AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ
ಮಾಜಿ ಶಾಸಕ ಸಿ.ಟಿ.ರವಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 31, 2023 | 9:36 PM

Share

ಚಿಕ್ಕಮಗಳೂರು, ಜುಲೈ 31: ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ (CT Ravi) ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಅಧಿಕಾರ ಕೊಟ್ಟಿದ್ದು ನೀವು ಹೇಳಿದ ಗ್ಯಾರಂಟಿ ನಂಬಿ. ಬೆಲೆ ಏರಿಕೆ ಬರೆ ಎಳೆಯುತ್ತಾರೆ ಅಂತಾ ಯಾರೂ ಊಹಿಸಿರಲಿಲ್ಲ ಎಂದಿದ್ದಾರೆ.

ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಯ್ತು

ಅಮುಲ್ ಮತ್ತು ನಂದಿನಿ ತಾಂತ್ರಿಕ ಸಹಕಾರ ಬಗ್ಗೆ ರೈತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ. ಚುನಾವಣೆ ವೇಳೆ ಅಮಿತ್ ಶಾ ಹೇಳಿಕೆ ಬಗ್ಗೆ ಅಪಪ್ರಚಾರ ಮಾಡಿದರು. ಕಳೆದ 50 ವರ್ಷದಿಂದ ಟಿಟಿಡಿಗೆ ನಂದಿನಿ ತುಪ್ಪ ಪೂರೈಕೆ ಆಗುತ್ತಿದೆ. ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ, 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಟ್ಟ ಕಾಂಗ್ರೆಸ್: ಬಿಜೆಪಿ ಆಕ್ರೋಶ

ತಿರುಪತಿ ಪ್ರಸಾದಕ್ಕೆ ನಂದಿನಿ ತುಪ್ಪ ಸೇರುತ್ತೆ ಅನ್ನೋದೆ ಹೆಮ್ಮೆ ಸಂಗತಿ. ಸಹಕಾರ ಸಚಿವರು, KMF ಅಧ್ಯಕ್ಷರು ಪ್ರತಿಷ್ಠೆ ಬಿಟ್ಟು ಟಿಟಿಡಿ‌ ಜೊತೆ ಮಾತನಾಡುವಂತೆ ಸಲಹೆ ನೀಡುತ್ತೇನೆ. 50 ವರ್ಷದ ವ್ಯವಹಾರಿಕ ಸಂಬಂಧವನ್ನು ಮುಂದುವರಿಸಬೇಕು. ಸಲಹೆ ಸ್ವೀಕಾರ ಮಾಡದಿದರೆ ಹಾಲು ಉತ್ಪಾದಕರಿಗೆ ನಷ್ಟವಾಗುತ್ತದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ನಿಲ್ಲದ ಭಿನ್ನಮತ; ಪತ್ರ ಬರೆದ ಶಾಸಕರು ಕ್ಷಮೆ ಕೇಳಿದ್ದಾರೆಂಬ ಪರಮೇಶ್ವರ ಹೇಳಿಕೆಗೆ ರಾಯರೆಡ್ಡಿ ಆಕ್ಷೇಪ

ಹೈಕಮಾಂಡ್​​ ಭೇಟಿಗೆ ದೆಹಲಿಗೆ ತೆರಳದ ಮಾಜಿ ಶಾಸಕ ಸಿ.ಟಿ.ರವಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್​​ನಲ್ಲಿರುವ ಮಾಜಿ ಶಾಸಕ ಸಿ.ಟಿ.ರವಿ ಇಂದು ದೆಹಲಿಗೆ ತೆರಳುವುದಾಗಿ ಹೇಳಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಹೈಕಮಾಂಡ್​​ ಭೇಟಿಗೆ ತೆರಳದೇ ಬೆಂಗಳೂರಿನಿಂದ ಚಿಕ್ಕಮಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಬುಧವಾರ ದೆಹಲಿಗೆ ತೆರಳಿ ವರಿಷ್ಠರ ‌ಜೊತೆ ಚರ್ಚೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?