AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ವಾರಾಣಸಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ, ₹1,800 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

ಡಾ ಸಂಪೂರ್ಣಾನಂದ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೋದಿ ಅವರು ₹590 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ನಾಳೆ ವಾರಾಣಸಿಗೆ ಭೇಟಿ ನೀಡಲಿದ್ದಾರೆ  ಪ್ರಧಾನಿ ಮೋದಿ, ₹1,800 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 06, 2022 | 12:33 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi)ನಾಳೆ (ಜುಲೈ 7) ವಾರಣಾಸಿಗೆ (Varanasi) ಭೇಟಿ ನೀಡಲಿದ್ದು ₹1,800 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮೋದಿ ಅವರು ವಾರಣಾಸಿಯ ಎಲ್ ಟಿ ಕಾಲೇಜಿನಲ್ಲಿ ಅಕ್ಷಯ್ ಪಾತ್ರ ಮಿಡ್ ಡೇ ಮೀಲ್ ಕಿಚನ್(Akshay Patra Mid Day Meal Kitchen) ಉದ್ಘಾಟನೆ ಮಾಡಲಿದ್ದಾರೆ. ಈ ಅಡುಗೆ ಮನೆ ಸರಿಸುಮಾರು 1 ಲಕ್ಷ ಮಕ್ಕಳಿಗೆ ಮಧ್ಯಾಹ್ನದೂಟ ತಯಾರಿ ಮಾಡುವ ಸಾಮರ್ಥ್ಯ ಹೊಂದಿದೆ. 2.45ಕ್ಕೆ ಪ್ರಧಾನಿ ರುದ್ರಾಕ್ಷದಲ್ಲಿರುವ ಇಂಟರ್​​ನ್ಯಾಷನಲ್ ಕಾರ್ಪೊರೇಷನ್ ಅಂಡ್ ಕನ್ವೆನ್ಶನ್ ಸೆಂಟರ್​​ಗೆ ಭೇಟಿ ನೀಡಲಿದ್ದು ಅಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಕಾರ್ಯಕ್ರಮವಾದ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಂಜೆ 4 ಗಂಟೆಗೆ ಅವರು ಸಿಗ್ರಾದಲ್ಲಿರುವ ಡಾ ಸಂಪೂರ್ಣಾನಂದ ಸ್ಪೋರ್ಟ್ ಸ್ಟೇಡಿಯಂ ತಲುಪಲಿದ್ದು ಅಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಕಳೆದ ಎಂಟು ವರ್ಷಗಳಲ್ಲಿ ಮೋದಿ ತಮ್ಮ ತವರು ಕ್ಷೇತ್ರವಾದ ವಾರಣಾಸಿಯಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ಅಲ್ಲಿನ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಡಾ ಸಂಪೂರ್ಣಾನಂದ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೋದಿ ಅವರು ₹590 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ವಾರಣಾಸಿ ಸ್ಮಾರ್ಟ್ ಸಿಟಿ ಮತ್ತು ನಗರಾಭಿವೃದ್ಧಿ ಯೋಜನೆಗಳಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಾದ ನಮೋ ಘಾಟ್ ಹಂತ-1ರ ಪುನರಾಭಿವೃದ್ಧಿ, ಬೋಟ್ ಗಳಲ್ಲಿರುವ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ಗಳನ್ನು ಸಿಎನ್ ಜಿ ಆಗಿ ಪರಿವರ್ತಿಸುವುದು, ಹಳೆಯ ಕಾಶಿಯ ಕಾಮೇಶ್ವರ ಮಹಾದೇವ್ ವಾರ್ಡ್‌ನ ಪುನರಾಭಿವೃದ್ಧಿ ಮತ್ತು ಹರ್ಹುವಾ, ದಾಸೆಪುರದಲ್ಲಿ 600 ಕ್ಕೂ ಹೆಚ್ಚು EWS ಫ್ಲಾಟ್‌ಗಳ ನಿರ್ಮಾಣ, ಹೊಸ ಮಾರಾಟ ವಲಯ ಮತ್ತು ಲಹರ್ತಾರಾ-ಚೌಕಾ ಘಾಟ್ ಫ್ಲೈಓವರ್ ಅಡಿಯಲ್ಲಿ ಸಿದ್ಧಪಡಿಸಲಾದ ನಗರ ಸ್ಥಳ, ದಶಾಶ್ವಮೇಧ ಘಾಟ್‌ನಲ್ಲಿ ಪ್ರವಾಸಿ ಸೌಲಭ್ಯ ಮತ್ತು ಮಾರುಕಟ್ಟೆ ಸಂಕೀರ್ಣ ಮತ್ತು IPDS ವರ್ಕ್ ಹಂತ-3 ಅಡಿಯಲ್ಲಿ ನಾಗ್ವಾದಲ್ಲಿ 33/11 KV ಸಬ್ ಸ್ಟೇಷನ್ ಸೇರಿದೆ.

ಇದನ್ನೂ ಓದಿ
Image
PM Special Scheme: ಪಿಎಂ ಸ್ಪೆಷಲ್ ಯೋಜನೆ; ವೃದ್ಧರಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ನೀಡಲು ಸರ್ಕಾರ ಚಿಂತನೆ
Image
PM Modi Agradoot Group Anniversary: ಅಗ್ರದೂತ್​ ಮಾಧ್ಯಮ ಸಂಸ್ಥೆಯ 50ನೇ ವಾರ್ಷಿಕೋತ್ಸವಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ
Image
‘ನಾನು ವಿನಂತಿಸಿದ್ದರೆ ಮುಖ್ಯಮಂತ್ರಿಯಾಗಬಹುದಿತ್ತು’: ದೇವೇಂದ್ರ ಫಡ್ನವಿಸ್

ಬಬತ್‌ಪುರ-ಕಪ್ಸೇಥಿ-ಭದೋಹಿ ರಸ್ತೆಯಲ್ಲಿ ನಾಲ್ಕು ಪಥದ ರಸ್ತೆಯ ಮೇಲ್ಸೇತುವೆ ನಿರ್ಮಾಣ, ಕೇಂದ್ರ ಕಾರಾಗೃಹದ ರಸ್ತೆಯಲ್ಲಿ ವರುಣಾ ನದಿಗೆ ಸೇತುವೆ, ಪಿಂದ್ರ-ಕತಿರಾವ್ ರಸ್ತೆಯ ಅಗಲೀಕರಣ, ಫೂಲ್ಪುರ್-ಸಿಂಧೌರಾ ಸಂಪರ್ಕ ರಸ್ತೆ ಅಗಲೀಕರಣ, ಎಂಟು ಗ್ರಾಮೀಣ ರಸ್ತೆಗಳ ನಿರ್ಮಾಣ, ಪಿಎಂಜಿಎಸ್‌ವೈ ಅಡಿಯಲ್ಲಿ ಏಳು ರಸ್ತೆಗಳ ನಿರ್ಮಾಣ ಮತ್ತು ಧರ್ಸೌನಾ-ಸಿಂಧೌರಾ ರಸ್ತೆಯ ಅಗಲೀಕರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ ಜಿಲ್ಲೆಯಲ್ಲಿ ಒಳಚರಂಡಿ ಮತ್ತು ನೀರು ಸರಬರಾಜು ಸುಧಾರಣೆಗೆ ಸಂಬಂಧಿಸಿದ ವಿವಿಧ ಯೋಜನೆಗಳ.ನ್ನೂ ಮೋದಿ ಉದ್ಘಾಟಿಸಲಿದ್ದಾರೆ ಎಂದು ಪಿಎಂಒ ತಿಳಿಸಿದೆ.

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?