ಮೈಸೂರು ಲೋಕಸಭಾ ಕ್ಷೇತ್ರವನ್ನು ಸೋಲಲು ನಮ್ಮ ಅಭ್ಯರ್ಥಿಯೇ ಕಾರಣ: ಕಾಂಗ್ರೆಸ್​ ಶಾಸಕ

| Updated By: ವಿವೇಕ ಬಿರಾದಾರ

Updated on: Oct 08, 2024 | 1:31 PM

ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಸೋತಿದೆ. ಈ ಸೋಲಿಗೆ ಕಾರಣವೇನು ಎಂದು ಸಚಿವ ಸತೀಶ್​ ಜಾರಕಿಹೊಳಿ ಪ್ರಶ್ನೆಗೆ ಕಾಂಗ್ರೆಸ್​ ಶಾಸಕ ನೀಡಿದ ಉತ್ತರ ಅಚ್ಚರಿ ಮೂಡಿಸಿದೆ. ಮೈಸೂರು ಲೋಕಸಭಾ ಕ್ಷೇತ್ರ ಸೋಲಿಗೆ ನಮ್ಮ ಅಭ್ಯರ್ಥಿಯೇ ಕಾರಣ ಎಂದು ಕಾಂಗ್ರೆಸ್​ ಶಾಸಕ ಹೇಳಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರವನ್ನು ಸೋಲಲು ನಮ್ಮ ಅಭ್ಯರ್ಥಿಯೇ ಕಾರಣ: ಕಾಂಗ್ರೆಸ್​ ಶಾಸಕ
ಎಂ ಲಕ್ಷ್ಮಣ, ಹರೀಶ್ ​​ಗೌಡ
Follow us on

ಮೈಸೂರು, ಅಕ್ಟೋಬರ್​ 08: ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಮೈಸೂರು (Mysore) ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಸಚಿವ ಸತೀಶ್​ ಜಾರಕಿಹೊಳಿ ಇಂದು (ಅ.08) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ, ಶಾಸಕ ಹರೀಶ್ ಗೌಡ (Harish Gowda) ಅವರ ನಿವಾಸಕ್ಕೆ ಭೇಟಿ ನೀಡಿದರು. ಶಾಸಕ ಹರೀಶ್ ಗೌಡ ಜೊತೆ ಮೈಸೂರು ರಾಜಕಾರಣದ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸತೀಶ್​ ಜಾರಕಿಹೊಳಿ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರ ಗೆಲ್ಲಬಹುದಿತ್ತು, ಯಾಕೆ ಸಾಧ್ಯವಾಗಲಿಲ್ಲ ಎಂದು ಹರೀಶ್​ ಗೌಡ ಅವರಿಗೆ ಪ್ರಶ್ನಿಸಿದರು.

ಇದಕ್ಕೆ, ಕಾಂಗ್ರೆಸ್​ ಶಾಸಕ ಹರೀಶ್​ ಗೌಡ “ನಮ್ಮ ಪಕ್ಷದ ಅಭ್ಯರ್ಥಿ ಸರಿ ಇಲ್ಲದಿದ್ದಕ್ಕೆ ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲಿಲ್ಲ” ಎಂದು ಹೇಳಿದ್ದಾರೆ. ಕಳೆದ ಲೋಕಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಸ್ಪರ್ಧೆ ಮಾಡಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ

ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಮೈಸೂರು ಕೂಡ ಒಂದಾಗಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ​ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್​ನಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್​ ಸ್ಪರ್ಧೆ ಮಾಡಿದ್ದರು.

ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರ ವೋಟುಗಳು ನಿರ್ಣಾಯಕವಾಗಿವೆ. ಚುನಾವಣೆಯ ಸಂದರ್ಭದಲ್ಲಿ ಎಂ. ಲಕ್ಷ್ಮಣ್​ ನಾನೂ ಒಕ್ಕಲಿಗ ಎಂದು ಬಿಂಬಿಸಿಕೊಂಡು ವೋಟು ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಿದ್ದರೂ ಸಹ ಅದು ಸಾಧ್ಯವಾಗಲಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಎಂ. ಲಕ್ಷ್ಮಣ ಅವರಿಗೆ ಸೋಲಾಯಿತು.

ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಸೋಲಿಗೆ, ಅಭ್ಯರ್ಥಿ ಎಂ ಲಕ್ಷ್ಮಣ ಕಾರಣ ಎಂಬ ಶಾಸಕ ಹರೀಶ್​ಗೌಡ ಹೇಳಿಕೆ ಸದ್ಯ ಸಂಚಲನ ಸೃಷ್ಟಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:22 pm, Tue, 8 October 24