ವಾಜಪೇಯಿಯವರೂ ಎತ್ತಿನಗಾಡಿಯಲ್ಲಿ ಸಂಸತ್​ಗೆ ಬಂದಿದ್ದರು, ಶೋಭಾ ಕರಂದ್ಲಾಜೆ ಈಗೆಲ್ಲಿದ್ದಾರೆ? ಸಿದ್ದರಾಮಯ್ಯ ಸವಾಲ್

ಯಾವುದು ಸತ್ಯ ಯಾವುದು ಸುಳ್ಳು ಎಂಬುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಲಿ ನೋಡೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ವಾಜಪೇಯಿಯವರೂ ಎತ್ತಿನಗಾಡಿಯಲ್ಲಿ ಸಂಸತ್​ಗೆ ಬಂದಿದ್ದರು, ಶೋಭಾ ಕರಂದ್ಲಾಜೆ ಈಗೆಲ್ಲಿದ್ದಾರೆ? ಸಿದ್ದರಾಮಯ್ಯ ಸವಾಲ್
ಸಿದ್ದರಾಮಯ್ಯ
Edited By:

Updated on: Sep 13, 2021 | 3:22 PM

ಬೆಂಗಳೂರು: ಯುಪಿಎ ಸರ್ಕಾರವಿದ್ದಾಗ ಎತ್ತಿನ ಗಾಡಿ ಮೇಲೆ ಬರಬೇಕಿತ್ತು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪಾರ್ಲಿಮೆಂಟ್ ಗೆ ಎತ್ತಿನಗಾಡಿ ಮೇಲೆ ಬಂದಿರಲಿಲ್ಲವೇ? ಬೆಲೆ ಏರಿಕೆ ವಿರೋಧಿಸಿ ಪಾರ್ಲಿಮೆಂಟಿಗೆ ವಾಜಪೇಯಿಯವರು ಎತ್ತಿನಗಾಡಿಯಲ್ಲಿ ಬಂದಿದ್ದರು. ಆದರೆ ನಾವು ಎತ್ತಿನಗಾಡಿಯಲ್ಲಿ ಬಂದರೆ ತಪ್ಪಾ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಎಲ್.ಪಿ.ಜಿ ಬೆಲೆ ಏರಿಕೆಯಾದಾಗ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲೆಂಡರ್ ಹೊತ್ಕೊಂಡು ಪ್ರತಿಭಟನೆ ಮಾಡಿದ್ದರು‌. ಈಗ ಶೋಭಾ ಕರಂದ್ಲಾಜೆ ಅವರು ಏಲ್ಲಿ ಹೋಗಿದ್ದಾರೆ? ಎಂದು ಸಹ ಕುಟುಕಿದ್ದಾರೆ.

ನಾನು ನಮ್ಮ ರಾಜ್ಯದ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದೇನೆ. ಬೇರೆ ರಾಜ್ಯಗಳ ವಿಚಾರ ನಾನೇಕೆ ಮಾತಾಡಲಿ? ಪೆಟ್ರೋಲ್ ಡಿಸೇಲ್ ಮೇಲೆ ನಮ್ಮ ರಾಜ್ಯದಲ್ಲಿ ಹೆಚ್ಚು ತೆರಿಗೆ ವಸೂಲು ಮಾಡಲಾಗುತ್ತಿದೆ. ತಕ್ಷಣ ಅದನ್ನು ಕಡಿಮೆ ಮಾಡಲಿ ಎಂದು ಸಹ ಅವರು ಆಗ್ರಹಿಸಿದ್ದಾರೆ.

ಯುಪಿಎ ಸರ್ಕಾರದ ಸಂದರ್ಭದಲ್ಲಿ ಕಚ್ಚಾತೈಲದ ಬೆಲೆ 110 ಡಾಲರ್ ಮೇಲಿತ್ತು. ಆದರೂ ಕಡಿಮೆ ದರದಲ್ಲಿ ಪೆಟ್ರೋಲ್ ನೀಡಲಾಗುತ್ತಿತ್ತು. ಈಗ ಕಚ್ಚಾತೈಲದ ಬೆಲೆ 70 ಡಾಲರ್ ಇದೆ. ಆದರೆ ಪೆಟ್ರೋಲ್ 100 ರ ಗಡಿ ದಾಟಿದೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ 3.45 ರೂ ಮಾತ್ರ ಪ್ರತಿ ಲೀಟರ್ ಮೇಲೆ ತೆರಿಗೆ ವಿಧಿಸಲಾಗುತ್ತಿತ್ತು. ಈಗ 33 ರೂಗಳಷ್ಟು ಪ್ರತಿ ಲೀಟರ್ ಮೇಲೆ ತೆರಿಗೆ ವಿಧಿಸಲಾಗ್ತಿದೆ. ಯಾವುದು ಸತ್ಯ ಯಾವುದು ಸುಳ್ಳು ಎಂಬುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಲಿ ನೋಡೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: 

ಕಾಂಗ್ರೆಸ್​ನವರು ಯುಪಿಎ ಸರ್ಕಾರ ಇದ್ದಾಗ ಪ್ರತಿಭಟನೆ ಮಾಡಬೇಕಿತ್ತು; ಸದನದಲ್ಲೇ ತಕ್ಕ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಎತ್ತಿನ ಗಾಡಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್​ ಶಾಸಕರು; ಸಿದ್ದರಾಮಯ್ಯ ಶಿವಕುಮಾರ್​ ಬಚಾವ್​

(Opposition Leader Siddaramaiah says Vajpayee also came to parliament on Bullock cart to protest against oil price hike)