AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ: ಸದಾನಂದಗೌಡ

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅಸಮಾಧಾನಗೊಂಡಿದ್ದು, ತಮ್ಮ ಮುಂದಿನ ನಡೆ ಬಗ್ಗೆ ನಾಳೆ ತಿಳಿಸುತ್ತೇನೆ ಎಂದಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ: ಸದಾನಂದಗೌಡ
ಡಿವಿ ಸದಾನಂದಗೌಡ
TV9 Web
| Updated By: ವಿವೇಕ ಬಿರಾದಾರ|

Updated on:Mar 18, 2024 | 12:44 PM

Share

ಬೆಂಗಳೂರು, ಮಾರ್ಚ್​ 18: ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ (DV Sadananda Gowda) ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ (BJP) ಟಿಕೆಟ್ ತಪ್ಪಿದೆ. ಪಕ್ಷದ ಈ ನಿರ್ಧಾರದಿಂದ ಡಿವಿ ಸದಾನಂದಗೌಡ ಅವರು ಬೇಸರಗೊಂಡಿದ್ದಾರೆ. ಅಲ್ಲದೆ ಪರೋಕ್ಷವಾಗಿ ಬಿಎಸ್​ ಯಡಿಯೂರಪ್ಪ (BS Yediyurappa) ಅವರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮುಖಂಡರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸುತ್ತಿದ್ದು, ಟಿಕೆಟ್​ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ. ಬೇರೆ ಬೇರೆ ಸಂಗತಿಗಳು ನಡೀತಿವೆ ಎಂದರು.

ನಿನ್ನೆ (ಮಾ.17) ರಂದು ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು, ಸಾಂತ್ವನ ಮಾಡಿರುವುದು ನಿಜ. ಮುಂದಿನ ನಿರ್ಧಾರ ನನ್ನ ಕುಟುಂಬಸ್ಥರ ಜತೆ ಚರ್ಚಿಸಬೇಕು. ದೆಹಲಿಯಲ್ಲಿ, ರಾಜ್ಯದಲ್ಲಿ ಒಂದಷ್ಟು ವಿದ್ಯಮಾನ ನಡೆದಿವೆ. ನಿಮಗೆ ಟಿಕೆಟ್ ಅಂದರು, ಕೊನೆ ಕ್ಷಣದಲ್ಲಿ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರವನ್ನ ಹೇಳಿಕೊಳ್ಳಬೇಕಿದೆ. ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ. ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ನನ್ನ ನಿರ್ಣಯ ಬಗ್ಗೆ ನಾಳೆ ಸುದ್ದಿಗೋಷ್ಠಿ ಕರೆದು ತಿಳಿಸುತ್ತೇನೆ ಎಂದು ಹೇಳಿದರು.

ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ ತಿಳಿದು ತಿಳಿದು ಹೀಗೆ ಮಾಡಿರುವುದು ಬೇಜಾರು ತಂದಿದೆ. ಬಿ.ವೈ.ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವ ಕುರಿತು ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಭೇಟಿಯಾಗಿ ಮಾತನಾಡಿದ್ದೇನೆ. ಪಕ್ಷದಲ್ಲಿ ಯಾರಿಗೆಲ್ಲಾ ಮನಸ್ಸಿಗೆ ನೋವಾಗಿದೆಯೋ, ಒಟ್ಟಿಗೆ ಹೋಗಿ ವರಿಷ್ಠರ ಭೇಟಿಯಾಗಿ ತೀರ್ಮಾನಿಸೋಣ ಅಂದಿದ್ದೆ. ಆದರೆ ಈಶ್ವರಪ್ಪ ತಮ್ಮದೇ ಆದ ನಿರ್ಣಯ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.

ಇದನ್ನೂ ಓದಿ: ಡಿವಿಎಸ್​ಗೆ ಟಿಕೆಟ್ ಮಿಸ್: ಜೆಪಿ ನಡ್ಡಾ ಕರೆ ಮಾಡಿ ಹೇಳಿದ್ದೇನು? ಎಳೆ-ಎಳೆಯಾಗಿ ಬಿಚ್ಚಿಟ್ಟ ಸದಾನಂದಗೌಡ

ಹುಟ್ಟ ಹಬ್ಬದ ನಿಮಿತ್ಯ ಸದಾನಂದಗೌಡ ಅವರ ನಿವಾಸಕ್ಕೆ ಸೋಮವಾರ ನೂರಾರು ಬೆಂಬಲಿಗರು ಆಗಮಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಅವರಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೂಡ ಒಬ್ಬರು. ಅಭಿನಂದನೆ ಸ್ವೀಕರಿಸಿದ ಗೌಡರು ಮುಂದಿನ ಕ್ರಮದ ಬಗ್ಗೆ ಮಂಗಳವಾರ ನಿರ್ಧರಿಸುವುದಾಗಿ ತಿಳಿಸಿದರು.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್​ ಅನ್ನು ಎಂಎಲ್​ಸಿ ಕೋಟಾ ಶ್ರೀನಿವಾಸ್​ ಪೂಜಾರಿ ಅವರಿಗೆ ನೀಡಲಾಗಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅಸಮಾಧಾನಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:37 pm, Mon, 18 March 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು