AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಅತ್ಯುತ್ತಮ ಯುಗ ಬರಲಿದೆ, ನಾವು ಸಮಾಜದ ಎಲ್ಲಾ ವರ್ಗಗಳನ್ನು ಸಂಪರ್ಕಿಸಬೇಕು: ಮೋದಿ

ಅಲ್ಪಸಂಖ್ಯಾತರಾದ ಬೋಹ್ರಾಗಳು, ಪಸ್ಮಾಂಡಾಗಳು ಮತ್ತು ಸಿಖ್ಖರು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಲು ಮತ್ತು ಚುನಾವಣೆಯನ್ನು ಬದಿಗಿಟ್ಟು ಅವರಿಗಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿ ಕಾರ್ಯಕರ್ತರ ಬಳಿ ಹೇಳಿದ್ದಾರೆ.

ಭಾರತದ ಅತ್ಯುತ್ತಮ ಯುಗ ಬರಲಿದೆ, ನಾವು ಸಮಾಜದ ಎಲ್ಲಾ ವರ್ಗಗಳನ್ನು ಸಂಪರ್ಕಿಸಬೇಕು: ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Jan 18, 2023 | 10:48 AM

Share

ಅಲ್ಪಸಂಖ್ಯಾತರಾದ ಬೋಹ್ರಾಗಳು, ಪಸ್ಮಾಂಡಾಗಳು ಮತ್ತು ಸಿಖ್ಖರು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಲು ಮತ್ತು ಚುನಾವಣೆಯನ್ನು ಬದಿಗಿಟ್ಟು ಅವರಿಗಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿ ಕಾರ್ಯಕರ್ತರ ಬಳಿ ಹೇಳಿದ್ದಾರೆ. ಎರಡು ದಿನಗಳ ಕಾಲ ನವದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. 2024ರ ಲೋಕಸಭೆ ಚುನಾವಣೆಗೆ ಸುಮಾರು 400 ದಿನಗಳು ಬಾಕಿ ಉಳಿದಿವೆ ಎಂದು ಹೇಳಿರುವ ಮೋದಿ, ಪ್ರತಿ ವಿಭಾಗಕ್ಕೂ ಸಂಪೂರ್ಣ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸುವಂತೆ ತಿಳಿಸಿದರು. ಕೇಸರಿ ಸಂಘಟನೆಯನ್ನು ವಿಸ್ತರಿಸುವ ಮತ್ತು ದೇಶವನ್ನು ಪ್ರತಿಯೊಂದು ಅಂಶದಲ್ಲಿ ಮುನ್ನಡೆಸುವ ಆಶಯ ಹೊಂದಿರುವುದಾಗಿ ತಿಳಿಸಿದರು.

ಜೀವನದ ವಿವಿಧ ಹಂತಗಳ ವೃತ್ತಿಪರರನ್ನು ಭೇಟಿಯಾಗಲು ಮತ್ತು ವಿಶ್ವವಿದ್ಯಾನಿಲಯಗಳು ಮತ್ತು ಚರ್ಚ್‌ಗಳಂತಹ ಸ್ಥಳಗಳಿಗೆ ಭೇಟಿ ನೀಡುವಂತೆ ಹೇಳಿದರು. ಭಾರತದ ಅತ್ಯುತ್ತಮ ಯುಗ ಬರಲಿದೆ ಮತ್ತು ಪಕ್ಷವು ದೇಶದ ಅಭಿವೃದ್ಧಿಗೆ ತನ್ನನ್ನು ಸಮರ್ಪಿಸಿಕೊಳ್ಳಬೇಕು , ಮತ್ತು 2047 ರ 25 ವರ್ಷಗಳ ಅವಧಿಯನ್ನು ಅಮೃತ ಕಾಲ ವನ್ನು ಕರ್ತವ್ಯ ಕಾಲ (ಕರ್ತವ್ಯಗಳ ಯುಗ) ಆಗಿ ಪರಿವರ್ತಿಸಬೇಕು ಎಂದು ಪ್ರಧಾನಿ ಹೇಳಿದರು. ಭಾರತದ ಅತ್ಯುತ್ತಮ ಯುಗ ಬರಲಿದೆ, ಅದರ ಅಭಿವೃದ್ಧಿಗಾಗಿ ನಾವು ನಮ್ಮನ್ನು ಅರ್ಪಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಭಾಷಣದಲ್ಲಿ ಹೇಳಿದರು.

ಮತ್ತಷ್ಟು ಓದಿ: ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣೆ ತಂತ್ರಗಾರಿಕೆ: ಏನಿದು ಬಿಜೆಪಿಯ A,B,C ಪ್ಲಾನ್..?

ಬಿಜೆಪಿ ಇನ್ನು ಮುಂದೆ ಕೇವಲ ರಾಜಕೀಯ ಚಳವಳಿಯಾಗಿರದೆ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಬದಲಾಯಿಸಲು ಕೆಲಸ ಮಾಡುವ ಸಾಮಾಜಿಕ ಚಳುವಳಿಯಾಗಿದೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಮಂಗಳವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು.

ಯಾವುದೇ ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ ಎಂದು ಅವರು ಪಕ್ಷವನ್ನು ಎಚ್ಚರಿಸಿದ್ದಾರೆ ಮತ್ತು 1998 ರಲ್ಲಿ ದಿಗ್ವಿಜಯ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯ ಹೊರತಾಗಿಯೂ ಮಧ್ಯಪ್ರದೇಶದಲ್ಲಿ ಬಿಜೆಪಿಯ ಸೋಲಿನ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಇನ್ನು ಮುಂದೆ ಕೇವಲ ರಾಜಕೀಯ ಚಳವಳಿಯಾಗಿರದೆ ಸಾಮಾಜಿಕ ಆಂದೋಲನವಾಗಿದೆ, ಅದು ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳನ್ನು ಪರಿವರ್ತಿಸಲು ಕೆಲಸ ಮಾಡುತ್ತಿದೆ ಎಂದು ಮೋದಿ ಕಾರ್ಯಕಾರಿಣಿಯಲ್ಲಿ ಹೇಳಿದರು.

18-25 ವಯಸ್ಸಿನ ಜನರು ಭಾರತದ ರಾಜಕೀಯ ಇತಿಹಾಸವನ್ನು ನೋಡಿಲ್ಲ ಮತ್ತು ಹಿಂದಿನ ಸರ್ಕಾರಗಳ ಅಡಿಯಲ್ಲಿ ನಡೆದ ಭ್ರಷ್ಟಾಚಾರ ಮತ್ತು ತಪ್ಪುಗಳ ಬಗ್ಗೆ ತಿಳಿದಿರುವುದಿಲ್ಲ ಎಂದು ಪ್ರಧಾನಿ ಹೇಳಿದರು. ಹಾಗಾಗಿ, ಅವರಿಗೆ ಅರಿವು ಮೂಡಿಸಬೇಕು. ಬಿಜೆಪಿಯ ಉತ್ತಮ ಆಡಳಿತದ ಬಗ್ಗೆ ಅವರಿಗೆ ತಿಳಿಸಿ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?