AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಬ್ರದರ್ಸ್ ‘ಬೃಹತ್’ ಆಪರೇಷನ್: ಸಾಮ್ರಾಟ್ ಅಶೋಕ್ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೇಟರ್​ಗಳಿಗೆ ‘ಕೈ’ ಗಾಳ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಡಿಕೆ ಬ್ರದರ್ಸ್ ಆಪರೇಷನ್ ಹಸ್ತದ ಮೂಲ ಪಕ್ಷ ಬಲಪಡಿಸಲು ಪ್ಲ್ಯಾನ್ ಮಾಡಿದ್ದಾರೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಮಾಜಿ ಕಾರ್ಪೊರೇಟರ್​ಗಳನ್ನೇ ಟಾರ್ಗೆಟ್ ಮಾಡಲಾಗಿದೆ. 10ಕ್ಕೂ ಹೆಚ್ಚು ಬಿಜೆಪಿಯ ಮಾಜಿ ಕಾರ್ಪೊರೇಟರ್​ಗಳನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆಯಲು ವೇದಿಕೆ ಸಜ್ಜಾಗಿದೆ.

ಡಿಕೆ ಬ್ರದರ್ಸ್ ‘ಬೃಹತ್’ ಆಪರೇಷನ್: ಸಾಮ್ರಾಟ್ ಅಶೋಕ್ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೇಟರ್​ಗಳಿಗೆ ‘ಕೈ’ ಗಾಳ
ಡಿಕೆ ಶಿವಕುಮಾರ್ & ಆರ್ ಅಶೋಕ್
TV9 Web
| Edited By: |

Updated on: Sep 13, 2023 | 7:17 AM

Share

ಬೆಂಗಳೂರು, (ಸೆಪ್ಟೆಂಬರ್ 13): ರಾಜ್ಯ ರಾಜಕಾರಣದಲ್ಲಿ ಮತ್ತೆ ಆಪರೇಷನ್ ಹಸ್ತ (Congress Operation Hastha) ಸದ್ದು ಮಾಡುತ್ತಿದೆ. ಕೆಲ ದಿನಗಳ ಕಾಲ ಸೈಲೆಂಟ್ ಆಗಿದ್ದ ಆಪರೇಷನ್ ಮತ್ತೆ ಸುದ್ದಿಯಲ್ಲಿದೆ. ಆದ್ರೆ ಈ ಬಾರಿ ಒಂದು ಟ್ವಿಸ್ಟ್ ಇದೆ. ಇಷ್ಟು ದಿನ ದೊಡ್ಡ ತಿಮಿಂಗಿಲಗಳಿಗೆ ಗಾಳ ಹಾಕುತ್ತಿದ್ದ ಕೈ ಪಾಳಯ ಈ ಬಾರಿ ಬೆಂಗಳೂರು ಪಾಲಿಕೆ ವ್ಯಾಪ್ತಿಗೆ ಎಂಟ್ರಿ ಕೊಟ್ಟಿದೆ. ಬಿಜೆಪಿ ಮಾಜಿ ಕಾರ್ಪೊರೇಟರ್​ಗಳ ಮೇಲೆ ಕಣ್ಣಿಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಂಸದ ಡಿಕೆ ಸುರೇಶ್ ಆರ್. ಅಶೋಕ್  (R Ashok) ಅಡ್ಡಾದಲ್ಲೇ ಆಪರೇಷನ್​ಗಿಳಿದಿದ್ದಾರೆ.

ಬಿಜೆಪಿಯ 10ಕ್ಕೂ ಹೆಚ್ಚು ಮಾಜಿ ಕಾರ್ಪೊರೇಟರ್​ಗಳ ಆಪರೇಷನ್ ಬಹುತೇಕ ಸಕ್ಸಸ್ ಆಗಿದ್ದು, ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತಾದ್ರೆ ಸೆಪ್ಟೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕ್ಷೇತ್ರದಲ್ಲಿ ಅಶೋಕ್ ಗೆಲುವಿಗೆ ರೂವಾರಿಗಳಾಗಿದ್ದವರೇ ಆಪರೇಷನ್​ಗೆ ತುತ್ತಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ವೇಳೆಯೇ ಆರ್. ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರ ಕ್ಷೇತ್ರದ ಮೇಲೆ ಡಿಕೆ ಬ್ರದರ್ಸ್ ಒಂದು ಕಣ್ಣಿಟ್ಟಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆರ್. ಅಶೋಕ್​ಗೆ ಕೋಟೆಯಂತಿರೋ ಮಾಜಿ ಕಾರ್ಪೊರೇಟರ್​ಗಳನ್ನೇ ಟಾರ್ಗೆಟ್ ಮಾಡಿ ಆಪರೇಷನ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಸಿಎಂ ವಿರುದ್ಧ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಬಹಿರಂಗ ಟೀಕೆ; ಎಐಸಿಸಿಯಿಂದ ಶೋಕಾಸ್ ನೋಟಿಸ್

ಯಾರಿಗೆಲ್ಲಾ  ಆಪರೇಷನ್?

ಬಿಜೆಪಿ ಮಾಜಿ ಪಾಲಿಕೆ ಸದಸ್ಯಎಲ್. ಶ್ರೀನಿವಾಸ್, ಬೊಮ್ಮನಹಳ್ಳಿ ವಾರ್ಡ್ ಮಾಜಿ ಸದಸ್ಯ ಆಂಜಿನಪ್ಪ, ಪದ್ಮನಾಭನಗರದ ಮಾಜಿ ಸದಸ್ಯೆ ಶೋಭಾ ಆಂಜಿನಪ್ಪ, ಗಣೇಶ ಮಂದಿರ ವಾರ್ಡ್ ಮಾಜಿ ಸದಸ್ಯ ಗೋವಿಂದ ರಾಜ್, ಮಾಜಿ ಬಿಬಿಎಂಪಿ ಸದಸ್ಯ ಹೆಚ್. ನಾರಾಯಣ್, ಚಿಕ್ಕಲಸಂದ್ರ ಪಾಲಿಕೆ ಮಾಜಿ ಸದಸ್ಯ ವೆಂಕಟಸ್ವಾಮಿ ನಾಯ್ಡು, ಕುಮಾರಸ್ವಾಮಿ ವಾರ್ಡ್ ಮಾಜಿ ಸದಸ್ಯರ ಹೆಚ್.ಸುರೇಶ್, ಚಿಕ್ಕಲಸಂದ್ರ ವಾರ್ಡ್ ಮಾಜಿ ಸದಸ್ಯೆ ಸುಪ್ರಿಯ ಶೇಖರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲಕ್ಷ್ಮೀ ಸುರೇಶ್, ಬಿಜೆಪಿ ಘಟಕ ಮಾಜಿ ಅಧ್ಯಕ್ಷ ರಂಗದಾಮೇಗೌಡ.. ಹೀಗೆ 10ಕ್ಕೂ ಹೆಚ್ಚು ಮಾಜಿ ಕಾರ್ಪೊರೇಟರ್​ಗಳನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಲು ಪ್ಲ್ಯಾನ್ ಮಾಡಲಾಗಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಡಿಕೆ ಬ್ರದರ್ಸ್ ಆಪರೇಷನ್ ಹಸ್ತದ ಮೂಲ ಪಕ್ಷ ಬಲಪಡಿಸಲು ಪ್ಲ್ಯಾನ್ ಮಾಡಿದ್ದಾರೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಮಾಜಿ ಕಾರ್ಪೊರೇಟರ್​ಗಳನ್ನೇ ಟಾರ್ಗೆಟ್ ಮಾಡಲಾಗಿದೆ. 10ಕ್ಕೂ ಹೆಚ್ಚು ಬಿಜೆಪಿಯ ಮಾಜಿ ಕಾರ್ಪೊರೇಟರ್​ಗಳನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆಯಲು ವೇದಿಕೆ ಸಜ್ಜಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್