AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯವಾಗಿ ರಾಹುಲ್ ಗಾಂಧಿ​ ಮುಗಿಸಲು ಷಡ್ಯಂತ್ರ ನಡೀತಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್

ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2023 | 5:51 PM

Share

ಬೆಂಗಳೂರು: ರಾಹುಲ್​ ಬಗ್ಗೆ ಬಂದ ಕೋರ್ಟ್​​ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪ್ರೆಸ್ ಮೀಟ್​ನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ

ರಾಹುಲ್​ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್‌ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ.

ಇದನ್ನೂ ಓದಿ: ವಿಧಾನಸಭೆಯಲ್ಲಿ ‘ಗ್ಯಾರಂಟಿ’ ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ

ಭಾರತ್ ಜೋಡೋ ಯಾತ್ರೆಯಲ್ಲಿ ಅವರು ನಡೆದ ಶಕ್ತಿಯಿಂದಾಗಿ ಕರ್ನಾಟಕಕ್ಕೂ ಶಕ್ತಿ ಬಂತು. ರಾಹುಲ್ ನಡೆದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​

ಜೈನ ಮುನಿ ಹತ್ಯೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದೇವೆ ಅವರು ಉತ್ತರ ಕೊಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು