AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಯಾರಿಗೆ? ಸುಳಿವು ನೀಡಿದ ಆರ್​ ಅಶೋಕ್​​

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ನನಗೆ ಬೇಕು, ಬೇರೆ ಕಡೆ ನೀಡಿದರೇ ನನಗೆ ರಾಜಕೀಯ ಬೇಡ ಎಂದು ಸಂಸದೆ ಸುಮಲತಾ ಅಂಬರೀಶ್​ ತಮ್ಮ ಅಭಿಪ್ರಾಯ ತಿಳಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ವಿಪಕ್ಷ ನಾಯಕ ಆರ್​ ಅಶೋಕ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್​ ಯಾರಿಗೆ ದೊರೆಯಲಿದೆ ಎಂಬುವುದರ ಬಗ್ಗೆ ಸುಳಿವು ನೀಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಯಾರಿಗೆ? ಸುಳಿವು ನೀಡಿದ ಆರ್​ ಅಶೋಕ್​​
ಆರ್​ ಅಶೋಕ್​
Follow us
Anil Kalkere
| Updated By: ವಿವೇಕ ಬಿರಾದಾರ

Updated on: Jan 28, 2024 | 12:45 PM

ಬೆಂಗಳೂರು ಜನವರಿ 28: ಲೋಕಸಭಾ ಚುನಾವಣೆಯಲ್ಲಿ (Lokasbha Election) ಮಂಡ್ಯ (Mandya) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್​ ಯಾರಿಗೆ ಎಂಬ ಪ್ರಶ್ನೆ ಉದ್ಭವಿಸಿದೆ. ಬಿಜೆಪಿಯನ್ನು ಬೆಂಬಲಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಅವರಿಗಾ ಅಥವಾ ಎನ್​​ಡಿಎ ಮೈತ್ರಿಕೂಟಕ್ಕೆ ಸೇರಿರುವ ಜೆಡಿಎಸ್​​ಗಾ ಎಂಬ ಪ್ರಶ್ನೆ ಉದಯವಾಗಿದೆ. ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ (R Ashok) ಮಹತ್ವದ ಸುಳಿವು ನೀಡಿದ್ದಾರೆ. ಹೌದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿ ಗೆಲ್ಲುತ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಜೆಡಿಎಸ್​​​​ಗೆ ಟಿಕೆಟ್ ಅಂತ ಸುಳಿವು ಕೊಟ್ಟಿದ್ದಾರೆ.

ಹೆಣ ಹೊರುವುದಕ್ಕೂ ಸರ್ಕಾರದ ಬಳಿ ಹಣ ಇಲ್ಲ ಅನ್ನಿಸುತ್ತೆ

ಇನ್ನು ಆರ್​ ಅಶೋಕ್​ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಕಾಸಿಲ್ಲದ ಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ಏಳು ತಾಸು ವಿದ್ಯುತ್ ಕೊಡುವುದಾಗಿ ಅಧಿವೇಶನದಲ್ಲಿ ಹೇಳಿದ್ದರು. ಅಧಿವೇಶನ ಮುಗಿದ ಮೇಲೆ ಮೂರು ತಾಸು ವಿದ್ಯುತ್ ಕೊಡುವುದಾಗಿ ಹೇಳಿದರು. ಇದು ಉಡಾಫೆ ಸರ್ಕಾರ, ರೈತರಿಗೆ ಕೊಡುವುದಕ್ಕೆ ಹಣ ಇಲ್ಲ. ಸಲಹೆಗಾರರನ್ನು ನೇಮಿಸಿಕೊಂಡು ದುಂದು ವೆಚ್ಚ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹೋಪ್ ಲೆಸ್ ಬಜೆಟ್ ಮಂಡನೆ ಮಾಡುತ್ತಾರೆ. ಅಂಗನವಾಡಿ ನೌಕರರ ವೇತನ ಬಿಡುಗಡೆಗೂ ಇವರ ಬಳಿ ಹಣವಿಲ್ಲ ಎಂದು ವಾಗ್ದಾಳಿ ಮಾಡಿದರು.

ಅಧಿವೇಶನಕ್ಕೂ ಮುನ್ನ ಬಿಜೆಪಿ ಹಲವು ಜಿಲ್ಲೆಗಳಲ್ಲಿ ಬರ ಅಧ್ಯಯನ ನಡೆಸಿತು. ನಾಳೆ (ಜ.29) ರಂದು ಕೋಲಾರದಲ್ಲಿ ರೈತರ ಪರ ನಾವು ಹೋರಾಟ ಮಾಡುತ್ತಿದ್ದೇವೆ. ಕೋಲಾರದ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ. ಜನವರಿ 30 ರಂದು ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು. ಇಡೀ‌ ದೇಶದಲ್ಲಿ ನಮ್ಮ ರಾಜ್ಯ ಮಾದರಿಯಾಗಿತ್ತು. ಕಳೆದ 20 ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ವಿ. ಸರ್ ಪ್ಲಸ್ ಬಜೆಟ್ ಮಂಡನೆ ಮಾಡಿದ್ವಿ. ಈಗ ಸಿದ್ದರಾಮಯ್ಯ ಹೋಪ್ ಲೆಸ್ ಬಜೆಟ್ ಮಂಡನೆ ಮಾಡಲಿದ್ದಾರೆ. ರಸ್ತೆಗಳು ಸಂಪೂರ್ಣವಾಗಿ ನಿರ್ಮಾಣವಾಗದೆ ಹಾಗೆ ಇವೆ. ಬಿಲ್ಡಿಂಗ್ ಕೆಲಸಗಳು ಹಾಗೆ ಉಳಿದಿವೆ. ಸರ್ಕಾರ ದಿವಾಳಿ ಆಗಿದೆ ಎಂದರು.

ಕಾಂಗ್ರೆಸ್ ಗ್ಯಾರಂಟಿ ಎಲ್ಲ ಸುಳ್ಳು ಗ್ಯಾರಂಟಿ

34 ಶಾಸಕರಿಗೆ ಕ್ಯಾಬಿನೆಟ್ ದರ್ಜೆಯ ನಿಗಮ ಮಂಡಳಿ ಕೊಟ್ಟಿದ್ದಾರೆ. ಸ್ಪೆಷಲ್ ಅಡ್ವೈಸರ್, ಮೆಡಿಕಲ್ ಅಡ್ವೈಸರ್ ಅಂತೆಲ್ಲ ನೇಮಿಸಿದ್ದಾರೆ. ಇದಕ್ಕೆಲ್ಲ ಎಲ್ಲಿಂದ ಹಣ ಬಂತು ಇವರಿಗೆ? ಪ್ರಧಾನಿ ಮೋದಿ ಗ್ಯಾರಂಟಿ ಪಕ್ಕಾ ಗ್ಯಾರಂಟಿ. ಕಾಂಗ್ರೆಸ್ ಗ್ಯಾರಂಟಿ ಎಲ್ಲ ಸುಳ್ಳು ಗ್ಯಾರಂಟಿ. ಅದಕ್ಕೆ‌ ಸಾಕ್ಷಿ ರಾಮನಗರ ಶಾಸಕರು. 70 ವರ್ಷದಿಂದ ರಾಮ ಬೆಟ್ಟ ರಾಮನಗರದಲ್ಲೇ ಇತ್ತಲ್ವಾ, ಈಗ ರಾಮ ಮಂದಿರ ಕಟ್ಟುತ್ತಾರಂತೆ. ಬೆಟ್ಟ ಕಾಣುತ್ತಿರಲಿಲ್ವ? ಹೃದಯದಿಂದ ರಾಮ ಬರಬೇಕು. ಕೇವಲ ಬಾಯಲ್ಲಿ ಹೇಳುವುದಲ್ಲ ಎಂದು ಹರಿಹಾಯ್ದರು.

ಇದನ್ನೂ ಓದಿ: ಬಿಜೆಪಿಯಿಂದಲೇ ಸ್ಪರ್ಧೆಗೆ ತೀರ್ಮಾನ, ಮಂಡ್ಯ ಬಿಟ್ಟು ಬೇರೆ ಕಡೆ ಟಿಕೆಟ್‌ ನೀಡಿದ್ರೆ ರಾಜಕೀಯವೇ ಬೇಡವೆಂದ ಸುಮಲತಾ

ರಾಮನ ಜನ್ಮ ದಿನಾಂಕ ಸರ್ಟಿಫಿಕೇಟ್ ಕೇಳಿದವರು ಕಾಂಗ್ರೆಸ್​ನವರು. ವಿವಾದಿತ ಭೂಮಿ ಎಂದು ಸಿದ್ದರಾಮಯ್ಯ ಹೇಳಿದರು. ಈಗ ಅವರ ಅಪ್ಪನ ರಾಮ ಮಂದಿರವೇ ಎಂದು ಕೇಳುತ್ತಾರೆ. ಹೌದು ನಾವೇ ಕರಸೇವಕರಾಗಿ ಹೋರಾಡಿದ್ದು. ನಿಮ್ಮ ಮನೆಯಿಂದ ಒಬ್ಬರಾದರೂ ಬಂದಿದ್ರಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ವೀರಶೈವ ವಿರೋಧಿ

ತಿಂಗಳ ಅಂತ್ಯಕ್ಕೆ ಕಾಂತರಾಜು ವರದಿ ಸ್ವೀಕಾರ ವಿಚಾರವಾಗಿ ಮಾತನಾಡಿದ ಅವರು, ಕಾಂತರಾಜು ವರದಿ ಅವೈಜ್ಞಾನಿಕ. ಸಹಿ ಇಲ್ಲ, ಮೂಲ ಪ್ರತಿ ಕಳೆದು ಹೋಗಿದೆ. ಹೇಳಿ ಬರೆಸಿರುವ ಸಮಿಕ್ಷೆ ಆಗಿದೆ. ಸಿದ್ದರಾಮಯ್ಯ ವೀರಶೈವ ವಿರೋಧಿ. ಎರಡು ಭಾಗ ಮಾಡಿದ್ದು ಅವರೆ. ಲಿಂಗಾಯತರ ಸಮುದಾಯನ್ನು ಒಡೆದವರು ಅವರೆ. ಈಗ ಒಕ್ಕಲಿಗರನ್ನ ಹೊಡೆಯೋಕೆ ಹೋಗುತ್ತಿದ್ದಾರೆ. ವರದಿ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಹಿ ಹಾಕಿದ್ದಾರೆ. ಇನ್ನೊಬ್ಬ ಒಕ್ಕಲಿಗ ಸಚಿವರು ಸಹಿ ಹಾಕಿದ್ದಾರೆ. ಅವರನ್ನು ಕ್ಯಾಬಿನೆಟ್ ನಿಂದ ಹೊರಗೆ ಇಡಬೇಕು. ಇಲ್ಲ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ