AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಗೃಹ ಬಂಧನದಲ್ಲಿಡಲಾಗಿದೆ: ಮನೆ ಗೇಟ್​​ಗೆ ಬೀಗ ಹಾಕಿರುವ ಫೋಟೊ ಟ್ವೀಟ್​​ ಮಾಡಿದ ಮೆಹಬೂಬಾ ಮುಫ್ತಿ

Mehbooba Mufti ಭಾರತ ಸರ್ಕಾರ ಕಾಶ್ಮೀರಿ ಪಂಡಿತರ ಸಮಸ್ಯೆಯನ್ನು ಕಂಬಳಿಯಡಿಯಲ್ಲಿ ಹುದುಗಿಸಲು ಪ್ರಯತ್ನಿಸುತ್ತಿದೆ. ಸರ್ಕಾರದ ನಿಷ್ಠುರ ನೀತಿಗಳಿಂದಾಗಿಯೇ ಪಲಾಯನ ಮಾಡಲು ಬಯಸದ ಕಾಶ್ಮೀರಿ ಪಂಡಿತರ ಹತ್ಯೆಯಾಗುತ್ತಿರುವುದು

ನನ್ನನ್ನು ಗೃಹ ಬಂಧನದಲ್ಲಿಡಲಾಗಿದೆ: ಮನೆ ಗೇಟ್​​ಗೆ ಬೀಗ ಹಾಕಿರುವ ಫೋಟೊ ಟ್ವೀಟ್​​ ಮಾಡಿದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
TV9 Web
| Edited By: |

Updated on:Aug 21, 2022 | 5:01 PM

Share

ಶ್ರೀನಗರ: ಇತ್ತೀಚೆಗೆ ಶೋಪಿಯಾನ್​​ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕಾಶ್ಮೀರಿ ಪಂಡಿತ್ (Kashmiri Pandit) ಸುನಿಲ್ ಕುಮಾರ್ ಭಟ್​​ನ ಕುಟುಂಬವನ್ನು ಭೇಟಿ ಮಾಡಲು ಹೋಗುವುದನ್ನು ತಡೆಯುವುದಕ್ಕಾಗಿ ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಪಿಡಿಪಿ (PDP)ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti) ಭಾನುವಾರ ಹೇಳಿದ್ದಾರೆ. ಗುರ್ಪಾಕರ್ ಪ್ರದೇಶದಲ್ಲಿರುವ ತನ್ನ ಮನೆಯ ಗೇಟ್​​ಗೆ ಬೀಗ ಹಾಕಿರುವುದನ್ನು ಮತ್ತು ಮನೆಯ ಹೊರಗೆ ಸಿಆರ್​​ಪಿಎಫ್ ವಾಹನ ನಿಲ್ಲಿಸಿರುವ ಫೋಟೊವನ್ನು ಮುಫ್ತಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರದ ನಿಷ್ಠುರ ನೀತಿಗಳಿಂದಾಗಿ ಕಾಶ್ಮೀರ ಪಂಡಿತರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಭಾರತ ಸರ್ಕಾರ ಕಾಶ್ಮೀರಿ ಪಂಡಿತರ ಸಮಸ್ಯೆಯನ್ನು ಕಂಬಳಿಯಡಿಯಲ್ಲಿ ಹುದುಗಿಸಲು ಪ್ರಯತ್ನಿಸುತ್ತಿದೆ. ಸರ್ಕಾರದ ನಿಷ್ಠುರ ನೀತಿಗಳಿಂದಾಗಿಯೇ ಪಲಾಯನ ಮಾಡಲು ಬಯಸದ ಕಾಶ್ಮೀರಿ ಪಂಡಿತರ ಹತ್ಯೆಯಾಗುತ್ತಿರುವುದು. ನಾವು ಅವರ ಶತ್ರುಗಳು ಎಂದು ಮುಖ್ಯಧಾರೆಯಲ್ಲಿ ಬಿಂಬಿಸುವುದಕ್ಕಾಗಿಯೇ ನನ್ನನ್ನು ಇಂದು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಚೋಟಿಗಾಮ್​​ನಲ್ಲಿರುವ ಭಟ್ ಕುಟುಂಬವನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೆ, ಆದರೆ ಆಡಳಿತ ನನ್ನನ್ನು ತಡೆದಿದೆ. ನಮ್ಮ ಸುರಕ್ಷತೆಗಾಗಿ ನನ್ನನ್ನು ಲಾಕ್ ಮಾಡಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ ಅವರು ಕಣಿವೆಯ ಮೂಲೆ ಮೂಲೆಗೂ ಭೇಟಿ ನೀಡುತ್ತಿದ್ದಾರೆ ಎಂದಿದ್ದಾರೆ ಮುಫ್ತಿ.

Published On - 5:00 pm, Sun, 21 August 22

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು