‘ಮತ್ತೊಮ್ಮೆ ಮೋದಿ 2024’ ಗೋಡೆ ಬರಹ ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪ ಚಾಲನೆ

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲು ಹಾಗೂ ಬಿಜೆಪಿ ಅಧಿಕಾರಕ್ಕೇರಲು ಕೇಸರಿ ಕಲಿಗಳು ತಂತ್ರಗಾರಿಕೆಯನ್ನು ರಚಿಸುತ್ತಿದ್ದಾರೆ. ಇನ್ನೊಂದೆಡೆ, ಅಭಿಮಾಯನವನ್ನೂ ನಡೆಸುತ್ತಿದ್ದಾರೆ. ಮತ್ತೊಮ್ಮೆ ಮೋದಿ 2024 ಎಂಬ ಅಭಿಮಾಯನಕ್ಕೆ ಬಿಎಸ್ ಯಡಿಯೂರಪ್ಪ ಅವರು ಮೈಸೂರಿನಲ್ಲಿ ಚಾಲನೆ ನೀಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬಿವೈ ವಿಜಯೇಂದ್ರ ಅವರು ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

'ಮತ್ತೊಮ್ಮೆ ಮೋದಿ 2024' ಗೋಡೆ ಬರಹ ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪ ಚಾಲನೆ
ಮತ್ತೊಮ್ಮೆ ಮೋದಿ 2024 ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪ ಚಾಲನೆ
Follow us
| Updated By: Rakesh Nayak Manchi

Updated on: Feb 08, 2024 | 10:26 AM

ಮೈಸೂರು, ಫೆ.8: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಮತ್ತೆ ಪ್ರಧಾನಿಯನ್ನಾಗಿಸಲು ಹಾಗೂ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕ ಹಿಡಿಯಲು ಬಿಜೆಪಿ ಕಾರ್ಯಚಟುವಟಿಕೆಗಳನ್ನು ಆರಂಭಿಸಿದೆ. ಮತ್ತೊಮ್ಮೆ ಮೋದಿ 2024 ಎಂಬ ಗೋಡೆ ಬರಹ ಅಭಿಯಾನಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ಮೈಸೂರಿನಲ್ಲಿ ಇಂದು ಚಾಲನೆ ನೀಡಿದರು. ಇನ್ನೊಂದೆಡೆ, ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದರು.

ಚಾಮರಾಜ ಕ್ಷೇತ್ರದ ಪಡುವಾರಹಳ್ಳಿಯಲ್ಲಿ ಮತ್ತೊಮ್ಮೆ ಮೋದಿ 2024 ಎಂಬ ಗೋಡೆ ಬರಹ ದೀಪಕ್ಕೆ ಬಣ ಹಚ್ಚುವ ಮೂಲಕ ಅಭಿಯಾನಕ್ಕೆ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಮಾಜಿ ಶಾಸಕರಾದ ಎಲ್ ನಾಗೇಂದ್ರ, ಎನ್ ಮಹೇಶ್, ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ, ಬಿಜೆಪಿ ಮುಖಂಡ ಕವೀಶ್ ಗೌಡ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ: Bharat Ratna LK Advani: ಎಲ್​ಕೆ ಅಡ್ವಾಣಿಗೆ ಭಾರತ ರತ್ನ: ಬಿಎಸ್ ಯಡಿಯೂರಪ್ಪ ಸೇರಿ ಕರ್ನಾಟಕ ಬಿಜೆಪಿ ನಾಯಕರ ಹರ್ಷ

ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯಿಂದ ಆಯೋಜಿಸಲಾಗಿರುವ ಗ್ರಾಮ ಚಲೋ ಅಭಿಯಾನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಚಾಲನೆ ನೀಡಿದರು. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಹೋಬಳಿಯ ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.

ಈ ವೇಳೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್‌. ಹರೀಶ್, ಪಕ್ಷಕ್ಷೆ ಮರು ಸೇರ್ಪಡೆಯಾಗಿರುವ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡ ಮಾರೇಗೌಡ ಭಾಗಿಯಾದರು. ಕಾರ್ಯಕ್ರಮದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಗೈರಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ