AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ

ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ
ಪಿಣರಾಯಿ ವಿಜಯನ್ & ಹೆಚ್​ಡಿ ದೇವೇಗೌಡ
TV9 Web
| Edited By: |

Updated on: Oct 20, 2023 | 6:28 PM

Share

ಬೆಂಗಳೂರು, ಅಕ್ಟೋಬರ್ 20: ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರು ನೀಡಿರುವ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಕೇರಳ ಮುಖ್ಯಮಂತ್ರಿ ಒಪ್ಪಿದ್ದಾರೆಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

‘ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿಪಿಐ(ಎಂ) ಎಂದಿಗೂ ಸಂಘ ಪರಿವಾರದ ವಿರುದ್ಧದ ಹೋರಾಟದಲ್ಲಿ ಅಚಲ ಮತ್ತು ಮಣಿಯದ ಶಕ್ತಿಯಾಗಿದೆ. ನಮ್ಮ ನಿಲುವಿನಲ್ಲಿ ಅಸ್ಪಷ್ಟತೆಗೆ ಅವಕಾಶವಿಲ್ಲ’ ಎಂದು ಪಿಣರಾಯಿ ವಿಜಯನ್ ಎಕ್ಸ್​ ಪೋಸ್ಟ್​​​ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿಗೆ ಜೆಡಿಎಸ್​​ನ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ಪಕ್ಷದ ರಾಜ್ಯಾಧ್ಯಕ್ಷ ತಾವು. ತಮ್ಮ ಸಮ್ಮತಿ ಇಲ್ಲದೆ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಂಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ, ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆಗೊಳಿಸಿದ್ದರು.

ಇದನ್ನೂ ಓದಿ: ಯಾವ ಸಭೆಯಲ್ಲೂ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರದ ಸಿಎಂ ಇಬ್ರಾಹಿಂ: ಶಾಸಕ ಎ ಮಂಜು ಬಿಚ್ಚಿಟ್ರು ಹೊಸ ರಹಸ್ಯ

ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ಮೈತ್ರಿ ವಿಚಾರವಾಗಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಇದೇ ವೇಳೆ ಕೇರಳ ಮುಖ್ಯಮಂತ್ರಿಗಳ ಬಗ್ಗೆಯೂ ಪ್ರಸ್ತಾಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ