂಗಳೂರು, ನವೆಂಬರ್ 24: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳ ಬಂಧನಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಪೋಲಿಸರ ವಿರುದ್ಧ ಜೆಡಿಎಸ್ (JDS) ಕಿಡಿಕಾರಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದರೆ ವಿಧಾನಸೌಧದಲ್ಲಿರುವ ಗೃಹ ಸಚಿವರ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಕ್ಷವು ಎಚ್ಚರಿಕೆ ನೀಡಿದೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ನಗರ ಘಟಕದ ಅಧ್ಯಕ್ಷ ಹೆಚ್ಎಂ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆಎ ತಿಪ್ಪೇಸ್ವಾಮಿ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಪಕ್ಷದ ರಾಜ್ಯದ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಮುಖಂಡ ಕೆ.ಮಂಜು ಅವರು, ತಪ್ಪಿತಸ್ಥರ ಬಂಧಿಸಬೇಕು ಎಂದು ಒತ್ತಾಯಿಸಿದರು.

ತಿಪ್ಪೇಸ್ವಾಮಿ ಮಾತನಾಡಿ, ‘ನಮ್ಮ ಪಕ್ಷದ ನಾಯಕರ ವಿರುದ್ಧ ಜೆಡಿಎಸ್ ಪಕ್ಷದ ಕಚೇರಿಯ ಆವರಣದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿದರು. ಯಾರು ಹೀಗೆ ಮಾಡಿದ್ದಾರೆ ಎಂದು ನಾವು ಕೂಡ ಪರಿಶೀಲನೆ ನಡೆಸಿ ಪೋಲಿಸ್ ಕಮಿಷನರ್‌ಗೆ ದೂರು ನೀಡಿದ್ದೆವು. ಕಮಿಷನರ್ ಸೂಚನೆಯಂತೆ ಶ್ರೀರಾಂಪುರ ಸ್ಟೇಷನ್‌‌ನಲ್ಲಿ ಕೂಡ ದೂರು ದಾಖಲಿಸಿದ್ದೇವೆ. ನಮ್ಮ ನಾಯಕರ ವಿರುದ್ಧ ಪೋಸ್ಟರ್ ಅಂಟಿಸಿರುವ ವಿಚಾರ ಮತ್ತು ವೈಯಕ್ತಿಕ ತೇಜೋವಧೆ, ವ್ಯಕ್ತಿ ನಿಂದನೆ ಆಧಾರವಾಗಿ ದೂರು ದಾಖಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ಪೋಲಿಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಐಪಿಸಿ, ಐಟಿ ಆಕ್ಟ್‌ನಡಿ ಕ್ರಮ ಜರುಗಿಸಬೇಕಾಗಿತ್ತು. ಅದನ್ನು ಪೊಲೀಸರು ಮಾಡಿಲ್ಲ ಎಂದರು.

ರಾಜಕೀಯದಲ್ಲಿ ಪಕ್ಷದ ಹಿರಿಯ ನಾಯಕರ ವಿರುದ್ಧ ವ್ಯಕ್ತಿನಿಂದನೆ ಮಾಡಿದಾಗ ಅವರ ಹಿಂಬಾಲಕರು, ಅಭಿಮಾನಿಗಳು, ಕಾರ್ಯಕರ್ತರಿಗೆ ನೋವು ಉಂಟಾಗುತ್ತದೆ. ನಮ್ಮ ಕಾರ್ಯಕರ್ತರನ್ನು ಕೂಡ ನಾವು ಸಮಾಧಾನಪಡಿಸಿದ್ದೇವೆ. ಆದರೆ ಇಲ್ಲಿಯವರೆಗೂ ಪೋಲಿಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿ ಎಸ್.ಮನೋಹರ್ ಶುಕ್ರವಾರ ಬೆಂಗಳೂರು ನಗರ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್‌ಗೌಡರವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದು ಅಲ್ಲದೇ, ವೈಯಕ್ತಿಕ ತೇಜೋವಧೆ, ವ್ಯಕ್ತಿ ನಿಂದನೆ ಮಾಡುವ ಕೆಲಸ ಮಾಡಿದ್ದಾರೆ ಎಂದು ಅವರು ದೂರಿದರು.

ಕಾಂಗ್ರೆಸ್ ಸರ್ಕಾರ ಕೂಡಲೇ ಈ ಬಗ್ಗೆ ಎಚ್ಚೆತ್ತುಕೊಂಡು ಕಡಿವಾಣ ಹಾಕಬೇಕಾಗಿದೆ. ಇಲ್ಲವಾದರೆ ಪರಸ್ಪರ ಪ್ರತಿಭಟನೆಗಳು ನಡೆಯುತ್ತವೆ, ಪರಿಸ್ಥಿತಿ ಮಿತಿ ಮೀರಿದರೆ ಕಾನೂನು ಸುವ್ಯವಸ್ಥೆ ಹದಗೆಡಬಹುದು. ಗೃಹ ಇಲಾಖೆ, ಡಿಜಿಪಿಯವರು ಇದನ್ನು ಸೂಕ್ಷ್ಮವಾಗಿ ಗಮನಹರಿಸಿ ಈ ರೀತಿಯ ಘಟನೆಗಳು ಪುನರಾವರ್ತನೆ ಆಗದಂತೆ ಕ್ರಮ ವಹಿಸಬೇಕು. ಇದು ನಿಲ್ಲದಿದ್ದರೆ ನಾವು ಹೋರಾಟ ಮಾಡಲಿದ್ದೇವೆ ಎಂದು ಸರ್ಕಾರಕ್ಕೆ ಅವರು ಎಚ್ಚರಿಕೆ ನೀಡಿದರು‌.

ಎಸ್.ಮನೋಹರ್ ಒಬ್ಬ ಕೊಲೆಗಡುಕ: ರಮೇಶ್‌ಗೌಡ

ಜೆಡಿಎಸ್ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ರಮೇಶ್‌ ಗೌಡ ಮಾತನಾಡಿ, ‘ಚಿಕ್ಕವಯಸ್ಸಿನಲ್ಲೇ ವಿಧಾನ ಪರಿಷತ್ ಸದಸ್ಯನಾಗಿದ್ದೇನೆ ಎಂದು ನನ್ನ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಅವರುಗಳಂತೆ ಜಾಮೀನು ತೆಗೆದುಕೊಂಡು ಓಡಾಡುತ್ತಿಲ್ಲ. ಎಸ್ ಮನೋಹರ್ ವಿರುದ್ಧ ನಾನು ಕಾಂಗ್ರೆಸ್ ವರಿಷ್ಠ ನಾಯಕರಿಗೂ ಕೂಡ ಪತ್ರ ಬರೆಯುತ್ತೇನೆ’ ಎಂದರು.

ಕುಮಾರಸ್ವಾಮಿಯವರು ಈ ಸರಕಾರದ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾರೆ ಎನ್ನುವ ಕಾರಣಕ್ಕೆ ಅವರ ವಿರುದ್ಧ ಪೋಸ್ಟರ್ ಅಂಟಿಸಿದ್ದಾರೆ. ಮನೋಹರ್ ಪೋಸ್ಟರ್ ಅಂಟಿಸಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಪುರಾವೆಗಳಿದೆ. ಮನೋಹರ್ ರೀತಿಯಲ್ಲಿ ನೀಚ, ಕೀಳುಮಟ್ಟದ ರಾಜಕೀಯ ನಾವು ಮಾಡಲ್ಲ. ಮನೋಹರ್ ಒಬ್ಬ ಕೊಲೆಗಡುಕ. ನಾನು ಅವ್ಯವಹಾರ ಮಾಡಿರುವುದಕ್ಕೆ ಒಂದೇ ಒಂದು ಸಾಕ್ಷಿ ನೀಡಿದರೆ ರಾಜಕೀಯ ತೊರೆಯುತ್ತೇನೆ ಎಂದು ಅವರು ಆರೋಪ ಮಾಡಿದರು. ಈ ಸಂದರ್ಭದಲ್ಲಿ ಅವರು ಎಸ್.ಮನೋಹರ್ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು.

ಪೋಸ್ಟರ್ ಅಂಟಿಸಿದ್ದು ನಾನೇ ಎಂದು ರಾಜರೋಷವಾಗಿ ಹೇಳಿಕೊಂಡಿರುವ ಮನೋಹರ್‌ ಅವರನ್ನು ಪೋಲಿಸರು ಬಂಧಿಸಬೇಕು. ಇಲ್ಲವಾದರೆ ಜೆಡಿಎಸ್ ಪಕ್ಷದ‌ ಶಾಸಕರು, ಮುಖಂಡರು ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಪೋಸ್ಟರ್ ಅಂಟಿಸುವ ಕೆಲಸ ನಮಗೂ ಬರುತ್ತದೆ. ಮೌಲ್ಯಾಧಾರಿತ ರಾಜಕಾರಣ ಮಾಡಬೇಕು ಎಂದು ನಮ್ಮ ನಾಯಕರು ಸೂಚನೆ ನೀಡಿದ್ದಕ್ಕೆ ನಮ್ಮ ಪಕ್ಷದ ಯುವ ಕಾರ್ಯಕರ್ತರು ಸುಮ್ಮನಿದ್ದಾರೆ ಎಂದು ಆಕ್ರೋಶ ಹೊರಹಾಕಿದರು‌.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್: ಸಿದ್ದರಾಮಯ್ಯ ಸಂಪುಟ ಡಿಕೆಶಿ ಪಾದದಡಿಯಲ್ಲಿದೆ ಎಂದ ಕುಮಾರಸ್ವಾಮಿ

ಕೂಡಲೇ ಕಾಂಗ್ರೆಸ್ ಕಾರ್ಯಕರ್ತ ಎಸ್.ಮನೋಹರ್ ಬಂಧನವಾಗದಿದ್ದರೆ ವಿಧಾನಸೌಧದ ಗೃಹ ಸಚಿವರ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸುವುದಾಗಿ ಅವರು ಎಚ್ಚರಿಕೆ ನೀಡಿದರು‌.

ಜೆಡಿಎಸ್​​​ಗೆ ಒಂದು ಕಾನೂನು, ಕಾಂಗ್ರೆಸ್​ಗೆ ಒಂದು ಕಾನೂನು ಇರುತ್ತದೆಯೇ?

ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎಪಿ ರಂಗನಾಥ್ ಮಾತನಾಡಿ, ಸರ್ಕಾರ, ಪೋಲಿಸ್ ಕಮಿಷನರ್ ಮತ್ತು ಗೃಹ ಸಚಿವರು ಒಬ್ಬೊಬ್ಬರಿಗೆ ಒಂದೊಂದು ರೀತಿಯ ಕಾನೂನು ಮಾಡಬಾರದು. ಎಲ್ಲಾ ಪಕ್ಷಕ್ಕೂ ಒಂದೇ ನಿಯಮ. ಜೆಡಿಎಸ್ ಪಕ್ಷದ ಕಾರ್ಯಕರ್ತ ಬೆಟ್ಟಪ್ಪ ಎಂಬಾತ ಫೇಸ್‌‌ಬುಕ್‌ನಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದಕ್ಕೆ ಕೆ‌.ಜಿ.ಎಫ್ ಪೋಲಿಸ್ ಸ್ಟೇಷನ್‌ನಲ್ಲಿ ಜಾಮೀನುರಹಿತ ಕೇಸ್ ದಾಖಲಿಸುತ್ತಾರೆ. ಆದರೆ, ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದವರ ವಿರುದ್ಧ ಪೋಲಿಸ್ ಕಮಿಷನರ್‌ಗೆ ದೂರು ನೀಡಿದರೂ ಕೂಡ ಜಾಮೀನುಸಹಿತ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಪೋಸ್ಟರ್ ಅಂಟಿಸಿದವರು ರಾಜರೋಷವಾಗಿ ಓಡಾಡಿಕೊಂಡಿದ್ದಾರೆ. ನಮಗೊಂದು ಅವರಿಗೊಂದು ಕಾನೂನು ಸರಿಯಲ್ಲ. ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ.ಕೂಡಲೇ ಜಾಮೀನು ರಹಿತ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ರಾಮನಗರ ಎಸಿ ಕೋರ್ಟ್ ಸ್ಥಳಾಂತರ: ಜಿಲ್ಲಾಡಳಿತ ವಿರುದ್ಧ ವಕೀಲರ ಪ್ರತಿಭಟನೆ, ಕುಮಾರಸ್ವಾಮಿ ಸಾಥ್​​

ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿದರೂ ಕೂಡ ತಪ್ಪು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ, ಮನೋಹರ್ ನೆನ್ನೆ ನಾನೇ ಪೋಸ್ಟರ್ ಅಂಟಿಸಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ. ಮನೋಹರ್ ವಿರುದ್ಧ ಯಾವ ಕ್ರಮ ಜರುಗಿಸಿದ್ದೀರಾ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ರಂಗನಾಥ್ ಪ್ರಶ್ನಿಸಿದರು.

ಮನೋಹರ್‌ರಿಗೆ ಕಾಂಗ್ರೆಸ್ ಪಕ್ಷ ಯಾವುದೇ ಸ್ಥಾನಮಾನ ನೀಡಿಲ್ಲ ಎಂದು ಹತಾಷೆಗೆ ಒಳಗಾಗಿ ಈ ರೀತಿ ಮಾಡಿದ್ದಾರೆ. ಅಥವಾ ಈ ರೀತಿ ಮಾಡಿದರೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಗಬಹುದು ಎಂಬ ನೀರಿಕ್ಷೆಯಲ್ಲಿ ಮಾಡಿರಬಹುದು. ಡಿ.ಕೆ.ಶಿವಕುಮಾರ್ ಕೂಡ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!