AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ

ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ
ಪಿಣರಾಯಿ ವಿಜಯನ್ & ಹೆಚ್​ಡಿ ದೇವೇಗೌಡ
TV9 Web
| Updated By: Ganapathi Sharma|

Updated on: Oct 20, 2023 | 6:28 PM

Share

ಬೆಂಗಳೂರು, ಅಕ್ಟೋಬರ್ 20: ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರು ನೀಡಿರುವ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಕೇರಳ ಮುಖ್ಯಮಂತ್ರಿ ಒಪ್ಪಿದ್ದಾರೆಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

‘ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿಪಿಐ(ಎಂ) ಎಂದಿಗೂ ಸಂಘ ಪರಿವಾರದ ವಿರುದ್ಧದ ಹೋರಾಟದಲ್ಲಿ ಅಚಲ ಮತ್ತು ಮಣಿಯದ ಶಕ್ತಿಯಾಗಿದೆ. ನಮ್ಮ ನಿಲುವಿನಲ್ಲಿ ಅಸ್ಪಷ್ಟತೆಗೆ ಅವಕಾಶವಿಲ್ಲ’ ಎಂದು ಪಿಣರಾಯಿ ವಿಜಯನ್ ಎಕ್ಸ್​ ಪೋಸ್ಟ್​​​ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿಗೆ ಜೆಡಿಎಸ್​​ನ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ಪಕ್ಷದ ರಾಜ್ಯಾಧ್ಯಕ್ಷ ತಾವು. ತಮ್ಮ ಸಮ್ಮತಿ ಇಲ್ಲದೆ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಂಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ, ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆಗೊಳಿಸಿದ್ದರು.

ಇದನ್ನೂ ಓದಿ: ಯಾವ ಸಭೆಯಲ್ಲೂ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರದ ಸಿಎಂ ಇಬ್ರಾಹಿಂ: ಶಾಸಕ ಎ ಮಂಜು ಬಿಚ್ಚಿಟ್ರು ಹೊಸ ರಹಸ್ಯ

ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ಮೈತ್ರಿ ವಿಚಾರವಾಗಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಇದೇ ವೇಳೆ ಕೇರಳ ಮುಖ್ಯಮಂತ್ರಿಗಳ ಬಗ್ಗೆಯೂ ಪ್ರಸ್ತಾಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!