AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಮತ್ತೊಂದು ದಲಿತಾಸ್ತ್ರ ಪ್ರಯೋಗ, ಏನದು?

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಕೇಂದ್ರದಲ್ಲಿ ಎನ್​​ಡಿಎ ನೇತೃತ್ವದ ಸರ್ಕಾರ ರಚನೆಗೆ ಕೊಡುಗೆ ನೀಡುವ ಗುರಿಯನ್ನು ಇಟ್ಟುಕೊಂಡಿದೆ. ಈಗಾಗಲೇ ತಯಾರಿ ಆರಂಭಿಸಿದಿ ವಿಪಕ್ಷ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ದಲಿತ ಸಮುದಾಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಮತ್ತೊಂದು ದಲಿತಾಸ್ತ್ರ ಪ್ರಯೋಗ, ಏನದು?
ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್​ಸಿ ಮತ್ತು ಎಸ್​ಟಿ ಮೋರ್ಛಾಗಳ ಮೂಲಕ ಪಾದಯಾತ್ರೆ ನಡೆಸಲು ವಿಪಕ್ಷ ಬಿಜೆಪಿ ಪ್ಲ್ಯಾನ್
ಕಿರಣ್​ ಹನಿಯಡ್ಕ
| Edited By: |

Updated on:Oct 19, 2023 | 7:08 AM

Share

ಬೆಂಗಳೂರು, ಅ.19: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ (BJP), ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಕೇಂದ್ರದಲ್ಲಿ ಎನ್​​ಡಿಎ (NDA) ನೇತೃತ್ವದ ಸರ್ಕಾರ ರಚನೆಗೆ ಕೊಡುಗೆ ನೀಡುವ ಗುರಿಯನ್ನು ಇಟ್ಟುಕೊಂಡಿದೆ. ಈಗಾಗಲೇ ತಯಾರಿ ಆರಂಭಿಸಿದಿ ವಿಪಕ್ಷ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ದಲಿತ ಸಮುದಾಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದೆ.

ತಾನು ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಹಣಕಾಸಿನ ಕೊರತೆ ಎದುರಾಗಿದೆ. ಹೀಗಾಗಿ ಎಸ್​​ಸಿಪಿ ಟಿಎಸ್​ಪಿ ಹಣವನ್ನು ಮಹಿಳೆಯರಿಗೆ ಉಚಿತವಾಗಿ ಸಾರಿಗೆ ಬಸ್​ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡುವ ಶಕ್ತಿ ಯೋಜನೆಗೆ ಬಳಕೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಎಸ್​ಸಿಪಿ ಟಿಎಸ್​ಪಿ ಹಣವನ್ನು ಶಕ್ತಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಿರುವ ಆರೋಪ ಮುಂದಿಟ್ಟುಕೊಂಡು ಎಸ್​ಸಿ ಮತ್ತು ಎಸ್​ಟಿ ಮೋರ್ಛಾಗಳ ಮೂಲಕ ಪಾದಯಾತ್ರೆ ಮಾಡಲು ಫ್ಲ್ಯಾನ್ ಹಾಕಿಕೊಂಡಿದೆ.

ಇದನ್ನೂ ಓದಿ: ಹೆಚ್ಚಾಯ್ತು ಬಿಜೆಪಿ, ಕಾಂಗ್ರೆಸ್ ವಾಕ್ಸಮರ: ಆರೋಪಗಳಿಗೆ ಟಕ್ಕರ್ ಕೊಡಲು ಆಪ್ತರಿಗೆ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?

ಒಂದು ತಿಂಗಳ ಹಿಂದೆಯೇ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾಜಿ ಸಚಿವ ಗೋವಿಂದ ಎಂ ಕಾರಜೋಳ ಅವರು ಪ್ರಸ್ತಾಪ ಮಾಡಿದ್ದು, ಬಳಿಕ ಸುಮ್ಮನಾಗಿದ್ದರು. ದಾವಣಗೆರೆ ಜಿಲ್ಲೆಯ ಹರಿಹರದಿಂದ ಪಾದಯಾತ್ರೆ ನಡೆಸಲು ಕಾರಜೋಳ ಅವರು ಒಲವು ಹೊಂದಿದ್ದರು.

ಆದರೆ, ಮೋರ್ಛಾ ಅಧ್ಯಕ್ಷರು ಮೈಸೂರಿನಿಂದ ಪಾದಯಾತ್ರೆಯನ್ನು ಆರಂಭಿಸಲು ಒಲವು ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತವರು ಜಿಲ್ಲೆಗಳಲ್ಲಿ ಪಾದಯಾತ್ರೆ ಸಾಗುತ್ತದೆ ಎಂಬ ಕಾರಣಕ್ಕಾಗಿ ಮೈಸೂರಿನಿಂದ ಆರಂಭಕ್ಕೆ ಒಲವು ಹೊಂದಿದ್ದಾರೆ.

ಬೆಂಗಳೂರಿಗೆ ಪಕ್ಷದ ದಲಿತ ಸಮುದಾಯದ ನಾಯಕರನ್ನು ಒಳಗೊಂಡು ಪಾದಯಾತ್ರೆ ಬಗ್ಗೆ ನಡೆದಿರುವ ಪ್ಲ್ಯಾನ್ ನಡೆದಿದೆ. ಆದರೆ ಎಲ್ಲಿಂದ ಮತ್ತು ಯಾವಾಗ ಆರಂಭಿಸಬೇಕು ಎಂಬ ವಿಚಾರದಲ್ಲಿ ಬಿಜೆಪಿ ನಾಯಕರು ಇದುವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ಒಟ್ಟಾರೆಯಾಗಿ ಎಸ್​ಸಿಪಿ ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸಿದ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕ್ ಅನ್ನು ತಮ್ಮತ್ತ ತಿರುಗಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಇಟ್ಟುಕೊಂಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 am, Thu, 19 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ