ರಾಜಕೀಯವಾಗಿ ರಾಹುಲ್ ಗಾಂಧಿ​ ಮುಗಿಸಲು ಷಡ್ಯಂತ್ರ ನಡೀತಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್

| Updated By: ಗಂಗಾಧರ​ ಬ. ಸಾಬೋಜಿ

Updated on: Jul 10, 2023 | 5:51 PM

ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಬೆಂಗಳೂರು: ರಾಹುಲ್​ ಬಗ್ಗೆ ಬಂದ ಕೋರ್ಟ್​​ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪ್ರೆಸ್ ಮೀಟ್​ನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ

ರಾಹುಲ್​ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್‌ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ.

ಇದನ್ನೂ ಓದಿ: ವಿಧಾನಸಭೆಯಲ್ಲಿ ‘ಗ್ಯಾರಂಟಿ’ ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ

ಭಾರತ್ ಜೋಡೋ ಯಾತ್ರೆಯಲ್ಲಿ ಅವರು ನಡೆದ ಶಕ್ತಿಯಿಂದಾಗಿ ಕರ್ನಾಟಕಕ್ಕೂ ಶಕ್ತಿ ಬಂತು. ರಾಹುಲ್ ನಡೆದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​

ಜೈನ ಮುನಿ ಹತ್ಯೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದೇವೆ ಅವರು ಉತ್ತರ ಕೊಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ