AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಷಣ ವೇಳೆ ಯಾರೂ ಅಡ್ಡಿಪಡಿಸಿಲ್ಲ, ಸಮಯದ ಅಭಾವದಿಂದ ಬಂದೆ; ವಿಪಕ್ಷ ನಾಯಕ ಸಿದ್ದರಾಮಯ್ಯ

ಅರಮನೆ ಮೈದಾನದಲ್ಲಿ ನಿನ್ನೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿತ್ತು. ಸಭಾ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು.

ಭಾಷಣ ವೇಳೆ ಯಾರೂ ಅಡ್ಡಿಪಡಿಸಿಲ್ಲ, ಸಮಯದ ಅಭಾವದಿಂದ ಬಂದೆ; ವಿಪಕ್ಷ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Nov 17, 2021 | 5:11 PM

Share

ಬೆಂಗಳೂರು: ಅರಮನೆ ಮೈದಾನದಲ್ಲಿ ನಿನ್ನೆ (ನ.16) ನಡೆದಿದ್ದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಬಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ನಾನು ಭಾಷಣ ಮಾಡುವುದಿಲ್ಲವೆಂದು ಮೊದಲೇ ಹೇಳಿದ್ದೆ. ನಿನ್ನೆ ಭಾಷಣ ವೇಳೆ ಯಾರೂ ಅಡ್ಡಿಪಡಿಸಿಲ್ಲ. ಸಮಯದ ಅಭಾವದಿಂದ ಕಾರ್ಯಕ್ರಮದಿಂದ ಬಂದುಬಿಟ್ಟೆ ಅಂತ ತಿಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಿನ್ನೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿತ್ತು. ಸಭಾ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು. ಈ ವೇಳೆ ಕೆಲವರು ಡಿಕೆಶಿ, ಡಿಕೆಶಿ ಅಂತ ಮತ್ತು ಜಮೀರ್ ಹೆಸರು ಹೇಳಿ ಘೋಷಣೆ ಕೂಗಿದ್ದಾರೆ. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದರು.

ಬಳಿಕ ವೇದಿಕೆಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಮಾತನಾಡಬೇಕಾದರೆ ನೀವು ಕೂಗುತ್ತೀರಿ. ನೀವು ಕಾಂಗ್ರೆಸ್ ದ್ರೋಹಿಗಳೆಂದು ಡಿಕೆ ಶಿವಕುಮಾರ್ ಗರಂ ಆದರು.

ಟ್ವೀಟ್​ನಲ್ಲಿ ಕುಟುಕಿದ ಬಿಜೆಪಿ ಮುಸ್ಲಿಮರು ಒಗ್ಗಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಸಲೀಂ ಅಮಾನತುಗೊಳಿಸಿ ವಿ.ಎಸ್.ಉಗ್ರಪ್ಪಗೆ ಕೇವಲ ಕಾಂಗ್ರೆಸ್ ನೋಟಿಸ್ ನೀಡಿದೆ. ಅಲ್ಪಸಂಖ್ಯಾತರೇ ಕಾಂಗ್ರೆಸ್ನ ನರಿ ಬುದ್ಧಿ ಬಗ್ಗೆ ಯೋಚಿಸಿ ಎಂದು ಟ್ವೀಟ್ ಮಾಡಿರುವ ಬಿಜೆಪಿ, ಡಿಕೆ ಡಿಕೆ ಎಂಬ ಘೋಷಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ್ದಾರೆ. ಬಣ ರಾಜಕೀಯದ ಮತ್ತೊಂದು ಮುಖ ಅನಾವರಣವಾಗಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್​ನಲ್ಲಿ ಇದು ಸಾಮಾನ್ಯವಲ್ಲವೇ? ಅಂತ ಪ್ರಶ್ನಿಸಿದೆ.

ಇದನ್ನೂ ಓದಿ

ಡಿಕೆ ಡಿಕೆ ಎಂದು ಘೋಷಣೆ, ಜಮೀರ್ ಫೋಟೋ ಪ್ರದರ್ಶನ! ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ

ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ; ನಮ್ಮ ಶಾಸಕರು ನನಗೆ ಎಲ್ಲಾ ತಿಳಿಸಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ

Published On - 5:10 pm, Wed, 17 November 21

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್