Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ: ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದ ಪರಮೇಶ್ವರ್

ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕುತ್ತಿದ್ದು, ಸಂಸದರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇತರೆ ಕಾಂಗ್ರೆಸ್ ನಾಯಕರು ಏನು ಹೇಳಿದರು? ಇಲ್ಲಿದೆ ನೋಡಿ.

ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ: ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದ ಪರಮೇಶ್ವರ್
ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ ಹೊರಹಾಕಿದ ಕಾಂಗ್ರೆಸ್ ನಾಯಕರು
Follow us
Sunil MH
| Updated By: Rakesh Nayak Manchi

Updated on: Jan 13, 2024 | 7:15 PM

ಬೆಂಗಳೂರು, ಜ.13: ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಸಂಸದರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwar) ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪ್ರಕರಣ ದಾಖಲಿಸುವ ಬಗ್ಗೆ ನಾನೇನು ಪೊಲೀಸರಿಗೆ ಸೂಚನೆ ಕೊಟ್ಟಿಲ್ಲ. ಪೊಲೀಸರಿಗೆ ಅವರ ಕೆಲಸ ಏನು ಎಂದು ಗೊತ್ತಿದೆ, ಅವರು ಮಾಡುತ್ತಾರೆ. ಅನಂತಕುಮಾರ್ ವಿರುದ್ಧ ಕಾನೂನಿನಡಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕೇಂದ್ರದಲ್ಲಿ ಸಚಿವರಾಗಿದ್ದವರು ಜವಾಬ್ದಾರಿಯಿಂದ ಮಾತನಾಡಬೇಕು. ಯಾರೂ ಇಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದರು.

ಶಾಂತಿ ಕದಡುವ ರೀತಿ ಮಾತಾಡುವುದು ಸರಿಯಾ ಎಂದು ನೀವೇ ಯೋಚಿಸಿ ಎಂದು ಪರಮೇಶ್ವರ್ ಕೇಳಿದರು. ಪ್ರಚೋದನೆಯಿಂದ ಅನಾಹುತ ನಡೆದರೆ ಯಾರು ಹೊಣೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಯಾರು ಪ್ರೇರೇಪಿಸಿದ್ದಾರೋ ಗೊತ್ತಿಲ್ಲ, ರಾಮನೇ ಅವರಿಗೆ ಒಳ್ಳೆಯ ಮನಸ್ಸು ನೀಡಲಿ. ಏನಾದರೂ ಘಟನೆಗಳು ನಡೆದರೆ ಅನಂತಕುಮಾರ್ ಜವಾಬ್ದಾರಿ ಆಗುತ್ತಾರೆ. ಬೇರೆಯವರನ್ನು ಹೊಣೆ ಮಾಡಲ್ಲ ಎಂದರು.

ಕಳೆದ ಮೂರು ವರ್ಷಗಳಿಂದ ಅವರು ಏನು ಮಾತನಾಡಿರಲಿಲ್ಲ. ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಚುನಾವಣೆ ಬರುತ್ತಿದೆ. ಈಗ ಹೇಳಿಕೆ ಕೊಡುತ್ತಿದ್ದಾರೆ. ಅದರ ಬಗ್ಗೆ ನಮಗೆ ತಕರಾರಿಲ್ಲ. ಆದರೆ ಅವಹೇಳನಕಾರಿಯಾಗಿ ಮಾತನಾಡುವುದು, ಬೇರೆಯವರ ಬಗ್ಗೆ ನಿಂದಿಸಿ ಮಾತನಾಡುವುದು, ಅಸಂಬದ್ಧವಾಗಿ, ಪ್ರಚೋದಕಾರಿಯಾಗಿ ಮಾತನಾಡುವುದು ಇವೆಲ್ಲವನ್ನು ನಾವು ಸಹ ಗಮನಿಸುತ್ತಿದ್ದೇವೆ ಎಂದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ವಿರುದ್ಧ ಏಕವಚನದಲ್ಲೇ ಅನಂತಕುಮಾರ್‌ ಹೆಗಡೆ ವಾಗ್ದಾಳಿ ನಡೆಸಿದ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಬಗ್ಗೆ, ಬೇರೆಯವರ ಬಗ್ಗೆ ಬಹಳ ಸುಲಭವಾಗಿ ಮಾತನಾಡಬಹುದು. ಅದು ಅವರವರ ಸಂಸ್ಕೃತಿ ತೋರಿಸುತ್ತದೆ, ಬೇರೇನೂ ತೋರಿಸಲ್ಲ ಎಂದರು.

ಇದನ್ನೂ ಓದಿ: ವಿವಾದಾತ್ಮಕ ಮಾತುಗಳ ಮೂಲಕ ಪುನಃ ಮುನ್ನೆಲೆಗೆ ಬಂದ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ

ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನೋ ಪಾಲಟಿಕ್ಸ್, ಬ್ರ್ಯಾಂಡ್ ಬೆಂಗಳೂರು ವಿಚಾರ ಮಾತಾಡೋಣ ಎಂದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಅನಂತ​ಕುಮಾರ್​ ವಾಗ್ದಾಳಿ ವಿಚಾರವಾಗಿ ಟಿವಿ9 ಜೊತೆ ಮಾತನಾಡಿದ ಸಚಿವ ಎಂಬಿ ಪಾಟೀಲ್, ಚುನಾವಣೆಗೋಸ್ಕರ ಅನಂತ​ಕುಮಾರ್ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ನಾಲ್ಕು ವರ್ಷ ಅನಂತ​ಕುಮಾರ್ ಹೆಗಡೆ ಎಲ್ಲಿ ಹೋಗಿದ್ದರು? ಕಾಣೆಯಾಗಿದ್ದರು. ಈಗ ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಕಡೆ ಗಮನ ಹರಿಸುತ್ತಿದ್ದಾರೆ. ಜನರ ಕೈಗೆ ಇಷ್ಟು ದಿನ‌ ಸಿಕ್ಕಿಲ್ಲ, ಈಗ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು.

ಅನಂತ​ಕುಮಾರ್ ಹೆಗಡೆಗೆ ಈ ರೀತಿಯಾಗಿ ಮಾತನಾಡುವ ಚಾಳಿ ಇದೆ. ಸಂವಿಧಾನ ಬದಲಾವಣೆಗೋಸ್ಕರ ಅಧಿಕಾರಕ್ಕೆ ಬಂದಿದ್ದೇವೆ ಅಂದಿದ್ದರು. ಮಸೀದಿಯನ್ನು ಧ್ವಂಸಗೊಳಿಸುತ್ತೇವೆ ಅಂದರೆ ಅವರು ಭ್ರಮೆಯಲ್ಲಿದ್ದಾರೆ. ಈ ರೀತಿಯ ಬೆಳವಣಿಗೆಗಳಿಗೆ ನಮ್ಮ ಸರ್ಕಾರ ಅವಕಾಶ ಕೊಡುವುದಿಲ್ಲ. ದೇವಸ್ಥಾನ, ಚರ್ಚ್, ಮಸೀದಿಗಳನ್ನು ರಕ್ಷಿಸುವ ಜವಾಬ್ದಾರಿ ನಮ್ಮದು. ಕಾನೂನು ಕೈಗೆ ತೆಗೆದುಕೊಂಡು ನಿರ್ನಾಮ ಮಾಡುತ್ತೇನೆ ಅಂದರೆ ನಡೆಯಲ್ಲ. ಕೀಳುಮಟ್ಟದ ವ್ಯವಸ್ಥೆಗೆ ಹೆಗಡೆ ಇಳಿದಿದ್ದಾರೆ ಎಂದರು.

ಅನಂತಕುಮಾರ್ ಹೆಗಡೆ ಮಾಧ್ಯಮದಲ್ಲಿ ಫೇಮಸ್ ಆಗಲು ನೋಡುತ್ತಾರೆ ಎಂದು ಮಂಗಳೂರಿನಲ್ಲಿ ಸಚಿವ ನಾಗೇಂದ್ರ ಹೇಳಿದರು. ಅವರು ಜಾತಿ, ಧರ್ಮ ಬೇರೆ ಮಾಡಿಯೇ ರಾಜಕಾರಣ ಮಾಡಿದವರು. ಶಾಂತಿ ಕದಡಿ ರಾಜಕೀಯ ಲಾಭ ಪಡೆಯುವ ವ್ಯಕ್ತಿ ಅನಂತಕುಮಾರ್. 2-3 ವರ್ಷ ಕಾಣಿಸಿಕೊಂಡಿರಲಿಲ್ಲ, ಚುನಾವಣೆ ವೇಳೆ ರಾಜಕೀಯ ಸಹಜ. ಶಾಂತಿ ಕದಡಿದರೆ ಎದುರಿಸಲು ಸರ್ಕಾರ ಸಮರ್ಥವಾಗಿದೆ ಎಂದರು.

ಗೋಪಾಷ್ಠಮಿ ಶಾಪ ಅನ್ನೋದು ಸರಿಯಲ್ಲ, ಕಾಕತಾಳೀಯ ಇರಬಹುದು. ಕಾಗೆ ಕೂರೋಕು ಕೊಂಬೆ ಮುರಿಯೋಕು ಅನ್ನೋ ಥರ ಅದು ಎಂದು ನಾಗೇಂದ್ರ ಹೇಳಿದರು. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಗೋಹತ್ಯೆ ನಿಷೇಧ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಇಂದಿರಾಗಾಂಧಿ ಸಮ್ಮುಖದಲ್ಲಿ ಆಂದೋಲನದಲ್ಲಿ ಭಾಗಿಯಾಗಿದ್ದ ಹತ್ತಾರು ಸಂತರ ಹತ್ಯೆ ನಡೆದಿತ್ತು. ನೂರಾರು ಗೋವುಗಳನ್ನ ಗುಂಡಿಟ್ಟು ಕೊಲ್ಲಲಾಯಿತು. ದೊಡ್ಡ ತಪಸ್ವಿ ಕರಪಾತ್ರಿ ಮಹಾರಾಜರು ಗೋಪಾಷ್ಠಮಿ ದಿನದಂದೇ ನಿನ್ನ ಕುಲ ನಾಶವಾಗಲಿದೆ ಎಂದು ಇಂದಿರಾಗಾಂಧಿಗೆ ಶಾಪ ಹಾಕಿದ್ದರು. ಗೋಪಾಷ್ಠಮಿಯಂದೇ ಒಬ್ಬೊಬ್ಬರು ಅಂತ್ಯವಾದರು ಎಂದು ಹೆಗಡೆ ಹೇಳಿಕೆ ನೀಡಿದ್ದರು.

ಟಿವಿ9 ಜೊತೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಸಂಸದ ಅನಂತ ಕುಮಾರ್ ಶಾಂತಿ ಕದಡುವ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅನಂತ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುವ್ಯವಸ್ಥಿತವಾದ ಆಸ್ಪತ್ರೆ ನಿರ್ಮಿಸಿಲ್ಲ. ಇವರಿಗೆ ಅಭಿವೃದ್ಧಿ ಕುರಿತು ಮಾತನಾಡುವ ಧೈರ್ಯ ಇಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ