AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಬ್ರದರ್ಸ್ ‘ಬೃಹತ್’ ಆಪರೇಷನ್: ಸಾಮ್ರಾಟ್ ಅಶೋಕ್ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೇಟರ್​ಗಳಿಗೆ ‘ಕೈ’ ಗಾಳ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಡಿಕೆ ಬ್ರದರ್ಸ್ ಆಪರೇಷನ್ ಹಸ್ತದ ಮೂಲ ಪಕ್ಷ ಬಲಪಡಿಸಲು ಪ್ಲ್ಯಾನ್ ಮಾಡಿದ್ದಾರೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಮಾಜಿ ಕಾರ್ಪೊರೇಟರ್​ಗಳನ್ನೇ ಟಾರ್ಗೆಟ್ ಮಾಡಲಾಗಿದೆ. 10ಕ್ಕೂ ಹೆಚ್ಚು ಬಿಜೆಪಿಯ ಮಾಜಿ ಕಾರ್ಪೊರೇಟರ್​ಗಳನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆಯಲು ವೇದಿಕೆ ಸಜ್ಜಾಗಿದೆ.

ಡಿಕೆ ಬ್ರದರ್ಸ್ ‘ಬೃಹತ್’ ಆಪರೇಷನ್: ಸಾಮ್ರಾಟ್ ಅಶೋಕ್ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೇಟರ್​ಗಳಿಗೆ ‘ಕೈ’ ಗಾಳ
ಡಿಕೆ ಶಿವಕುಮಾರ್ & ಆರ್ ಅಶೋಕ್
TV9 Web
| Edited By: |

Updated on: Sep 13, 2023 | 7:17 AM

Share

ಬೆಂಗಳೂರು, (ಸೆಪ್ಟೆಂಬರ್ 13): ರಾಜ್ಯ ರಾಜಕಾರಣದಲ್ಲಿ ಮತ್ತೆ ಆಪರೇಷನ್ ಹಸ್ತ (Congress Operation Hastha) ಸದ್ದು ಮಾಡುತ್ತಿದೆ. ಕೆಲ ದಿನಗಳ ಕಾಲ ಸೈಲೆಂಟ್ ಆಗಿದ್ದ ಆಪರೇಷನ್ ಮತ್ತೆ ಸುದ್ದಿಯಲ್ಲಿದೆ. ಆದ್ರೆ ಈ ಬಾರಿ ಒಂದು ಟ್ವಿಸ್ಟ್ ಇದೆ. ಇಷ್ಟು ದಿನ ದೊಡ್ಡ ತಿಮಿಂಗಿಲಗಳಿಗೆ ಗಾಳ ಹಾಕುತ್ತಿದ್ದ ಕೈ ಪಾಳಯ ಈ ಬಾರಿ ಬೆಂಗಳೂರು ಪಾಲಿಕೆ ವ್ಯಾಪ್ತಿಗೆ ಎಂಟ್ರಿ ಕೊಟ್ಟಿದೆ. ಬಿಜೆಪಿ ಮಾಜಿ ಕಾರ್ಪೊರೇಟರ್​ಗಳ ಮೇಲೆ ಕಣ್ಣಿಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಂಸದ ಡಿಕೆ ಸುರೇಶ್ ಆರ್. ಅಶೋಕ್  (R Ashok) ಅಡ್ಡಾದಲ್ಲೇ ಆಪರೇಷನ್​ಗಿಳಿದಿದ್ದಾರೆ.

ಬಿಜೆಪಿಯ 10ಕ್ಕೂ ಹೆಚ್ಚು ಮಾಜಿ ಕಾರ್ಪೊರೇಟರ್​ಗಳ ಆಪರೇಷನ್ ಬಹುತೇಕ ಸಕ್ಸಸ್ ಆಗಿದ್ದು, ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತಾದ್ರೆ ಸೆಪ್ಟೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕ್ಷೇತ್ರದಲ್ಲಿ ಅಶೋಕ್ ಗೆಲುವಿಗೆ ರೂವಾರಿಗಳಾಗಿದ್ದವರೇ ಆಪರೇಷನ್​ಗೆ ತುತ್ತಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ವೇಳೆಯೇ ಆರ್. ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರ ಕ್ಷೇತ್ರದ ಮೇಲೆ ಡಿಕೆ ಬ್ರದರ್ಸ್ ಒಂದು ಕಣ್ಣಿಟ್ಟಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆರ್. ಅಶೋಕ್​ಗೆ ಕೋಟೆಯಂತಿರೋ ಮಾಜಿ ಕಾರ್ಪೊರೇಟರ್​ಗಳನ್ನೇ ಟಾರ್ಗೆಟ್ ಮಾಡಿ ಆಪರೇಷನ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಸಿಎಂ ವಿರುದ್ಧ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಬಹಿರಂಗ ಟೀಕೆ; ಎಐಸಿಸಿಯಿಂದ ಶೋಕಾಸ್ ನೋಟಿಸ್

ಯಾರಿಗೆಲ್ಲಾ  ಆಪರೇಷನ್?

ಬಿಜೆಪಿ ಮಾಜಿ ಪಾಲಿಕೆ ಸದಸ್ಯಎಲ್. ಶ್ರೀನಿವಾಸ್, ಬೊಮ್ಮನಹಳ್ಳಿ ವಾರ್ಡ್ ಮಾಜಿ ಸದಸ್ಯ ಆಂಜಿನಪ್ಪ, ಪದ್ಮನಾಭನಗರದ ಮಾಜಿ ಸದಸ್ಯೆ ಶೋಭಾ ಆಂಜಿನಪ್ಪ, ಗಣೇಶ ಮಂದಿರ ವಾರ್ಡ್ ಮಾಜಿ ಸದಸ್ಯ ಗೋವಿಂದ ರಾಜ್, ಮಾಜಿ ಬಿಬಿಎಂಪಿ ಸದಸ್ಯ ಹೆಚ್. ನಾರಾಯಣ್, ಚಿಕ್ಕಲಸಂದ್ರ ಪಾಲಿಕೆ ಮಾಜಿ ಸದಸ್ಯ ವೆಂಕಟಸ್ವಾಮಿ ನಾಯ್ಡು, ಕುಮಾರಸ್ವಾಮಿ ವಾರ್ಡ್ ಮಾಜಿ ಸದಸ್ಯರ ಹೆಚ್.ಸುರೇಶ್, ಚಿಕ್ಕಲಸಂದ್ರ ವಾರ್ಡ್ ಮಾಜಿ ಸದಸ್ಯೆ ಸುಪ್ರಿಯ ಶೇಖರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲಕ್ಷ್ಮೀ ಸುರೇಶ್, ಬಿಜೆಪಿ ಘಟಕ ಮಾಜಿ ಅಧ್ಯಕ್ಷ ರಂಗದಾಮೇಗೌಡ.. ಹೀಗೆ 10ಕ್ಕೂ ಹೆಚ್ಚು ಮಾಜಿ ಕಾರ್ಪೊರೇಟರ್​ಗಳನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಲು ಪ್ಲ್ಯಾನ್ ಮಾಡಲಾಗಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಡಿಕೆ ಬ್ರದರ್ಸ್ ಆಪರೇಷನ್ ಹಸ್ತದ ಮೂಲ ಪಕ್ಷ ಬಲಪಡಿಸಲು ಪ್ಲ್ಯಾನ್ ಮಾಡಿದ್ದಾರೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಮಾಜಿ ಕಾರ್ಪೊರೇಟರ್​ಗಳನ್ನೇ ಟಾರ್ಗೆಟ್ ಮಾಡಲಾಗಿದೆ. 10ಕ್ಕೂ ಹೆಚ್ಚು ಬಿಜೆಪಿಯ ಮಾಜಿ ಕಾರ್ಪೊರೇಟರ್​ಗಳನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆಯಲು ವೇದಿಕೆ ಸಜ್ಜಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ