AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯವಾಗಿ ರಾಹುಲ್ ಗಾಂಧಿ​ ಮುಗಿಸಲು ಷಡ್ಯಂತ್ರ ನಡೀತಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್

ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2023 | 5:51 PM

Share

ಬೆಂಗಳೂರು: ರಾಹುಲ್​ ಬಗ್ಗೆ ಬಂದ ಕೋರ್ಟ್​​ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪ್ರೆಸ್ ಮೀಟ್​ನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ

ರಾಹುಲ್​ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್‌ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ.

ಇದನ್ನೂ ಓದಿ: ವಿಧಾನಸಭೆಯಲ್ಲಿ ‘ಗ್ಯಾರಂಟಿ’ ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ

ಭಾರತ್ ಜೋಡೋ ಯಾತ್ರೆಯಲ್ಲಿ ಅವರು ನಡೆದ ಶಕ್ತಿಯಿಂದಾಗಿ ಕರ್ನಾಟಕಕ್ಕೂ ಶಕ್ತಿ ಬಂತು. ರಾಹುಲ್ ನಡೆದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​

ಜೈನ ಮುನಿ ಹತ್ಯೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದೇವೆ ಅವರು ಉತ್ತರ ಕೊಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ