Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನನ್ನನ್ನು ನಿಂದಿಸುತ್ತಾರೆ, ನಾನು ತಲೆಕೆಡಿಸಿಕೊಳ್ಳುವುದಿಲ್ಲ: ರಾಹುಲ್​​​ ಗಾಂಧಿ

ಪ್ರಧಾನಿ ಮೋದಿ ಹೋದಲ್ಲೆಲ್ಲಾ ನನ್ನ ವಿರುದ್ಧ ಕೆಟ್ಟ ಪದಗಳನ್ನು ಬಳಸುತ್ತಾರೆ, ನಿಂದಿಸುತ್ತಾರೆ, ಅಸಂಬದ್ಧವಾಗಿ ಮಾತನಾಡುತ್ತಾರೆ. ನಾನು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಗುರಿಯನ್ನು ನಾನು ಈಗಾಗಲೇ ಹೇಳಿದ್ದೇನೆ. ಅವರು ನನ್ನನ್ನು ಯಾವುದೇ ಹೆಸರಿನಿಂದ ಕರೆಯಬಹುದು, ನಾನು ನಿಜವಾಗಿಯೂ ಹೆದರುವುದಿಲ್ಲ. ನನ್ನ ಗುರಿ ಏನೆಂದರೆ ಪ್ರಧಾನಿ ಮೋದಿ ಎಷ್ಚು ಹಣವನ್ನು ಅದಾನಿಗೆ ಕೊಡುತ್ತಾರೆಯೋ ಅಷ್ಟು ಹಣವನ್ನು ಬಡವರಿಗೆ ಕೊಡುವುದಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನನ್ನನ್ನು ನಿಂದಿಸುತ್ತಾರೆ, ನಾನು ತಲೆಕೆಡಿಸಿಕೊಳ್ಳುವುದಿಲ್ಲ: ರಾಹುಲ್​​​ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Nov 15, 2023 | 6:30 PM

ದೆಹಲಿ ನವೆಂಬರ್ 15: ಪ್ರಧಾನಿ ನರೇಂದ್ರ ಮೋದಿಯವರ (Narendra Modi) “ಮೂರ್ಖೋನ್ ಕೆ ಸರ್ದಾರ್” (ಮೂರ್ಖ ಜನರ ನಾಯಕ) ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi), ತನ್ನ ವಿರುದ್ಧ ಪ್ರಧಾನಿ ಆಡಿದ “ನಿಂದನೀಯ ಮಾತುಗಳು” ಅವರು ಯಾರು ಎಂಬುದನ್ನು ಬಯಲು ಮಾಡಿದೆ. ಗೌತಮ್ ಅದಾನಿ (Gautam Adani) ನೇತೃತ್ವದ ಅದಾನಿ ಗ್ರೂಪ್‌ಗೆ ಮೋದಿ ಸರ್ಕಾರ ಹಣ ನೀಡುತ್ತಿದೆ ಎಂದು ಆರೋಪಿಸಿದ ಗಾಂಧಿ, ದೇಶದ ಬಡ ವರ್ಗಗಳಿಗೆ ಹೆಚ್ಚಿನ ಹಣವನ್ನು ನೀಡುವುದು ತಮ್ಮ ಗುರಿಯಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಹೋದಲ್ಲೆಲ್ಲಾ ನನ್ನ ವಿರುದ್ಧ ಕೆಟ್ಟ ಪದಗಳನ್ನು ಬಳಸುತ್ತಾರೆ, ನಿಂದಿಸುತ್ತಾರೆ, ಅಸಂಬದ್ಧವಾಗಿ ಮಾತನಾಡುತ್ತಾರೆ. ನಾನು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಗುರಿಯನ್ನು ನಾನು ಈಗಾಗಲೇ ಹೇಳಿದ್ದೇನೆ. ಅವರು ನನ್ನನ್ನು ಯಾವುದೇ ಹೆಸರಿನಿಂದ ಕರೆಯಬಹುದು, ನಾನು ನಿಜವಾಗಿಯೂ ಹೆದರುವುದಿಲ್ಲ. ನನ್ನ ಗುರಿ ಏನೆಂದರೆ ಪ್ರಧಾನಿ ಮೋದಿ ಎಷ್ಚು ಹಣವನ್ನು ಅದಾನಿಗೆ ಕೊಡುತ್ತಾರೆಯೋ ಅಷ್ಟು ಹಣವನ್ನು ಬಡವರಿಗೆ ಕೊಡುವುದಾಗಿದೆ ಎಂದು ಹೇಳಿದ್ದಾರೆ.

ಮೋದಿಯವರು ನನ್ನ ವಿರುದ್ಧ “ನಿಂದನೀಯ ಪದಗಳನ್ನು” ಬಳಸುತ್ತಿರುವುದು ನೋಡಿದರೆ ನಾನು ಸರಿಯಾದುದನ್ನೇ ಮಾಡುತ್ತಿದ್ದೇನೆ ಎಂಬುದನ್ನು ಇದು ಸಾಬೀತುಪಡಿಸುತ್ತದೆ.

“ನಿಜವಾದ ರಾಜಕೀಯವು ಕೋಟ್ಯಾಧಿಪತಿಗಳಿಗೆ ಸಹಾಯ ಮಾಡುವುದಲ್ಲ ಎಂದು ನಾನು ನಿಮಗೆ ತೋರಿಸುತ್ತೇನೆ, ನಿರುದ್ಯೋಗಿಗಳು, ರೈತರು, ಸಣ್ಣ ಉದ್ಯಮಗಳಿಗೆ ಸಹಾಯ ಮಾಡುವ ಮೂಲಕ ನಿಜವಾದ ರಾಜಕೀಯ ನಡೆಯುತ್ತದೆ – ನಾನು ನಿಮಗೆ ತೋರಿಸುತ್ತೇನೆ. ನೀವು ಇಷ್ಟಪಡುವದನ್ನು ನೀವು ಹೇಳಬಹುದು. ನೀವು ನನ್ನನ್ನು ಎಷ್ಟು ಬೇಕಾದರೂ ನಿಂದಿಸಬಹುದು. ನಿಮ್ಮ ನಿಂದನೆಗಳು ನಾನು ಸರಿಯಾದ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಸಾಬೀತುಪಡಿಸುತ್ತದೆ. ‘ಚಿಡ್ ಮಚ್ತಿ ಹೈ ನಾ, ಇಸ್ಲಿಯೇ ತೋ ಗಲಿ ದೇತೆ ಹೈಂ (ಅವರಿಗೆ ಕಿರಿಕಿರಿ ಅನಿಸಿದಾಗ ನಿಂದಿಸುತ್ತಾರೆ) ಎಂದಿದ್ದಾರೆ ರಾಹುಲ್.

ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

ಭಾರತೀಯರು ‘ಮೇಡ್ ಇನ್ ಚೀನಾ’ ಮೊಬೈಲ್ ಫೋನ್‌ಗಳನ್ನು ಬಳಸುತ್ತಾರೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆ ಉಲ್ಲೇಖಿಸಿದ ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕ ಮೂರ್ಖ ಜನರ ನಾಯಕ ಎಂದು ಕರೆದರು. ನಿನ್ನೆ ಕಾಂಗ್ರೆಸ್ ನ ಬುದ್ದಿವಂತರೊಬ್ಬರು ದೇಶದ ಜನರಲ್ಲಿ ಚೈನಾ ಮೊಬೈಲ್ ಮಾತ್ರಇದೆ ಎಂದು ಹೇಳುತ್ತಿದ್ದರು. ಅರೇ ‘ಮೂರ್ಖೋನ್ ಕೆ ಸರ್ದಾರ್’, ನೀವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಭಾರತದ ಸಾಧನೆಗಳನ್ನು ಕಡೆಗಣಿಸುವ ಮಾನಸಿಕ ಕಾಯಿಲೆಗೆ ತುತ್ತಾಗಿದ್ದಾರೆ. ಅವರು ಭಾರತವನ್ನು ನೋಡಲು ಸಾಧ್ಯವಾಗದ ಯಾವ ವಿದೇಶಿ ಕನ್ನಡಕವನ್ನು ಧರಿಸಿದ್ದಾರೆ ಎಂದು ನನಗೆ ಆಶ್ಚರ್ಯವಾಗುತ್ತದೆ ಎಂದು ರಾಹುಲ್ ಗಾಂಧಿ ಹೆಸರನ್ನು ನೇರವಾಗಿ ಉಲ್ಲೇಖಿಸದೇ ಮೋದಿ ಗುಡುಗಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಪ್ರತಿದಾಳಿ ನಡೆಸಿದೆ. ಪ್ರಧಾನಿ ಮೋದಿ ಮಧ್ಯಪ್ರದೇಶದ ಜನರನ್ನು ನಿಂದಿಸಿದ್ದಾರೆ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. ಅವರು ಸಾರ್ವಜನಿಕರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ, ನಮ್ಮ ನಾಯಕನನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಮುಂದೆ ಯಾರನ್ನೂ ಪರಿಗಣಿಸುವುದಿಲ್ಲ ಎಂಬಷ್ಟು ದುರಹಂಕಾರಿಯಾಗಿದ್ದಾರೆ. ರಾವಣನಿಗೂ ಅಂತಹ ದುರಹಂಕಾರವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ, ಮೋದಿಯ ಭವಿಷ್ಯ ಏನಾಗಬಹುದು ಎಂದು ಅವರು ಹೇಳಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವ ಮುನ್ನ ಪ್ರಧಾನಿ ಮೋದಿಯವರು ತಾವು ನಿರ್ವಹಿಸುತ್ತಿರುವ ಹುದ್ದೆಯ ಘನತೆಯನ್ನು ನೆನಪಿಸಿಕೊಳ್ಳಬೇಕು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಈ ಹೇಳಿಕೆಯು ನಡೆಯುತ್ತಿರುವ ಚುನಾವಣಾ ಫಲಿತಾಂಶಗಳ ಬಗ್ಗೆ ಅವರಿಗೆ ತಿಳಿದಿದೆ ಎಂದು ತೋರಿಸುತ್ತದೆ ಎಂದು ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಫಲಿತಾಂಶಗಳ ಬಗ್ಗೆ ಈಗಾಗಲೇ ತಿಳಿದಿರುತ್ತಾರೆ. ದೇಶದ ಪ್ರಧಾನಿ ಇಂತಹ ಅಸಭ್ಯ ಭಾಷೆ ಬಳಸುತ್ತಿದ್ದಾರೆ ಮತ್ತು ರಾಹುಲ್ ಗಾಂಧಿಯನ್ನು ಮೂರ್ಖ ಎಂದು ಕರೆಯುತ್ತಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಛತ್ತೀಸ್‌ಗಢ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಹೀನಾಯ ಸೋಲು ಖಚಿತ: ಮೋದಿ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಪುನರಾವರ್ತಿಸಿದ ಹಿಮಂತ ಬಿಸ್ವಾ ಶರ್ಮಾ

ಏತನ್ಮಧ್ಯೆ, ಬಿಜೆಪಿ ನಾಯಕ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಹುಲ್ ಗಾಂಧಿ ಬಗ್ಗೆ ಪ್ರಧಾನಿ ಮೋದಿಯವರ ಹೇಳಿಕೆ ಸರಿ ಎಂದಿದ್ದಾರೆ. ಅದು ನಿಜ. ಅದರಲ್ಲಿ ಹೊಸದೇನೂ ಇಲ್ಲ. ಅವರು ಏನೆಂದು ಭಾರತದಾದ್ಯಂತ ಜನರಿಗೆ ತಿಳಿದಿದೆ. ಅವರು ಪ್ರಧಾನಿಯನ್ನು ಹೇಗೆ ಸಂಪರ್ಕಿಸುತ್ತಾರೆ ಎಂಬುದನ್ನು ನೀವು ಸಂಸತ್ತಿನಲ್ಲಿ ನೋಡಿರಬೇಕು … ಅವರು ‘ಮೊಹಬ್ಬತ್’ ಮತ್ತು ‘ದುಕಾನ್’ ಬಗ್ಗೆ ಮಾತನಾಡುತ್ತಾರೆ. ‘ಮೊಹಬ್ಬತ್’ ಮತ್ತು ‘ದುಕಾನ್’ ಒಟ್ಟಿಗೆ ಇರಬಹುದೇ? ‘ಮೊಹಬ್ಬತ್’ ಎಂದರೆ ನಿಜವಾದ ಪ್ರೀತಿ ಮತ್ತು ‘ದುಕಾನ್’ ಎಂದರೆ ಮಾರಾಟ ಮತ್ತು ಖರೀದಿಗೆ… ಹಾಗಾಗಿ ಪ್ರೀತಿಗೆ ಎಂದಿಗೂ ಅಂಗಡಿ ಇರಲಾರದು. ಯಾರೋ ರಾಹುಲ್ ಗಾಂಧಿಗೆ ಸ್ಕ್ರಿಪ್ಟ್ ನೀಡುತ್ತಾರೆ ಮತ್ತು ಅವರು ಓದುತ್ತಾರೆ ಅವನು ಅವನನ್ನು ಆಂಗ್ರಿ ಯಂಗ್ ಮ್ಯಾನ್ ಎಂದು ತೋರಿಸಲು ಪ್ರಯತ್ನಿಸುತ್ತಿದ್ದಾನೆ. ಆದ್ದರಿಂದಲೇ ನಾನು ಭಾವಿಸುತ್ತೇನೆ ಪ್ರಧಾನಿ ಹೇಳಿದ್ದು ಭಾರತದಲ್ಲಿ ಎಲ್ಲರಿಗೂ ತಿಳಿದಿದೆ, ಇದು ಪ್ರತಿಯೊಬ್ಬರ ಮನಸ್ಸಿನಲ್ಲಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Wed, 15 November 23

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು