AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಮತ್ತೊಂದು ದಲಿತಾಸ್ತ್ರ ಪ್ರಯೋಗ, ಏನದು?

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಕೇಂದ್ರದಲ್ಲಿ ಎನ್​​ಡಿಎ ನೇತೃತ್ವದ ಸರ್ಕಾರ ರಚನೆಗೆ ಕೊಡುಗೆ ನೀಡುವ ಗುರಿಯನ್ನು ಇಟ್ಟುಕೊಂಡಿದೆ. ಈಗಾಗಲೇ ತಯಾರಿ ಆರಂಭಿಸಿದಿ ವಿಪಕ್ಷ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ದಲಿತ ಸಮುದಾಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಮತ್ತೊಂದು ದಲಿತಾಸ್ತ್ರ ಪ್ರಯೋಗ, ಏನದು?
ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್​ಸಿ ಮತ್ತು ಎಸ್​ಟಿ ಮೋರ್ಛಾಗಳ ಮೂಲಕ ಪಾದಯಾತ್ರೆ ನಡೆಸಲು ವಿಪಕ್ಷ ಬಿಜೆಪಿ ಪ್ಲ್ಯಾನ್
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on:Oct 19, 2023 | 7:08 AM

ಬೆಂಗಳೂರು, ಅ.19: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ (BJP), ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಕೇಂದ್ರದಲ್ಲಿ ಎನ್​​ಡಿಎ (NDA) ನೇತೃತ್ವದ ಸರ್ಕಾರ ರಚನೆಗೆ ಕೊಡುಗೆ ನೀಡುವ ಗುರಿಯನ್ನು ಇಟ್ಟುಕೊಂಡಿದೆ. ಈಗಾಗಲೇ ತಯಾರಿ ಆರಂಭಿಸಿದಿ ವಿಪಕ್ಷ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ದಲಿತ ಸಮುದಾಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದೆ.

ತಾನು ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಹಣಕಾಸಿನ ಕೊರತೆ ಎದುರಾಗಿದೆ. ಹೀಗಾಗಿ ಎಸ್​​ಸಿಪಿ ಟಿಎಸ್​ಪಿ ಹಣವನ್ನು ಮಹಿಳೆಯರಿಗೆ ಉಚಿತವಾಗಿ ಸಾರಿಗೆ ಬಸ್​ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡುವ ಶಕ್ತಿ ಯೋಜನೆಗೆ ಬಳಕೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಎಸ್​ಸಿಪಿ ಟಿಎಸ್​ಪಿ ಹಣವನ್ನು ಶಕ್ತಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಿರುವ ಆರೋಪ ಮುಂದಿಟ್ಟುಕೊಂಡು ಎಸ್​ಸಿ ಮತ್ತು ಎಸ್​ಟಿ ಮೋರ್ಛಾಗಳ ಮೂಲಕ ಪಾದಯಾತ್ರೆ ಮಾಡಲು ಫ್ಲ್ಯಾನ್ ಹಾಕಿಕೊಂಡಿದೆ.

ಇದನ್ನೂ ಓದಿ: ಹೆಚ್ಚಾಯ್ತು ಬಿಜೆಪಿ, ಕಾಂಗ್ರೆಸ್ ವಾಕ್ಸಮರ: ಆರೋಪಗಳಿಗೆ ಟಕ್ಕರ್ ಕೊಡಲು ಆಪ್ತರಿಗೆ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?

ಒಂದು ತಿಂಗಳ ಹಿಂದೆಯೇ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾಜಿ ಸಚಿವ ಗೋವಿಂದ ಎಂ ಕಾರಜೋಳ ಅವರು ಪ್ರಸ್ತಾಪ ಮಾಡಿದ್ದು, ಬಳಿಕ ಸುಮ್ಮನಾಗಿದ್ದರು. ದಾವಣಗೆರೆ ಜಿಲ್ಲೆಯ ಹರಿಹರದಿಂದ ಪಾದಯಾತ್ರೆ ನಡೆಸಲು ಕಾರಜೋಳ ಅವರು ಒಲವು ಹೊಂದಿದ್ದರು.

ಆದರೆ, ಮೋರ್ಛಾ ಅಧ್ಯಕ್ಷರು ಮೈಸೂರಿನಿಂದ ಪಾದಯಾತ್ರೆಯನ್ನು ಆರಂಭಿಸಲು ಒಲವು ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತವರು ಜಿಲ್ಲೆಗಳಲ್ಲಿ ಪಾದಯಾತ್ರೆ ಸಾಗುತ್ತದೆ ಎಂಬ ಕಾರಣಕ್ಕಾಗಿ ಮೈಸೂರಿನಿಂದ ಆರಂಭಕ್ಕೆ ಒಲವು ಹೊಂದಿದ್ದಾರೆ.

ಬೆಂಗಳೂರಿಗೆ ಪಕ್ಷದ ದಲಿತ ಸಮುದಾಯದ ನಾಯಕರನ್ನು ಒಳಗೊಂಡು ಪಾದಯಾತ್ರೆ ಬಗ್ಗೆ ನಡೆದಿರುವ ಪ್ಲ್ಯಾನ್ ನಡೆದಿದೆ. ಆದರೆ ಎಲ್ಲಿಂದ ಮತ್ತು ಯಾವಾಗ ಆರಂಭಿಸಬೇಕು ಎಂಬ ವಿಚಾರದಲ್ಲಿ ಬಿಜೆಪಿ ನಾಯಕರು ಇದುವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ಒಟ್ಟಾರೆಯಾಗಿ ಎಸ್​ಸಿಪಿ ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸಿದ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕ್ ಅನ್ನು ತಮ್ಮತ್ತ ತಿರುಗಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಇಟ್ಟುಕೊಂಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 am, Thu, 19 October 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ