AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರು ತಪ್ಪು ಕಲ್ಪನೆಯಿಂದ ಹಲ್ಲೆ ಮಾಡಿರಬಹುದು: ರಾಮಲಿಂಗಾರೆಡ್ಡಿ

Belagavi News: ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ನಂತರ ಸಾರಿಗೆ ಬಸ್ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವಿನ ಗಲಾಟೆ ಪ್ರಕರಣಗಳು ನಡೆಯುತ್ತಿವೆ. ಈ ಬಗ್ಗೆ ಬೆಳಗಾವಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಯಾಣಿಕರು ತಪ್ಪು ಕಲ್ಪನೆಯಿಂದ ಹಲ್ಲೆ ಮಾಡಿರಬಹುದು: ರಾಮಲಿಂಗಾರೆಡ್ಡಿ
ಸಾರಿಗೆ ಬಸ್​ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ಗಲಾಟೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Rakesh Nayak Manchi
|

Updated on:Jun 25, 2023 | 8:33 PM

Share

ಬೆಳಗಾವಿ: ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದ ಶಕ್ತಿ ಯೋಜನೆ (Shakti Scheme) ಜಾರಿಯಾದ ನಂತರ ಕರ್ನಾಟಕದಲ್ಲಿ ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರ ನಡುವೆ ಗಲಾಟೆಗಳು ನಡೆಯುತ್ತಿವೆ. ಕಂಡಕ್ಟರ್​ ಪ್ರಯಾಣಕರ ಮೇಲೆ, ಪ್ರಯಾಣಿಕರು ಕಂಡಕ್ಟರ್​ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy), ಪ್ರಯಾಣಿಕರು ತಪ್ಪು ಕಲ್ಪನೆಯಿಂದ ಹಲ್ಲೆ ನಡೆಸಿರಬಹುದು ಎಂದಿದ್ದಾರೆ.

ಇಲಾಖೆಯಲ್ಲಿ 24 ಸಾವಿರ ಬಸ್‌ಗಳಿದ್ದು ನಿತ್ಯ 23 ಸಾವಿರ ಬಸ್​ಗಳು ಸಂಚಾರ ಮಾಡುತ್ತಿವೆ. ಪ್ರತಿನಿತ್ಯ ಸರ್ಕಾರಿ ಬಸ್‌ಗಳು 1 ಲಕ್ಷ 56 ಸಾವಿರ ಟ್ರಿಪ್​ಗಳನ್ನು ಮಾಡುತ್ತವೆ. ಈ ಪೈಕಿ ಯಾವುದೋ ಒಂದು ಟ್ರಿಪ್‌ನಲ್ಲಿ ಹಲ್ಲೆ ಪ್ರಕರಣ ಆಗಿರಬಹುದು, ಇಲ್ಲ ಎಂದು ಹೇಳುತ್ತಿಲ್ಲ. ನಮ್ಮ ಸಿಬ್ಬಂದಿ ಕೆಲವು ಸಲ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸುತ್ತಾರೆ. ಪ್ರಯಾಣಿಕರೂ ಕೆಲ ಸಂದರ್ಭದಲ್ಲಿ ತಪ್ಪು ಕಲ್ಪನೆಯಿಂದ ಹಲ್ಲೆ ಮಾಡಿರಬಹುದು. ಇಂಥ ಸಣ್ಣಪುಟ್ಟ ಘಟನೆ ನಡೆಯುತ್ತಿರುತ್ತವೆ, ಸಿಬ್ಬಂದಿ ಅರ್ಥ ಮಾಡಿಕೊಳ್ಳಬೇಕು. ಸಿಬ್ಬಂದಿ ಸಹ ಸಾರ್ವಜನಿಕರ ಜೊತೆ ಸೌಜನ್ಯಯುತವಾಗಿ ವರ್ತಿಸಬೇಕು. ಸಾರ್ವಜನಿಕರು ಸಹ ಸಹಕಾರ ಕೊಡಬೇಕು ಎಂದರು.

ಇದನ್ನೂ ಓದಿ: ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಭೇಟಿ, ಶಕ್ತಿ ಯೋಜನೆ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದ ರಾಮಲಿಂಗಾರೆಡ್ಡಿ

ಹಲವು ಗ್ರಾಮಗಳಿಗೆ ಸರ್ಕಾರಿ ಬಸ್​ಗಳು ಇಲ್ಲದಿರುವ ಬಗ್ಗೆ ಮಾತನಾಡಿದ ಸಾರಿಗೆ ಸಚಿವರು, ಇಡೀ ಪ್ರಪಂಚದಲ್ಲಿ ಸಾರಿಗೆ ಸಂಸ್ಥೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಇವೆ. ದೊಡ್ಡ ಜಿಲ್ಲೆಯಾದ ಬೆಳಗಾವಿಯಲ್ಲಿ 20 ಹಳ್ಳಿ ಬಿಟ್ಟು ಎಲ್ಲಾ ಹಳ್ಳಿಗೆ ಬಸ್‌ಗಳಿವೆ. ನಷ್ಟವಾದರೆ ಖಾಸಗಿ ಬಸ್‌ಗಳನ್ನು ಮಾಲೀಕರು ಓಡಿಸ್ತಾರಾ? ಸರ್ಕಾರಿ ಬಸ್‌ಗಳಲ್ಲಿ 10 ಜನರಿದ್ದರೂ ಬಸ್ ಸಂಚರಿಸುತ್ತದೆ. ಸಾರ್ವಜನಿಕ ಸೇವೆಗೆ ಇರುವಂತದ್ದು, ಲಾಭ ನಷ್ಟ ನೋಡಲು ಆಗುವುದಿಲ್ಲ ಎಂದರು.

ಬೊಮ್ಮಾಯಿಯವರ ಆರೋಪ ರಾಜಕೀಯ ಆರೋಪ: ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆಯಿಂದ ಕೆಎಸ್‌ಆರ್‌ಟಿಸಿ ಮುಚ್ಚಿ ಹೋಗುತ್ತದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ರಾಮಲಿಂಗಾರೆಡ್ಡಿ, ಬೊಮ್ಮಾಯಿಯವರ ಆರೋಪ ರಾಜಕೀಯ ಆರೋಪವಾಗಿದೆ ಎಂದರು. ಅವರು ಸರಿಯಾಗಿ ಕೆಲಸ ಮಾಡಿಸಿದ್ದಿದ್ದರೆ ಅವರು ಆಡಳಿತದಲ್ಲಿ ಯಾಕೆ ಇರುತ್ತಿರಲಿಲ್ಲ? ಅವರು ಸರಿಯಾಗಿ ಕೆಲಸ ಮಾಡಿಲ್ಲ ಅದಕ್ಕೆ ವಿರೋಧ ಪಕ್ಷದಲ್ಲಿ ಕುಳಿತುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಕುಳಿತು ನಮಗೆ ಸಲಹೆ ಸೂಚನೆ ಕೊಡಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Sun, 25 June 23

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!