AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಗೃಹ ಬಂಧನದಲ್ಲಿಡಲಾಗಿದೆ: ಮನೆ ಗೇಟ್​​ಗೆ ಬೀಗ ಹಾಕಿರುವ ಫೋಟೊ ಟ್ವೀಟ್​​ ಮಾಡಿದ ಮೆಹಬೂಬಾ ಮುಫ್ತಿ

Mehbooba Mufti ಭಾರತ ಸರ್ಕಾರ ಕಾಶ್ಮೀರಿ ಪಂಡಿತರ ಸಮಸ್ಯೆಯನ್ನು ಕಂಬಳಿಯಡಿಯಲ್ಲಿ ಹುದುಗಿಸಲು ಪ್ರಯತ್ನಿಸುತ್ತಿದೆ. ಸರ್ಕಾರದ ನಿಷ್ಠುರ ನೀತಿಗಳಿಂದಾಗಿಯೇ ಪಲಾಯನ ಮಾಡಲು ಬಯಸದ ಕಾಶ್ಮೀರಿ ಪಂಡಿತರ ಹತ್ಯೆಯಾಗುತ್ತಿರುವುದು

ನನ್ನನ್ನು ಗೃಹ ಬಂಧನದಲ್ಲಿಡಲಾಗಿದೆ: ಮನೆ ಗೇಟ್​​ಗೆ ಬೀಗ ಹಾಕಿರುವ ಫೋಟೊ ಟ್ವೀಟ್​​ ಮಾಡಿದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
TV9 Web
| Edited By: |

Updated on:Aug 21, 2022 | 5:01 PM

Share

ಶ್ರೀನಗರ: ಇತ್ತೀಚೆಗೆ ಶೋಪಿಯಾನ್​​ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕಾಶ್ಮೀರಿ ಪಂಡಿತ್ (Kashmiri Pandit) ಸುನಿಲ್ ಕುಮಾರ್ ಭಟ್​​ನ ಕುಟುಂಬವನ್ನು ಭೇಟಿ ಮಾಡಲು ಹೋಗುವುದನ್ನು ತಡೆಯುವುದಕ್ಕಾಗಿ ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಪಿಡಿಪಿ (PDP)ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti) ಭಾನುವಾರ ಹೇಳಿದ್ದಾರೆ. ಗುರ್ಪಾಕರ್ ಪ್ರದೇಶದಲ್ಲಿರುವ ತನ್ನ ಮನೆಯ ಗೇಟ್​​ಗೆ ಬೀಗ ಹಾಕಿರುವುದನ್ನು ಮತ್ತು ಮನೆಯ ಹೊರಗೆ ಸಿಆರ್​​ಪಿಎಫ್ ವಾಹನ ನಿಲ್ಲಿಸಿರುವ ಫೋಟೊವನ್ನು ಮುಫ್ತಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರದ ನಿಷ್ಠುರ ನೀತಿಗಳಿಂದಾಗಿ ಕಾಶ್ಮೀರ ಪಂಡಿತರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಭಾರತ ಸರ್ಕಾರ ಕಾಶ್ಮೀರಿ ಪಂಡಿತರ ಸಮಸ್ಯೆಯನ್ನು ಕಂಬಳಿಯಡಿಯಲ್ಲಿ ಹುದುಗಿಸಲು ಪ್ರಯತ್ನಿಸುತ್ತಿದೆ. ಸರ್ಕಾರದ ನಿಷ್ಠುರ ನೀತಿಗಳಿಂದಾಗಿಯೇ ಪಲಾಯನ ಮಾಡಲು ಬಯಸದ ಕಾಶ್ಮೀರಿ ಪಂಡಿತರ ಹತ್ಯೆಯಾಗುತ್ತಿರುವುದು. ನಾವು ಅವರ ಶತ್ರುಗಳು ಎಂದು ಮುಖ್ಯಧಾರೆಯಲ್ಲಿ ಬಿಂಬಿಸುವುದಕ್ಕಾಗಿಯೇ ನನ್ನನ್ನು ಇಂದು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಚೋಟಿಗಾಮ್​​ನಲ್ಲಿರುವ ಭಟ್ ಕುಟುಂಬವನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೆ, ಆದರೆ ಆಡಳಿತ ನನ್ನನ್ನು ತಡೆದಿದೆ. ನಮ್ಮ ಸುರಕ್ಷತೆಗಾಗಿ ನನ್ನನ್ನು ಲಾಕ್ ಮಾಡಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ ಅವರು ಕಣಿವೆಯ ಮೂಲೆ ಮೂಲೆಗೂ ಭೇಟಿ ನೀಡುತ್ತಿದ್ದಾರೆ ಎಂದಿದ್ದಾರೆ ಮುಫ್ತಿ.

Published On - 5:00 pm, Sun, 21 August 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ