AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಲೋಕಸಭಾ ಕ್ಷೇತ್ರವನ್ನು ಸೋಲಲು ನಮ್ಮ ಅಭ್ಯರ್ಥಿಯೇ ಕಾರಣ: ಕಾಂಗ್ರೆಸ್​ ಶಾಸಕ

ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಸೋತಿದೆ. ಈ ಸೋಲಿಗೆ ಕಾರಣವೇನು ಎಂದು ಸಚಿವ ಸತೀಶ್​ ಜಾರಕಿಹೊಳಿ ಪ್ರಶ್ನೆಗೆ ಕಾಂಗ್ರೆಸ್​ ಶಾಸಕ ನೀಡಿದ ಉತ್ತರ ಅಚ್ಚರಿ ಮೂಡಿಸಿದೆ. ಮೈಸೂರು ಲೋಕಸಭಾ ಕ್ಷೇತ್ರ ಸೋಲಿಗೆ ನಮ್ಮ ಅಭ್ಯರ್ಥಿಯೇ ಕಾರಣ ಎಂದು ಕಾಂಗ್ರೆಸ್​ ಶಾಸಕ ಹೇಳಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರವನ್ನು ಸೋಲಲು ನಮ್ಮ ಅಭ್ಯರ್ಥಿಯೇ ಕಾರಣ: ಕಾಂಗ್ರೆಸ್​ ಶಾಸಕ
ಎಂ ಲಕ್ಷ್ಮಣ, ಹರೀಶ್ ​​ಗೌಡ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Oct 08, 2024 | 1:31 PM

Share

ಮೈಸೂರು, ಅಕ್ಟೋಬರ್​ 08: ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಮೈಸೂರು (Mysore) ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಸಚಿವ ಸತೀಶ್​ ಜಾರಕಿಹೊಳಿ ಇಂದು (ಅ.08) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ, ಶಾಸಕ ಹರೀಶ್ ಗೌಡ (Harish Gowda) ಅವರ ನಿವಾಸಕ್ಕೆ ಭೇಟಿ ನೀಡಿದರು. ಶಾಸಕ ಹರೀಶ್ ಗೌಡ ಜೊತೆ ಮೈಸೂರು ರಾಜಕಾರಣದ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸತೀಶ್​ ಜಾರಕಿಹೊಳಿ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರ ಗೆಲ್ಲಬಹುದಿತ್ತು, ಯಾಕೆ ಸಾಧ್ಯವಾಗಲಿಲ್ಲ ಎಂದು ಹರೀಶ್​ ಗೌಡ ಅವರಿಗೆ ಪ್ರಶ್ನಿಸಿದರು.

ಇದಕ್ಕೆ, ಕಾಂಗ್ರೆಸ್​ ಶಾಸಕ ಹರೀಶ್​ ಗೌಡ “ನಮ್ಮ ಪಕ್ಷದ ಅಭ್ಯರ್ಥಿ ಸರಿ ಇಲ್ಲದಿದ್ದಕ್ಕೆ ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲಿಲ್ಲ” ಎಂದು ಹೇಳಿದ್ದಾರೆ. ಕಳೆದ ಲೋಕಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಸ್ಪರ್ಧೆ ಮಾಡಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ

ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಮೈಸೂರು ಕೂಡ ಒಂದಾಗಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ​ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್​ನಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್​ ಸ್ಪರ್ಧೆ ಮಾಡಿದ್ದರು.

ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರ ವೋಟುಗಳು ನಿರ್ಣಾಯಕವಾಗಿವೆ. ಚುನಾವಣೆಯ ಸಂದರ್ಭದಲ್ಲಿ ಎಂ. ಲಕ್ಷ್ಮಣ್​ ನಾನೂ ಒಕ್ಕಲಿಗ ಎಂದು ಬಿಂಬಿಸಿಕೊಂಡು ವೋಟು ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಿದ್ದರೂ ಸಹ ಅದು ಸಾಧ್ಯವಾಗಲಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಎಂ. ಲಕ್ಷ್ಮಣ ಅವರಿಗೆ ಸೋಲಾಯಿತು.

ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಸೋಲಿಗೆ, ಅಭ್ಯರ್ಥಿ ಎಂ ಲಕ್ಷ್ಮಣ ಕಾರಣ ಎಂಬ ಶಾಸಕ ಹರೀಶ್​ಗೌಡ ಹೇಳಿಕೆ ಸದ್ಯ ಸಂಚಲನ ಸೃಷ್ಟಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:22 pm, Tue, 8 October 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More