AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ವಾಪಸ್ ಬಂದೇ ಬರುವೆ ಎಂಬ ಹೇಳಿಕೆ ಟ್ರೋಲ್ ಮಾಡುವವರನ್ನು ನಾನು ಕ್ಷಮಿಸುವೆ: ಫಡ್ನವಿಸ್

ವಿಶ್ವಾಸ ಮತ ಯಾಚನೆ ವೇಳೆ ವಿಪಕ್ಷದ ಕೆಲವು ಶಾಸಕರು ಇಡಿ, ಇಡಿ ಎಂದು ಕೂಗಿದರು. ಅದು ನಿಜ. ಹೊಸ ಸರ್ಕಾರ ರಚಿಸಿದ್ದೇ ಇಡಿ. ಇಡಿ ಎಂದರೆ ಏಕನಾಥ್ ಮತ್ತು ದೇವೇಂದ್ರ ಎಂದು ಫಡ್ನವಿಸ್ ಹೇಳಿದ್ದಾರೆ.

ನಾನು ವಾಪಸ್ ಬಂದೇ ಬರುವೆ ಎಂಬ ಹೇಳಿಕೆ ಟ್ರೋಲ್ ಮಾಡುವವರನ್ನು ನಾನು ಕ್ಷಮಿಸುವೆ: ಫಡ್ನವಿಸ್
ದೇವೇಂದ್ರ ಪಢ್ನವಿಸ್
TV9 Web
| Edited By: |

Updated on: Jul 04, 2022 | 4:09 PM

Share

ಮುಂಬೈ: 2019ರ ಮಹಾರಾಷ್ಟ್ರ(Maharashtra) ವಿಧಾನಸಭಾ ಚುನಾವಣೆಗೆ ಮುನ್ನ ನಾನು ವಾಪಸ್ ಬಂದೇ ಬರುವೆ ಎಂದು ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದ್ದರು. ಇದೀಗ ಫಡ್ನವಿಸ್, ಶಿಂಧೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ. ಏತನ್ಮಧ್ಯೆ, ನಾನು ವಾಪಸ್ ಬಂದೇ ಬರುವೆ ಎಂಬ ಹೇಳಿಕೆ ಟ್ರೋಲ್ ಆಗುತ್ತಿದ್ದು, ಟ್ರೋಲ್ ಮಾಡುವವರನ್ನು ನಾನು ಕ್ಷಮಿಸುವೆ ಎಂದು ಫಡ್ನವಿಸ್ ಹೇಳಿದ್ದಾರೆ. ಏಕನಾಥ್ ಶಿಂಧೆ (Eknath Shinde) ಅವರು ಸೋಮವಾರ ವಿಶ್ವಾಸ ಮತ ಗೆದ್ದ ನಂತರ ಪಡ್ನವಿಸ್ ಈ ಮಾತನ್ನು ಹೇಳಿದ್ದಾರೆ. 2019ರ ಮಹಾರಾಷ್ಟ್ರ ಚುನಾವಣೆಗೆ ಮುನ್ನ ಬಿಜೆಪಿಯಹಿರಿಯ ನಾಯಕ ಮತ್ತು ಮಾಜಿ ಸಿಎಂ ಫಡ್ನವಿಸ್ ಮೇ ಪುನಃ ಯೇ (ನಾನು ವಾಪಸ್ ಬರುವೆ) ಎಂದು ಹೇಳಿದ್ದು ಈ ಹೇಳಿಕೆ ಈಗ ಸಾಮಾಜಿಕ ಮಾಧ್ಯಮದಲ್ಲಿ ಮೀಮ್ ಆಗಿದೆ.  ಚುನಾವಣೆಯ ನಂತರ ಶಿವಸೇನಾ ಬಿಜೆಪಿ ಜತೆಗಿನ ಮೈತ್ರಿ ಮುರಿದು ಎನ್ ಸಿಪಿ ಮತ್ತು ಕಾಂಗ್ರೆಸ್ ಜತೆ ಕೈ ಜೋಡಿಸಿ ಸರ್ಕಾರ ರಚಿಸಿತ್ತು.

ಕಳೆದ ತಿಂಗಳು ಶಿಂಧೆ ಶಿವಸೇನಾದಲ್ಲಿ ಬಂಡಾಯವೆದ್ದು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಪತನಕ್ಕೆ ಕಾರಣವಾಗಿದ್ದರು. ಜೂನ್ 30ರಂದು ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ, ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ನಾನು ವಾಪಸ್ ಬರುವೆ ಎಂಬ ಹೇಳಿಕೆಯನ್ನು ಟ್ರೋಲ್ ಮಾಡಲಾಗುತ್ತಿದೆ. ನಾನು ಅವರನ್ನು ಕ್ಷಮಿಸುವ ಮೂಲಕ ಆ ಮುಯ್ಯಿ ತೀರಿಸುತ್ತಿದ್ದೇನೆ. ವಿಶ್ವಾಸ ಮತ ಯಾಚನೆ ವೇಳೆ ವಿಪಕ್ಷದ ಕೆಲವು ಶಾಸಕರು ಇಡಿ, ಇಡಿ ಎಂದು ಕೂಗಿದರು. ಅದು ನಿಜ. ಹೊಸ ಸರ್ಕಾರ ರಚಿಸಿದ್ದೇ ಇಡಿ. ಇಡಿ ಎಂದರೆ ಏಕನಾಥ್ ಮತ್ತು ದೇವೇಂದ್ರ ಎಂದು ಫಡ್ನವಿಸ್ ಹೇಳಿದ್ದಾರೆ.

ಇದನ್ನೂ ಓದಿ
Image
ಆಂಧ್ರಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಪ್ರತಿಮೆ ಅನಾವರಣ ಮಾಡಿದ ಮೋದಿ
Image
Maharashtra Floor Test Result 2022: ವಿಶ್ವಾಸಮತಯಾಚನೆಯಲ್ಲಿ ಗೆದ್ದು ಬೀಗಿದ ಏಕನಾಥ್ ಶಿಂಧೆ; ಸಿಎಂಗೆ 164 ಶಾಸಕರ ಬೆಂಬಲ
Image
ಮುಖ್ಯಮಂತ್ರಿ ಹುದ್ದೆಗೆ ಎಂದೂ ಬೇಡಿಕೆಯಿಟ್ಟಿರಲಿಲ್ಲ: ಏಕನಾಥ್ ಶಿಂದೆ

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೆಸರನ್ನು ಉಲ್ಲೇಖಿಸದೆಯೇ ಫಡ್ನವಿಸ್ ಅವರು ಮಹಾರಾಷ್ಟ್ರದಲ್ಲಿ ಕಳೆದ ಕೆಲವು ವರ್ಷಗಳಿಂದ ನಾಯಕತ್ವದ ಕೊರತೆ ಇತ್ತು. ಆದರೆ ಈಗ ಶಿಂಧೆ ಮತ್ತು ನಾನು ಇಬ್ಬರೂ ಇದ್ದೇವೆ. ನಾವು ಸದಾ ಜನರಿಗೆ ಲಭ್ಯವಾಗಿರುತ್ತೇವೆ ಎಂದಿದ್ದಾರೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!