AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೈಕ್ಲೋನ್ ಥರ ರಾಜ್ಯಕ್ಕೆ ಬಂದು ಹೋಗುತ್ತಿದ್ದಾರೆ: ವೀರಪ್ಪ ಮೊಯ್ಲಿ ಕಿಡಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೈಕ್ಲೋನ್ ಥರ ರಾಜ್ಯಕ್ಕೆ ಬರುತ್ತಿದ್ದಾರೆ. ಆದರೆ ಬರುವ ಮೊದಲು ಅವರು ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಕಿಡಿಕಾರಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೈಕ್ಲೋನ್ ಥರ ರಾಜ್ಯಕ್ಕೆ ಬಂದು ಹೋಗುತ್ತಿದ್ದಾರೆ: ವೀರಪ್ಪ ಮೊಯ್ಲಿ ಕಿಡಿ
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿImage Credit source: varthabharati.in
ಗಂಗಾಧರ​ ಬ. ಸಾಬೋಜಿ
|

Updated on:Mar 05, 2023 | 6:05 PM

Share

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೈಕ್ಲೋನ್ ಥರ ರಾಜ್ಯಕ್ಕೆ ಬರುತ್ತಿದ್ದಾರೆ. ಆದರೆ ಬರುವ ಮೊದಲು ಅವರು ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಕಿಡಿಕಾರಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಧಾನಿ ಮೋದಿಗೆ ಸುದ್ದಿಗೋಷ್ಟಿ ನಡೆಸುವ ಧೈರ್ಯ ಕೂಡ ಇಲ್ಲ. ಕರ್ನಾಟಕದ ಹಲವು ಮೂಲಭೂತ ಸಮಸ್ಯೆಗಳಿವೆ. ಕೃಷ್ಣಾ ನದಿ ನೀರು ಹಂಚಿಕೆ ನ್ಯಾಯಪೀಠದಲ್ಲಿ ಇತ್ಯರ್ಥವಾಗಿ ಹಲವು ವರ್ಷಗಳಾಗಿದೆ. ಆದರೆ ಈವರೆಗೆ ಕೇಂದ್ರ ಸರ್ಕಾರ ಇದರ ಬಗ್ಗೆ ಅಧಿಸೂಚನೆ ಹೊರಡಿಸಿಲ್ಲ. ನೋಟಿಫಿಕೇಶನ್ ಮಾಡದೇ ಕರ್ನಾಟಕವನ್ನ ಕೇಂದ್ರ ಸರ್ಕಾರ ಸತಾಯಿಸುತ್ತಿದೆ. ಜನರು ಮೋದಿ ಮತ್ತು ಅಮಿತ್ ಶಾ ಬಂದಾಗ ಇದನ್ನ ಕೇಳಬೇಕು ಎಂದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರೂ ಭ್ರಷ್ಟರು

40% ಭ್ರಷ್ಟಾಚಾರ ರಾಜ್ಯದ ಬಿಜೆಪಿಯಲ್ಲಿ ದೊಡ್ಡ ಮಟ್ಟದಲ್ಲಿ ನಡೀತಾ ‌ಇದೆ. ನಾವು ಶಾಸಕರಾಗಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರಲ್ಲಿ ಭ್ರಷ್ಟಾಚಾರ ಇರಲಿಲ್ಲ. ಆದರೆ ಇದೀಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರೂ ಭ್ರಷ್ಟರಾಗಿದ್ದಾರೆ. ಮೊನ್ನೆ ಮಾಡಾಲ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಬಯಲಾಗಿದೆ. 1980ರಲ್ಲಿ ನಾನು ಸೋಪ್ ಫ್ಯಾಕ್ಟರಿ ಆಧುನಿಕರಣ ಮಾಡಿ ಉಳಿಸಿದ್ದೆ. ಆದರೆ ಇದೀಗ ಆ ಸೋಪ್ ಪ್ಯಾಕ್ಟರಿ ದರೋಡೆ ಮಾಡಲು ಇಳಿದಿದ್ದಾರೆ. ಸದ್ಯ ಎಂಎಲ್ಎ ಸಿಕ್ಕಿಲ್ಲ, ಅವರು ಸಿಗಲ್ಲ‌ ಅನ್ನೋದು ಕೂಡ ಸ್ಪಷ್ಟ. ಅಮಿತ್ ಶಾ ಇಲ್ಲಿಗೆ ಬಂದು ನಿಮಗೆ ಅಬ್ಬಕ್ಕ ಬೇಕಾ ಟಿಪ್ಪು ಬೇಕಾ ಅಂತಾರೆ. ಅಮಿತ್​ ಶಾಗೆ ಇತಿಹಾಸದ ಸಾಮಾನ್ಯ ಜ್ಞಾನವಿಲ್ಲ ಎಂದು ಹಿರಿಹಾಯ್ದರು.

ಇದನ್ನೂ ಓದಿ: ಶಾಮನೂರು ಶಿವಶಂಕರಪ್ಪಗೆ ಬುದ್ಧಿಭ್ರಮಣೆ ಆಗಿದೆ: ಮಾಡಾಳ್​ ಮನೆ ಮೇಲಿನ ದಾಳಿಗೆ ನಾನು ಕಾರಣವಲ್ಲ ಎಂದ ಜಿಎಂ ಸಿದ್ದೇಶ್ವರ

ಅಮಿತ್ ಶಾಗೆ ಇತಿಹಾಸದ ಪ್ರಜ್ಞೆ ಇಲ್ಲ

ಅಬ್ಬಕ್ಕನ ಸೈನಿಕರು ಬ್ಯಾರಿಗಳು ಮತ್ತು ಮೊಗವೀರರು. ಅಬ್ಬಕ್ಕ ಪೋರ್ಚುಗೀಸರನ್ನ ಓಡಿಸಲು ಇವರ ಸೈನ್ಯ ನೆರವಾಗಿತ್ತು. ಇತಿಹಾಸದಲ್ಲಿ ಈ ಸೈನ್ಯದ ಬಗ್ಗೆ ಉಲ್ಲೇಖವಿದೆ. ಅಮಿತ್ ಶಾಗೆ ಇತಿಹಾಸದ ಪ್ರಜ್ಞೆ ಇಲ್ಲ. ಕಾಂಗ್ರೆಸ್ ಅವಧಿಯಲ್ಲಿ ಮಂಗಳೂರಿನ ‌ಕ್ಯಾಂಪ್ಕೋ ಸ್ಥಾಪನೆಯಾಗಿದ್ದು. ಆದರೆ ಈಗ ಬಿಜೆಪಿ ಅದನ್ನ ಹೈಜ್ಯಾಕ್ ಮಾಡಿ ಓನರ್ ಶಿಪ್ ತೆಗೊಳೋದಕ್ಕೆ ಯತ್ನಿಸುತ್ತಿದೆ. ಉಪ್ಪಿನಂಗಡಿ ಹತ್ತಿರ ಒಂದು ದೇವಸ್ಥಾನದ ನವೀಕರಣಕ್ಕೆ ಆರು ಕೋಟಿ ಎಸ್ಟಿಮೇಟ್ ಮೇಟ್ ಮಾಡಿ ಸಿಎಂ ಹತ್ತಿರ ಹೋಗಿದ್ದಾರೆ. ಆದರೆ ಅನುದಾನ ಇಲ್ಲ ಅಂತ ಅಲ್ಲಿಂದ ‌ವಾಪಾಸ್ ಬಂದಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಹೇಳಿದಂತೆ ತಿನ್ನೋದೂ ಇಲ್ಲ, ತಿನ್ನುಲು ಬಿಡುವುದು ಇಲ್ಲ: ಡಿಕೆಶಿಗೆ ಸಚಿವ ಅಶೋಕ್ ತಿರುಗೇಟು

ಈ ತಿಂಗಳ ಅಂತ್ಯಕ್ಕೆ ಮೊದಲ ಕಾಂಗ್ರೆಸ್​ ಪಟ್ಟಿ 

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಕೆಪಿಸಿಸಿ ಟಿಕೆಟ್ ಹೆಸರು ಫೈನಲ್ ಅಗಿದೆ. ಈಗ ಸ್ಕ್ರೀನಿಂಗ್ ಕಮಿಟಿ ಮುಂದೆ ಇದೆ. ಆ ಬಳಿಕ ಅದು ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ‌ಮುಂದೆ ಬರುತ್ತೆ. ನಾನು ಸಮಿತಿಯಲ್ಲಿ ಇರೋ ಕಾರಣ ದ‌ಕ್ಷಿಣ ಕನ್ನಡ ಮತ್ತು ಉಡುಪಿಯ ಆಕಾಂಕ್ಷಿಗಳ ಜೊತೆ ಚರ್ಚೆ ಮಾಡ್ತೇನೆ. ಇಲ್ಲಿನ ವಾತಾವರಣದ ಬಗ್ಗೆ ಮಾಹಿತಿ ಪಡೆದು‌ ಸಮಿತಿ ಮುಂದೆ ಇಡುತ್ತೇನೆ. ಫೆ.7 ಮತ್ತು 8 ಕ್ಕೆ ಸ್ಕ್ರೀನಿಂಗ್ ಕಮಿಟಿ ಮೀಟಿಂಗ್ ಇದೆ. ಈ ತಿಂಗಳ ಅಂತ್ಯಕ್ಕೆ ಮೊದಲ ಪಟ್ಟಿ ಬರಬಹುದು. ಎಐಸಿಸಿ ಯುವಕರಿಗೆ ಅವಕಾಶ ಕೊಡಲು ಹೇಳಿದೆ. ಎಐಸಿಸಿ, ಕೆಪಿಸಿಸಿ ಸೇರಿ ಮೂರ್ನಾಲ್ಕು ಸರ್ವೇ ಈಗ ಆಗಿದೆ. ಗೆಲ್ಲುವ ಯುವ ಅಭ್ಯರ್ಥಿ ಇದ್ದರೆ ಅವರಿಗೆ ಅವಕಾಶ ಸಿಗಲಿದೆ ಎಂದು ತಿಳಿಸಿದರು.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:05 pm, Sun, 5 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ