AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jan Suraj Padyatra ಬಿಹಾರದಲ್ಲಿ 3,500 ಕಿಮೀ ಪಾದಯಾತ್ರೆ ಆರಂಭಿಸಿದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್

  ಪ್ರಶಾಂತ್ ಕಿಶೋರ್ ಅವರು  ರಾಜಕೀಯ ಪ್ರವೇಶಕ್ಕೆ ಪಾದಯಾತ್ರೆಯನ್ನು ಪೂರ್ವಭಾವಿಯಾಗಿ ನೋಡಲಾಗುತ್ತಿದೆ. ಆದರೆ ಅಂತಹ ಯಾವುದೇ ನಿರ್ಧಾರವನ್ನು ಪ್ರಚಾರದೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಂಡವರು ಮಾತ್ರ ತೆಗೆದುಕೊಳ್ಳಬಹುದು ಎಂದು  ರಾಜಕೀಯ ತಂತ್ರಜ್ಞ ಹೇಳಿದ್ದಾರೆ.

Jan Suraj Padyatra ಬಿಹಾರದಲ್ಲಿ 3,500 ಕಿಮೀ ಪಾದಯಾತ್ರೆ ಆರಂಭಿಸಿದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್
TV9 Web
| Edited By: |

Updated on: Oct 02, 2022 | 7:54 PM

Share

ಪಟನಾ: ಗಾಂಧಿ ಜಯಂತಿ (Gandhi Jayanti) ಪ್ರಯುಕ್ತ ಇಂದು (ಭಾನುವಾರ) ಬಿಹಾರದಲ್ಲಿ ಚುನಾವಣಾ  ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor)  3,500ಕಿಮೀ ಪಾದಯಾತ್ರೆಯಾದ ಜನ್ ಸುರಾಜ್ (jan suraj)  ಪಾದಯಾತ್ರೆ ಆರಂಭಿಸಿದ್ದಾರೆ. ದೇಶದಲ್ಲಿರುವ ಅತ್ಯಂತ ಬಡ ಮತ್ತು ಹಿಂದುಳಿದ ರಾಜ್ಯವಾದ ಬಿಹಾರದಲ್ಲಿ ವ್ಯವಸ್ಥೆಯನ್ನು ಬದಲಾಯಿಸಲು ನಿರ್ಧರಿಸಲಾಗಿದೆ. ಸಮಾಜದ ನೆರವಿನೊಂದಿಗೆ ಹೊಸ ಮತ್ತು ಉತ್ತಮ ರಾಜಕೀಯ ವ್ಯವಸ್ಥೆಯನ್ನು ರಚಿಸಲು ಮುಂದಿನ 12-15 ತಿಂಗಳುಗಳಲ್ಲಿ ರಾಜ್ಯದ ನಗರಗಳು, ಹಳ್ಳಿಗಳು ಮತ್ತು ಪಟ್ಟಣಗಳಲ್ಲಿ 3500 ಕಿಮೀ ಪಾದಯಾತ್ರೆ ಮೊದಲ ಪ್ರಮುಖ ಹೆಜ್ಜೆಯಾಗಿದೆ ಎಂದು ಕಿಶೋರ್ ಪಾದಯಾತ್ರೆ ಪ್ರಾರಂಭವಾಗುವ ಮೊದಲು ಟ್ವೀಟ್ ಮಾಡಿದ್ದಾರೆ. 1917 ರಲ್ಲಿ ಗಾಂಧಿಯವರು ತಮ್ಮ ಮೊದಲ ಸತ್ಯಾಗ್ರಹ ಚಳುವಳಿಯನ್ನು ಆರಂಭಿಸಿದ ಪಶ್ಚಿಮ ಚಂಪಾರಣ್‌ನ ಭಿತಿಹರ್ವಾದಲ್ಲಿರುವ ಗಾಂಧಿ ಆಶ್ರಮದಿಂದ ಕಿಶೋರ್ ಪಾದಯಾತ್ರೆಯನ್ನು ಪ್ರಾರಂಭಿಸಿದರು. ಕಿಶೋರ್ ಮತ್ತು ಅವರ ಅನುಯಾಯಿಗಳು ಯಾತ್ರೆಯನ್ನು ಪ್ರಾರಂಭಿಸಿದಾಗ ರಸ್ತೆಯಲ್ಲಿ ಜನರು ಅವರನ್ನು ಸ್ವಾಗತಿಸಿದರು.  ಪ್ರಶಾಂತ್ ಕಿಶೋರ್ ಅವರು  ರಾಜಕೀಯ ಪ್ರವೇಶಕ್ಕೆ ಪಾದಯಾತ್ರೆಯನ್ನು ಪೂರ್ವಭಾವಿಯಾಗಿ ನೋಡಲಾಗುತ್ತಿದೆ. ಆದರೆ ಅಂತಹ ಯಾವುದೇ ನಿರ್ಧಾರವನ್ನು ಪ್ರಚಾರದೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಂಡವರು ಮಾತ್ರ ತೆಗೆದುಕೊಳ್ಳಬಹುದು ಎಂದು  ರಾಜಕೀಯ ತಂತ್ರಜ್ಞ ಹೇಳಿದ್ದಾರೆ. ಇತ್ತ ಕಾಂಗ್ರೆಸ್  ಭಾರತ್ ಜೋಡೋ ಯಾತ್ರೆ ಜನಪ್ರಿಯ ಆಗುತ್ತಿರುವ ಹೊತ್ತಲ್ಲೇ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಾದಯಾತ್ರೆ ಆರಂಭವಾಗಿದೆ.

ಶನಿವಾರದ ಹೇಳಿಕೆಯ ಪ್ರಕಾರ, ಕಿಶೋರ್ ಅವರ ಪಾದಯಾತ್ರೆಯು ಮೂರು ಪ್ರಮುಖ ಗುರಿಗಳನ್ನು ಹೊಂದಿದೆ.  ತಳಮಟ್ಟದಲ್ಲಿ ಸರಿಯಾದ ಜನರನ್ನು ಗುರುತಿಸುವುದು ಮತ್ತು ಅವರನ್ನು ಪ್ರಜಾಪ್ರಭುತ್ವದ ವೇದಿಕೆಯ ಮೇಲೆ ತರುವುದೂ ಕೂಡಾ ಇದರಲ್ಲಿ ಸೇರಿದೆ.

ಯಾತ್ರೆಯು ವಿವಿಧ ಕ್ಷೇತ್ರಗಳ ತಜ್ಞರ ಅಭಿಪ್ರಾಯಗಳನ್ನು ಸೇರಿಸುವ ಮೂಲಕ ಬಿಹಾರಕ್ಕೆ ವಿಷನ್ ಡಾಕ್ಯುಮೆಂಟ್ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ