AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 28ಕ್ಕೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ಒಂದು ವರ್ಷ; ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾಧನಾ ಸಮಾವೇಶ

ರಾಜ್ಯದಲ್ಲಿ ಮಳೆ ಬಂದು 12 ಜಿಲ್ಲೆಯಲ್ಲಿ ಮಳೆ ಗಂಭೀರವಾಗಿ ಹೊಡೆತ ಕೊಟ್ಟಿದೆ. ಇಂಥಹ ಪರಿಸ್ಥಿತಿಯಲ್ಲಿ ಜನರಿಗೆ ನೆರವಾಗುವ ಕಾರ್ಯಕ್ರಮ ಮಾಡಬೇಕು ಎಂದು ಸುಧಾಕರ್ ಹೇಳಿದರು.

ಜುಲೈ 28ಕ್ಕೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ಒಂದು ವರ್ಷ; ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾಧನಾ ಸಮಾವೇಶ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
TV9 Web
| Updated By: sandhya thejappa|

Updated on:Jul 16, 2022 | 12:34 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಜುಲೈ 28ಕ್ಕೆ ಸಿಎಂ ಪಟ್ಟಕ್ಕೆ ಏರಿ ಒಂದು ವರ್ಷ ಕಳೆಯುತ್ತದೆ. ಈ ಹಿನ್ನೆಲೆ ಜು.28ಕ್ಕೆ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾಧನಾ ಸಮಾವೇಶ ನಡೆಯಲಿದ್ದು, 1 ವರ್ಷದ ಸ್ವಚ್ಛ ಆಡಳಿತ ಬಗ್ಗೆ ಜನರಿಗೆ ಮನವರಿಕೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾಕೆ ಸುಧಾಕರ್ (Dr K Sudhakar) ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ನಿಂದ ಆಗಸ್ಟ್ 3ರಂದು ಸಿದ್ಧರಾಮೋತ್ಸವ ಕಾರ್ಯಕ್ರಮ ನಡೆಸುತ್ತಿರುವ ಬಗ್ಗೆ ಸಚಿವರು ಲೇವಡಿ ಮಾಡಿದರು. ಬಿಜೆಪಿ ಪಕ್ಷದಲ್ಲಿ ವ್ಯಕ್ತಿ ಪೂಜೆ, ಪಲ್ಲಕ್ಕಿ ಉತ್ಸವ ಇಲ್ಲ. ಬಿಜೆಪಿಯಲ್ಲಿ ದೇಶ ಮೊದಲು, ಪಕ್ಷ ಎರಡನೆಯದ್ದು, ಕೊನೆಗೆ ತಾನು. ಆದರೆ ಕಾಂಗ್ರೆಸ್ನಲ್ಲಿ ವ್ಯಕ್ತಿ ಪೂಜೆ ಮಾಡುವುದಕ್ಕೆ ಹೊರಟಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮಳೆ ಬಂದು 12 ಜಿಲ್ಲೆಯಲ್ಲಿ ಮಳೆ ಗಂಭೀರವಾಗಿ ಹೊಡೆತ ಕೊಟ್ಟಿದೆ. ಇಂಥಹ ಪರಿಸ್ಥಿತಿಯಲ್ಲಿ ಜನರಿಗೆ ನೆರವಾಗುವ ಕಾರ್ಯಕ್ರಮ ಮಾಡಬೇಕು ಎಂದು ಸುಧಾಕರ್ ಹೇಳಿದರು.

ಮೊಟ್ಟೆ, ಹಾಲು ಪೌಷ್ಟಿಕ ಆಹಾರ: ಮೊಟ್ಟೆ ಅಪೌಷ್ಟಿಕ ಆಹಾರ ಎಂಬ ಎನ್ಇಪಿ ಸಮಿತಿಯ ಶಿಫಾರಸ್ಸಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಇದುವರೆಗೂ ನನ್ನ ಜ್ಞಾನಕ್ಕೆ ತಿಳಿದಂತೆ ಮೊಟ್ಟೆ, ಹಾಲು ಪೌಷ್ಠಿಕ ಆಹಾರ. ಅದು ಯಾರು ವರದಿಕೊಟ್ಟಿದ್ದಾರೊ ನನ್ನ ಗಮನಕ್ಕೆ ಇಲ್ಲ. ಎನ್ಇಪಿ ಸಮಿತಿಯ ವರದಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಸಮಿತಿಯ ವರದಿಯ ಪಡೆದು ನಾನು ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ
Image
KGF 2: ತೆರೆಗೆ ಬಂದು 3 ತಿಂಗಳ ಬಳಿಕ ‘ಕೆಜಿಎಫ್ 2’ ಚಿತ್ರದಿಂದ ಸೃಷ್ಟಿ ಆಯ್ತು ಯಾವ ಚಿತ್ರವೂ ಮಾಡಿರದ ದಾಖಲೆ
Image
Monty Panesar: ವಿರಾಟ್ ಕೊಹ್ಲಿಯನ್ನು ಕೈಬಿಡುವಷ್ಟು ಧೈರ್ಯ ಬಿಸಿಸಿಐಗೆ ಇಲ್ಲ: ಮಾಂಟಿ ಪನೇಸರ್
Image
75 ದಿನ ಉಚಿತ ಬೂಸ್ಟರ್ ಡೋಸ್ ಅಭಿಯಾನ; ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ
Image
Gujarat Riots: ಮೋದಿ ವಿರುದ್ಧ ಅಹ್ಮದ್ ಪಟೇಲ್ ಸಂಚು ರೂಪಿಸಿದ್ದರು ಎಂದ ಎಸ್‌ಐಟಿ, ಆರೋಪವನ್ನು ತಳ್ಳಿಹಾಕಿದ ಕಾಂಗ್ರೆಸ್

ಇದನ್ನೂ ಓದಿ: Onion Price: ಗ್ರಾಹಕರಿಗೆ ಗುಡ್ ನ್ಯೂಸ್; ಇನ್ನು ಗಗನಕ್ಕೇರಲ್ಲ ಈರುಳ್ಳಿ ಬೆಲೆ, ಸರ್ಕಾರದ ಹೊಸ ಪ್ಲಾನ್

75 ದಿನಗಳ ಕಾಲ ಉಚಿತ ಬೂಸ್ಟರ್ ಡೋಸ್ ಅಭಿಯಾನ ನಡೆಯಲಿದ್ದು, ಇಂದು ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಪ್ರಭಾವ ಇನ್ನೂ ಇದೆ ಎಂದು ಡಬ್ಲ್ಯುಹೆಚ್ಒ ಹೇಳಿದೆ. ಹೀಗಾಗಿ ಬೂಸ್ಟರ್ ಡೋಸ್ ಲಸಿಕೆಯನ್ನು ತೆಗೆದುಕೊಳ್ಳಿ. ಪ್ರಧಾನಿ ಮೋದಿ ಉಚಿತವಾಗಿ ಲಸಿಕೆ ನೀಡಲು ಹೇಳಿದ್ದಾರೆ. ಬೂಸ್ಟರ್ ಡೋಸ್ ಕೂಡಾ ಉಚಿತವಾಗಿ ಕೊಡುತ್ತಿದ್ದಾರೆ. ಕೊರೊನಾ ಕಡಿಮೆ ಆಗಿದೆ ಎಂದು ನಿರ್ಲಕ್ಷ್ಯ ಮಾಡಬೇಡಿ. 75 ದಿನದೊಳಗೆ ಎಲ್ಲರಿಗೂ ಬೂಸ್ಟರ್ ಡೋಸ್ ನೀಡುವ ಗುರಿ ಇದೆ ಎಂದು ಹೇಳಿದರು.

ಇದನ್ನೂ ಓದಿ: ತೆರೆಗೆ ಬಂದು 3 ತಿಂಗಳ ಬಳಿಕ ‘ಕೆಜಿಎಫ್ 2’ ಚಿತ್ರದಿಂದ ಸೃಷ್ಟಿ ಆಯ್ತು ಯಾವ ಚಿತ್ರವೂ ಮಾಡಿರದ ದಾಖಲೆ

Published On - 12:30 pm, Sat, 16 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ