AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದ ಐದು ಗ್ಯಾರಂಟಿ ಯೋಜನೆಗಳು. ಇದರ ಕಾರ್ಡ್ ಸಿದ್ಧಪಡಿಸಿ ಚುನಾವಣಾ ಪೂರ್ವದಲ್ಲಿ ಮತದಾರರಿಗೆ ಹಂಚಲಾಗಿತ್ತು. ಇದೀಗ ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಲಾಗಿದೆ.

ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ
ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ
Ramesha M
| Edited By: |

Updated on: Jul 21, 2023 | 3:13 PM

Share

ಬೆಂಗಳೂರು, ಜುಲೈ 21: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು (Congress Guarantee Card) ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ (Karnataka High Court) ಮೆಟ್ಟಿಲೇರಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದ ಆರೋಪ, ಮಾಜಿ ಶಾಸಕ ವಾಸುಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ತೂಗುಗತ್ತಿ

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ