AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸಲು ನಿರಾಕರಿಸಿದೆ ಎಂದು ತಿಳಿದುಬಂದಿದೆ. ಸ್ವತಃ ರಾಜ್ಯ ಆಹಾರ ಸಚಿವ ಕೆಎಚ್​ ಮುನಿಯಪ್ಪ ದೆಹಲಿಗೆ ಹೋಗಿ ಮನವಿ ಮಾಡಿದರೂ ಫಲ ನೀಡಿಲ್ಲ.

ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ
ಪಿಯೂಷ್​​ ಗೋಯಲ್- ಕೆಎಚ್​ ಮುನಿಯಪ್ಪ ಭೇಟಿ
ರಮೇಶ್ ಬಿ. ಜವಳಗೇರಾ
|

Updated on: Jun 23, 2023 | 2:40 PM

Share

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕನಸಿನ ಯೋಜನೆ ಅನ್ನಭಾಗ್ಯ (Anna Bhagya) ಜಾರಿಗಾಗಿ ಅಕ್ಕಿ ಹೊಂದಿಸಲು ಸರ್ಕಾರ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೆಎಚ್​ ಮುನಿಯಪ್ಪ(HK Muniyappa) ಇಂದು (ಜೂನ್ 23) ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್(Piyush Goyal) ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದ್ರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ. ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದ್ರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿಸದರು.

ಇದನ್ನೂ ಓದಿ: Karnataka Breaking News Live: ಕಾಂಗ್ರೆಸ್ ಗ್ಯಾರಂಟಿ ಕೊಡುವಾಗಲೇ ಎಚ್ಚರಿಕೆ ನೀಡಿದ್ದೆವು ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ ಎಂದು ಹೇಳಿದರು.

ಇನ್ನು ಈ ಬಗ್ಗೆ ರಾಜ್ಯಕ್ಕೆ ಪೂರೈಸಲು ಪಿಯೂಷ್​​ ಗೋಯಲ್​ ನಿರಾಕರಣೆ ವಿಚಾರದ ಇತ್ತ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರದ ಧೋರಣೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ. ಮುಂದೆ ಏನು ಮಾಡಬೇಕೆಂದು ಸಿಎಂ, ಆಹಾರ ಸಚಿವರು ನಿರ್ಧರಿಸುತ್ತಾರೆ. ಇನ್ನು ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಧರಣಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟನೆ ಮಾಡಿದ್ರೆ ಒಳ್ಳೆಯದು ಎಂದು ಟಾಂಗ್ ನೀಡಿದರು.

ರಾಷ್ಟಪತಿ ಭೇಟಿ, ಕೇಂದ್ರ ಸಚಿವರ ಭೇಟಿ ಸೇರಿದಂತೆ ವಿವಿಧ ಕಾರಣಕ್ಕೆ ದೆಹಲಿಗೆ ಹಾರಿದ್ದ ಸಿಎಂ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನ ಭೇಟಿಯಾಗಿ ಅಕ್ಕಿ ಸಂಬಂಧ ಚರ್ಚಿಸಿದ್ದರು. ಅಮಿತ್‌ ಶಾ ಕೂಡಾ ಸಂಬಂಧ ಪಟ್ಟವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದ್ದರಂತೆ, ಆದ್ರೆ, ಇದೀಗ ಸ್ವತಃ ಕೇಂದ್ರ ಆಹಾರ ಸಚಿವ ಪಿಯೂಷ್​​ ಗೋಯಲ್, ಕರ್ನಾಟಕಕ್ಕೆ ಅಕ್ಕಿ ಕೊಡಲು​ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಎಚ್​ ಮುನಿಯಪ್ಪ ದೆಹಲಿಯಾತ್ರೆ ಫಲ ನೀಡಿಲ್ಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಕಿಕ್ಕಿಸಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ