AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pay CM Poster: ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್​ನ ಪೇ ಸಿಎಂ ಪೋಸ್ಟರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Pay CM Poster: ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Sep 24, 2022 | 1:55 PM

Share

ಚಿತ್ರದುರ್ಗ: ಕಾಂಗ್ರೆಸ್​ನ ಪೇ ಸಿಎಂ ಪೋಸ್ಟರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೇಳಿಕೆ ನೀಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ನಾಯಕರ ನೈತಿಕ ಅಧಪತನವನ್ನ ತೋರಿಸುತ್ತಿದೆ ಎಂದರು.

ಪಿಎಫ್​ಐ, ಎಸ್​ಡಿಪಿಐ ಕಚೇರಿ ಹಾಗೂ ಸಂಘಟನೆಗಳ ಮುಖಂಡರ ಮನೆ ಮೇಲೆ ಎನ್​ಐಎ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಈಗಾಗಲೇ ಎನ್​ಐಎ, ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಂಡಿದೆ ಎಂದರು. ಇನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು “ಕಾಂಗ್ರೆಸ್​ನವರು ಲಿಂಗಾಯತ ಮುಖ್ಯಮಂತ್ರಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ” ಎಂಬ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ನಾನು ಅದರ ಭಾಗ ಅಲ್ಲ, ನಾನು ಪ್ರತಿಕ್ರಿಯಿಸುವುದಿಲ್ಲ. ಜನರ ನಾಡಿ ಮಿಡಿತ ನಮಗೂ ಗೊತ್ತಿದೆ. 35 ವರ್ಷ ನಾವೂ ರಾಜಕಾರಣ ಮಾಡಿದ್ದೇವೆ ಎಂದರು.

ದೆಹಲಿಯಿಂದ ಬಳಿಕ ಸಂಪುಟ ವಿಸ್ತರಣೆ ನಿರ್ಧಾರ

ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ದೆಹಲಿಗೆ ಹೋಗಿ ಬಂದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ದೆಹಲಿಗೆ ಹೋದಾಗ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇನೆ. ಅಲ್ಲಿ ಏನು ತಿರ್ಮಾನ ಮಾಡಲಾಗುತ್ತದೆ ಎಂಬೂದರ ಮೇಲೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ